ಮಡಿಕೇರಿ : ದೈವಾರಾಧನೆ ಹಿಂದೂ ಸಂಪ್ರದಾಯವಲ್ಲವೆಂದು ಹೇಳಿಕೆ ನೀಡುವ ಮೂಲಕ ನಟ ಚೇತನ್ ಲಕ್ಷಾಂತರ ಭಕ್ತರ ಮನಸ್ಸಿಗೆ ನೋವುಂಟು ಮಾಡಿದ್ದಾರೆ ಮತ್ತು ಸಮಾಜದಲ್ಲಿ ಗೊಂದಲ ಸೃಷ್ಟಿಸಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೊಡಗು ಯುವಸೇನೆ ಮಡಿಕೇರಿಯಲ್ಲಿ ದೂರು ದಾಖಲಿಸಿದೆ.
ಯುವಸೇನೆಯ ಜಿಲ್ಲಾ ಉಪಾಧ್ಯಕ್ಷ ನಡುಮುಟ್ಲು ಪ್ರವೀಣ್ ಅವರು ಡಿವೈಎಸ್ಪಿ ಗೆ ದೂರು ಸಲ್ಲಿಸಿ ಚೇತನ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ನಿರ್ದೇಶಕ ರಿಷಬ್ ಶೆಟ್ಟಿ ನಿರ್ದೇಶನದ ದೈವಾರಾಧನೆಯ ಕಥೆಯಾಧಾರಿತ ಕಾಂತಾರ ಚಿತ್ರ ಹಾದಿ ತಪ್ಪುತ್ತಿರುವ ಯುವ ಜನಾಂಗಕ್ಕೆ ಮಾರ್ಗದರ್ಶನ ಮಾಡುವಲ್ಲಿ ಯಶಸ್ವಿಯಾಗಿದೆ ಮತ್ತು ದೈವಶಕ್ತಿಯನ್ನು ಪ್ರತಿಬಿಂಬಿಸಿದೆ. ಚಿತ್ರ ಲಕ್ಷಾಂತರ ಭಕ್ತರ ಮನಸೂರೆಗೊಳ್ಳುತ್ತಿರುವ ಹೊತ್ತಿನಲ್ಲೇ ನಟ ಚೇತನ್ ದೈವಾರಾಧನೆಯ ಕುರಿತು ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಪ್ರವೀಣ್ ಅಸಮಾಧಾನ ವ್ಯಕ್ತಪಡಿಸಿದರು.
ಯವಸೇನೆಯ ಮುಖಂಡ ಕುಲ್ದೀಪ್ ಪೂಣಚ್ಚ ಕೂಡ ಚೇತನ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…
ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…
ನವದೆಹಲಿ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991…
ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…
ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…
ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…