ಜಿಲ್ಲೆಗಳು

ಹನೂರು ವಿಧಾನಸಬಾ ಕ್ಷೇತ್ರಕ್ಕೆ ಹೆಚ್ಚುವರಿ ಬಸ್‌ ವ್ಯವಸ್ಥೆ : ಸಚಿವ ಶ್ರೀರಾಮುಲು

ಹನೂರು : ನೂತನವಾಗಿ 620 ಕೆಎಸ್‌ಆರ್‌ಟಿಸಿ ಬಸ್ ಗಳನ್ನು ಖರೀದಿ ಮಾಡಲಾಗುತ್ತಿದ್ದು ಬಸ್ ಗಳು ಬಂದ ನಂತರ ಹನೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚಿನ ಬಸ್ ವ್ಯವಸ್ಥೆ ಕಲ್ಪಿಸಲಾಗುವುದೆಂದು ಸಾರಿಗೆ ಸಚಿವ ಶ್ರೀರಾಮುಲು ತಿಳಿಸಿದರು.

ವಿಧಾನಸಭಾ ಅಧಿವೇಶನದಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಆರ್ ನರೇಂದ್ರ ರವರ ಪ್ರಶ್ನೆಗೆ ಸಚಿವ ಶ್ರೀರಾಮುಲು 179 ಗ್ರಾಮಗಳ ಪೈಕಿ 174 ಗ್ರಾಮಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಉತ್ತರಿಸಿದ್ದರು. ಈ ಉತ್ತರ ಅಸಮರ್ಪಕವಾಗಿದ್ದರಿಂದ ಶಾಸಕ ನರೇಂದ್ರ ಮಾತನಾಡಿ ಹನೂರು ವಿಧಾನಸಭಾ ಕ್ಷೇತ್ರದಲ್ಲಿ 480 ಹಳ್ಳಿಗಳಿವೆ. 179 ಕಂದಾಯ ಗ್ರಾಮಗಳಿದ್ದು ಇವುಗಳಲ್ಲಿ 174 ಗ್ರಾಮಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಿಲಾಗಿದೆ ಎಂದು ಉತ್ತರಿಸಿದ್ದಾರೆ. 174 ಗ್ರಾಮಗಳಿಗೂ ಸಹ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸದೆ ಇರುವುದರಿಂದ ಪದೇ ಪದೇ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ ಇದರಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗುತ್ತಿದೆ. 62 ಹಾಡಿಗಳಿಗೆ ರಸ್ತೆ ಸಂಪರ್ಕ ಇಲ್ಲದೆ ಇರುವುದರಿಂದ ಆಟೋ ದ್ವಿಚಕ್ರ ವಾಹನ ಸೇರಿದಂತೆ ಯಾವ ವಾಹನಗಳ ಸಂಪರ್ಕವೂ ಇಲ್ಲ, ಇಲ್ಲಿನ ಗ್ರಾಮಗಳ ಜನರಿಗೆ ಆರೋಗ್ಯ ಹದಗೆಟ್ಟರೆ ಡೋಲಿ ಮುಖಾಂತರ ಸಾಗಿಸುವಂತಹ ಪರಿಸ್ಥಿತಿ ಬಂದಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆಯವರ ಗಮನ ಸೆಳೆದರು.

ಈ ವೇಳೆ ಸಚಿವ ಶ್ರೀರಾಮುಲು ಮಾತನಾಡಿ ಹನೂರು ವಿಧಾನಸಭಾ ಕ್ಷೇತ್ರದ ಲೋಕನಹಳ್ಳಿ ಹನೂರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿರುವುದು ಗಮನಕ್ಕೆ ಬಂದಿದೆ ಈಗಾಗಲೇ ಸಮಸ್ಯೆಯನ್ನು ಬಗೆಹರಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ನೂತನ ಬಸ್ ಗಳು ಬಂದ ನಂತರ ಹನೂರು ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

4 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

5 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

6 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

8 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

14 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

20 hours ago