ಜಿಲ್ಲೆಗಳು

ಆಡಳಿತ ವರ್ಗದ ಬೇಜವಾಬ್ದಾರಿತನಕ್ಕೆ ಮೈಸೂರು ನಗರವೇ ಸಾಕ್ಷಿ

ರಾಜ್ಯದ ವ್ಯವಸ್ಥಿತ ನಗರಗಳ ಪೈಕಿ ಮುಂಚೂಣಿಯಲ್ಲಿದ್ದ ಮೈಸೂರು ನಗರ, ಇಂದಿನ ಆಡಳಿತಾರೂಢ ಸರ್ಕಾರದ ಬೇಜವಾಬ್ದಾರಿ ಹಾಗೂ ಜಿಲ್ಲಾಡಳಿತದ ಅಸಡ್ಡೆಗೆ ಸಿಲುಕಿ ನರಳುತ್ತಿದೆ.

ಮೈಸೂರು ನಿರ್ಮಾತೃ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಟಿತ್ವದ ಫಲವಾಗಿ ಸುಸಜ್ಜಿತ ಮೈಸೂರು ನಗರ ನಿರ್ಮಾಣಗೊಂಡಿದ್ದುದು ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ. ಅಂತಹ ನಗರ ಇಂದು ಹಾಳುಹಂಪೆ ಮಾದರಿಯತ್ತ ಹೊರಳುತ್ತಿರುವುದು ಆಡಳಿತ ವ್ಯವಸ್ಥೆಯ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ.

ಬದಲಾದ ಕಾಲಘಟ್ಟದಲ್ಲಿ ಅಭಿವೃದ್ದಿಯ ಪತದತ್ತ ಸಾಗಬೇಕಿದ್ದ ಮೈಸೂರು ನಗರದ ರಸ್ತೆಗಳು ಬೇಜವಾಬ್ದಾರಿ ಆಡಳಿತ ವ್ಯವಸ್ಥೆಗೆ ಕನ್ನಡಿ ಹಿಡಿದಿದ್ದರೆ, ಮುಂದಾಲೋಚನೆಯೇ ಇಲ್ಲದೆ ಮಾಡಿದ ಯೋಜನೆಗಳು ಮೈಸೂರು ನಗರವನ್ನು ನೀರಿನಲ್ಲಿ ಮುಳುಗಿಸುತ್ತಿರುವುದು ಇತ್ತೀಚೆಗೆ ಸುರಿದ ಮಳೆಯಿಂದ ಸಾಬೀತಾಗಿದೆ.

ಸರ್ಕಾರದಲ್ಲಿ ಹಣವಿದ್ದು, ಯಾವುದೇ ರೀತಿಯ ಕೊರತೆ ಇಲ್ಲ ಎಂದು ಬೊಬ್ಬೆ ಹೊಡೆಯುವ ಆಡಳಿತಾರೂಢ ಪಕ್ಷಗಳ ಸಚಿವರು, ಶಾಸಕರು ಮೈಸೂರು ನಗರದ ಮೋರಿಗಳನ್ನು ಸ್ವಚ್ಛ ಮಾಡಿಸಲು ಸಾಧ್ಯವಾಗಿಲ್ಲದಿರುವುದು, ಇವರ ಆಡಳಿತ ವೈಖರಿಯ ವೈಫಲ್ಯಕ್ಕೆ ಸಾಕ್ಷಿಯಾಗಿದೆ.

ಈ ಬಾರಿ ಅದ್ದೂರಿ ದಸರಾ ಎಂದು ಘೋಷಿಸಲಾಗಿದ್ದು, ಕೋಟ್ಯಂತರ ರೂ.ಗಳನ್ನು ಅದಕ್ಕಾಗಿ ವ್ಯಯಿಸಲಾಗುತ್ತಿದೆ. ಆದರೆ, ಮೈಸೂರು ನಗರದ ಹೃದಯಭಾಗದಲ್ಲಿರುವ ರಸ್ತೆಗಳು ಆಡಳಿತ ವ್ಯವಸ್ಥೆಯ ಕರ್ತವ್ಯಲೋಪಕ್ಕೆ ಸಾಕ್ಷಿಯಾಗಿದ್ದು, ಅದ್ದೂರಿ ದಸರಾ ಎಂಬುದು ಆಡಂಬರದ ಹೇಳಿಕೆಯಾಗಿದೆ.

ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದರೂ, ಈವರೆಗೆ ಮೈಸೂರಿನ ಹದಗೆಟ್ಟ ರಸ್ತೆಗಳನ್ನು ಸರಿಪಡಿಸುವ ಗೋಜಿಗೆ ಹೋಗದಿರುವುದು ಅಧಿಕಾರಿ ವರ್ಗ ಹಾಗೂ ಆಡಳಿತ ವ್ಯವಸ್ಥೆಯ ನಡುವೆ ಹೊಂದಾಣಿಕೆ ಇಲ್ಲದಿರುವುದನ್ನು ಎತ್ತಿ ತೋರುತ್ತಿದೆ.

ಈ ಬಗ್ಗೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ತತ್‌ಕ್ಷಣ ಕ್ರಮ ತೆಗೆದುಕೊಳ್ಳದಿದ್ದಲ್ಲಿ ದಸರಾ ಮಹೋತ್ಸವದ ಈ ಹೊತ್ತಿನಲ್ಲಿ ಮೈಸೂರಿನ ಮಾನ ವಿಶ್ವದೆಲ್ಲೆಡೆ ಹರಾಜಾಗುವುದು ನಿಶ್ಚಿತ. ಆದ್ದರಿಂದ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಮೈಸೂರು ನಗರದ ಅವ್ಯವಸ್ಥೆಯನ್ನು ಕೂಡಲೇ ಸರಿಪಡಿಸಬೇಕು. ಒಂದು ವೇಳೆ ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳದಿದ್ದಲ್ಲಿ ಹೋರಾಟ ಅನಿವಾರ್ಯವಾಗಲಿದೆ ಎಂದು ಅನಿಕೇತನ ಸೇವಾ ಟ್ರಸ್ಟ್ ನ  ಅಧ್ಯಕ್ಷರಾದ ಕೆ ವಿ ಮಲ್ಲೇಶ್ ಅಭಿಪ್ರಾಯಪಟ್ಟಿದ್ದಾರೆ.

andolanait

Recent Posts

ರಾಜ್ಯ ಬಜೆಟ್; ಕೊಡಗು ಜಿಲ್ಲೆಯಲ್ಲಿವೆ ಹತ್ತಾರು ನಿರೀಕ್ಷೆ

ನವೀನ್ ಡಿಸೋಜ ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.೬ರಂದು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಸಹಜವಾಗಿಯೇ ಕೊಡಗು ಜಿಲ್ಲೆಯಲ್ಲಿಯೂ ಹತ್ತಾರು ನಿರೀಕ್ಷೆಗಳಿದ್ದು,…

2 hours ago

ರಾಜಕೀಯದಿಂದ ದೂರವಾಗಿ ಕೃಷಿಯಲ್ಲಿ ಸಾಧಿಸಿದ ರೈತ

ಮಹೇಂದ್ರ ಹಸಗೂಲಿ ಸೂರ್ಯಕಾಂತಿ, ಬಾಳೆ, ಆಲೂಗಡ್ಡೆ ಅರಿಶಿನ, ಈರುಳ್ಳಿ ಬೆಳೆದು ಸೂರ್ತಿಯಾದ ಎಚ್.ಎಂ.ನಂದೀಶ್ ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದ ಎಚ್.…

2 hours ago

ಬಜೆಟ್; ಚಾಮರಾಜನಗರ ಜಿಲ್ಲೆಯ ಜನರಿಗಿದೆ ಬಹಳಷ್ಟು ನಿರೀಕ್ಷೆ

ಪ್ರಸಾದ್ ಲಕ್ಕೂರು ಚಾ.ನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ, ಎಂಸಿಡಿಸಿಸಿ ಬ್ಯಾಂಕ್ ರಚನೆ ಸೇರಿ ಹಲವು ಆಶಾಭಾವನೆ ಚಾಮರಾಜನಗರ: ರಾಜ್ಯ…

2 hours ago

ಕ್ರೀಡಾಂಗಣ ಓಕೆ.. ಕೆಎಸ್‌ಐಸಿ ಜಾಗವೇ ಯಾಕೆ?

ಜಾಗದ ವಿಚಾರವಾಗಿ ಅಭಿಪ್ರಾಯ ಹಂಚಿಕೊಂಡ ಸಾರ್ವಜನಿಕರು, ರೈತರು, ಮುಖಂಡರು ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು: ತಿ.ನರಸೀಪುರ ಪಟ್ಟಣದಲ್ಲಿ ಕೆಎಸ್‌ಐಸಿಗೆ ಸೇರಿದ ಜಾಗದಲ್ಲಿ…

2 hours ago

ಖಮೇನಿ ಹತ್ಯೆಯಿಂದ ಮಧ್ಯಪ್ರಾಚ್ಯದಲ್ಲಿ ಅರಾಜಕತೆ?

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಹತರಾಗಿದ್ದಾರೆ. ಶನಿವಾರ ನಡೆದ ದಾಳಿಯಲ್ಲಿ ಎಂಬತ್ತಾರು ವರ್ಷದ…

2 hours ago

ಭಾರತದ ಎದುರಿಗಿರುವ ಮೂರು ಸಂಕಟಗಳು

ಮಾಧ್ಯಮ ತಜ್ಞ ಶೇಷಾದ್ರಿ ಗಂಜೂರು ವಿಶ್ಲೇಷಣೆ ಇತ್ತೀಚೆಗೆ ನ್ಯೂಸ್ ಚಾನಲ್‌ಗಳನ್ನು ನೋಡುತ್ತಿದ್ದರೆ ಮಿಡ್ಲ್ ಈಸ್ಟ್ ಅಂದರೆ ಮಧ್ಯ ಪ್ರಾಚ್ಯದ ಗಲಾಟೆಗಳೇ ಕಾಣ್ತಿವೆ.…

2 hours ago