ಜಿಲ್ಲೆಗಳು

ಆಡಳಿತ ವರ್ಗದ ಬೇಜವಾಬ್ದಾರಿತನಕ್ಕೆ ಮೈಸೂರು ನಗರವೇ ಸಾಕ್ಷಿ

ರಾಜ್ಯದ ವ್ಯವಸ್ಥಿತ ನಗರಗಳ ಪೈಕಿ ಮುಂಚೂಣಿಯಲ್ಲಿದ್ದ ಮೈಸೂರು ನಗರ, ಇಂದಿನ ಆಡಳಿತಾರೂಢ ಸರ್ಕಾರದ ಬೇಜವಾಬ್ದಾರಿ ಹಾಗೂ ಜಿಲ್ಲಾಡಳಿತದ ಅಸಡ್ಡೆಗೆ ಸಿಲುಕಿ ನರಳುತ್ತಿದೆ.

ಮೈಸೂರು ನಿರ್ಮಾತೃ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಟಿತ್ವದ ಫಲವಾಗಿ ಸುಸಜ್ಜಿತ ಮೈಸೂರು ನಗರ ನಿರ್ಮಾಣಗೊಂಡಿದ್ದುದು ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ. ಅಂತಹ ನಗರ ಇಂದು ಹಾಳುಹಂಪೆ ಮಾದರಿಯತ್ತ ಹೊರಳುತ್ತಿರುವುದು ಆಡಳಿತ ವ್ಯವಸ್ಥೆಯ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ.

ಬದಲಾದ ಕಾಲಘಟ್ಟದಲ್ಲಿ ಅಭಿವೃದ್ದಿಯ ಪತದತ್ತ ಸಾಗಬೇಕಿದ್ದ ಮೈಸೂರು ನಗರದ ರಸ್ತೆಗಳು ಬೇಜವಾಬ್ದಾರಿ ಆಡಳಿತ ವ್ಯವಸ್ಥೆಗೆ ಕನ್ನಡಿ ಹಿಡಿದಿದ್ದರೆ, ಮುಂದಾಲೋಚನೆಯೇ ಇಲ್ಲದೆ ಮಾಡಿದ ಯೋಜನೆಗಳು ಮೈಸೂರು ನಗರವನ್ನು ನೀರಿನಲ್ಲಿ ಮುಳುಗಿಸುತ್ತಿರುವುದು ಇತ್ತೀಚೆಗೆ ಸುರಿದ ಮಳೆಯಿಂದ ಸಾಬೀತಾಗಿದೆ.

ಸರ್ಕಾರದಲ್ಲಿ ಹಣವಿದ್ದು, ಯಾವುದೇ ರೀತಿಯ ಕೊರತೆ ಇಲ್ಲ ಎಂದು ಬೊಬ್ಬೆ ಹೊಡೆಯುವ ಆಡಳಿತಾರೂಢ ಪಕ್ಷಗಳ ಸಚಿವರು, ಶಾಸಕರು ಮೈಸೂರು ನಗರದ ಮೋರಿಗಳನ್ನು ಸ್ವಚ್ಛ ಮಾಡಿಸಲು ಸಾಧ್ಯವಾಗಿಲ್ಲದಿರುವುದು, ಇವರ ಆಡಳಿತ ವೈಖರಿಯ ವೈಫಲ್ಯಕ್ಕೆ ಸಾಕ್ಷಿಯಾಗಿದೆ.

ಈ ಬಾರಿ ಅದ್ದೂರಿ ದಸರಾ ಎಂದು ಘೋಷಿಸಲಾಗಿದ್ದು, ಕೋಟ್ಯಂತರ ರೂ.ಗಳನ್ನು ಅದಕ್ಕಾಗಿ ವ್ಯಯಿಸಲಾಗುತ್ತಿದೆ. ಆದರೆ, ಮೈಸೂರು ನಗರದ ಹೃದಯಭಾಗದಲ್ಲಿರುವ ರಸ್ತೆಗಳು ಆಡಳಿತ ವ್ಯವಸ್ಥೆಯ ಕರ್ತವ್ಯಲೋಪಕ್ಕೆ ಸಾಕ್ಷಿಯಾಗಿದ್ದು, ಅದ್ದೂರಿ ದಸರಾ ಎಂಬುದು ಆಡಂಬರದ ಹೇಳಿಕೆಯಾಗಿದೆ.

ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದರೂ, ಈವರೆಗೆ ಮೈಸೂರಿನ ಹದಗೆಟ್ಟ ರಸ್ತೆಗಳನ್ನು ಸರಿಪಡಿಸುವ ಗೋಜಿಗೆ ಹೋಗದಿರುವುದು ಅಧಿಕಾರಿ ವರ್ಗ ಹಾಗೂ ಆಡಳಿತ ವ್ಯವಸ್ಥೆಯ ನಡುವೆ ಹೊಂದಾಣಿಕೆ ಇಲ್ಲದಿರುವುದನ್ನು ಎತ್ತಿ ತೋರುತ್ತಿದೆ.

ಈ ಬಗ್ಗೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ತತ್‌ಕ್ಷಣ ಕ್ರಮ ತೆಗೆದುಕೊಳ್ಳದಿದ್ದಲ್ಲಿ ದಸರಾ ಮಹೋತ್ಸವದ ಈ ಹೊತ್ತಿನಲ್ಲಿ ಮೈಸೂರಿನ ಮಾನ ವಿಶ್ವದೆಲ್ಲೆಡೆ ಹರಾಜಾಗುವುದು ನಿಶ್ಚಿತ. ಆದ್ದರಿಂದ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಮೈಸೂರು ನಗರದ ಅವ್ಯವಸ್ಥೆಯನ್ನು ಕೂಡಲೇ ಸರಿಪಡಿಸಬೇಕು. ಒಂದು ವೇಳೆ ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳದಿದ್ದಲ್ಲಿ ಹೋರಾಟ ಅನಿವಾರ್ಯವಾಗಲಿದೆ ಎಂದು ಅನಿಕೇತನ ಸೇವಾ ಟ್ರಸ್ಟ್ ನ  ಅಧ್ಯಕ್ಷರಾದ ಕೆ ವಿ ಮಲ್ಲೇಶ್ ಅಭಿಪ್ರಾಯಪಟ್ಟಿದ್ದಾರೆ.

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

2 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

2 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

2 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

5 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

5 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

5 hours ago