ಜಿಲ್ಲೆಗಳು

ಆಡಳಿತ ವರ್ಗದ ಬೇಜವಾಬ್ದಾರಿತನಕ್ಕೆ ಮೈಸೂರು ನಗರವೇ ಸಾಕ್ಷಿ

ರಾಜ್ಯದ ವ್ಯವಸ್ಥಿತ ನಗರಗಳ ಪೈಕಿ ಮುಂಚೂಣಿಯಲ್ಲಿದ್ದ ಮೈಸೂರು ನಗರ, ಇಂದಿನ ಆಡಳಿತಾರೂಢ ಸರ್ಕಾರದ ಬೇಜವಾಬ್ದಾರಿ ಹಾಗೂ ಜಿಲ್ಲಾಡಳಿತದ ಅಸಡ್ಡೆಗೆ ಸಿಲುಕಿ ನರಳುತ್ತಿದೆ.

ಮೈಸೂರು ನಿರ್ಮಾತೃ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಟಿತ್ವದ ಫಲವಾಗಿ ಸುಸಜ್ಜಿತ ಮೈಸೂರು ನಗರ ನಿರ್ಮಾಣಗೊಂಡಿದ್ದುದು ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ. ಅಂತಹ ನಗರ ಇಂದು ಹಾಳುಹಂಪೆ ಮಾದರಿಯತ್ತ ಹೊರಳುತ್ತಿರುವುದು ಆಡಳಿತ ವ್ಯವಸ್ಥೆಯ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ.

ಬದಲಾದ ಕಾಲಘಟ್ಟದಲ್ಲಿ ಅಭಿವೃದ್ದಿಯ ಪತದತ್ತ ಸಾಗಬೇಕಿದ್ದ ಮೈಸೂರು ನಗರದ ರಸ್ತೆಗಳು ಬೇಜವಾಬ್ದಾರಿ ಆಡಳಿತ ವ್ಯವಸ್ಥೆಗೆ ಕನ್ನಡಿ ಹಿಡಿದಿದ್ದರೆ, ಮುಂದಾಲೋಚನೆಯೇ ಇಲ್ಲದೆ ಮಾಡಿದ ಯೋಜನೆಗಳು ಮೈಸೂರು ನಗರವನ್ನು ನೀರಿನಲ್ಲಿ ಮುಳುಗಿಸುತ್ತಿರುವುದು ಇತ್ತೀಚೆಗೆ ಸುರಿದ ಮಳೆಯಿಂದ ಸಾಬೀತಾಗಿದೆ.

ಸರ್ಕಾರದಲ್ಲಿ ಹಣವಿದ್ದು, ಯಾವುದೇ ರೀತಿಯ ಕೊರತೆ ಇಲ್ಲ ಎಂದು ಬೊಬ್ಬೆ ಹೊಡೆಯುವ ಆಡಳಿತಾರೂಢ ಪಕ್ಷಗಳ ಸಚಿವರು, ಶಾಸಕರು ಮೈಸೂರು ನಗರದ ಮೋರಿಗಳನ್ನು ಸ್ವಚ್ಛ ಮಾಡಿಸಲು ಸಾಧ್ಯವಾಗಿಲ್ಲದಿರುವುದು, ಇವರ ಆಡಳಿತ ವೈಖರಿಯ ವೈಫಲ್ಯಕ್ಕೆ ಸಾಕ್ಷಿಯಾಗಿದೆ.

ಈ ಬಾರಿ ಅದ್ದೂರಿ ದಸರಾ ಎಂದು ಘೋಷಿಸಲಾಗಿದ್ದು, ಕೋಟ್ಯಂತರ ರೂ.ಗಳನ್ನು ಅದಕ್ಕಾಗಿ ವ್ಯಯಿಸಲಾಗುತ್ತಿದೆ. ಆದರೆ, ಮೈಸೂರು ನಗರದ ಹೃದಯಭಾಗದಲ್ಲಿರುವ ರಸ್ತೆಗಳು ಆಡಳಿತ ವ್ಯವಸ್ಥೆಯ ಕರ್ತವ್ಯಲೋಪಕ್ಕೆ ಸಾಕ್ಷಿಯಾಗಿದ್ದು, ಅದ್ದೂರಿ ದಸರಾ ಎಂಬುದು ಆಡಂಬರದ ಹೇಳಿಕೆಯಾಗಿದೆ.

ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದರೂ, ಈವರೆಗೆ ಮೈಸೂರಿನ ಹದಗೆಟ್ಟ ರಸ್ತೆಗಳನ್ನು ಸರಿಪಡಿಸುವ ಗೋಜಿಗೆ ಹೋಗದಿರುವುದು ಅಧಿಕಾರಿ ವರ್ಗ ಹಾಗೂ ಆಡಳಿತ ವ್ಯವಸ್ಥೆಯ ನಡುವೆ ಹೊಂದಾಣಿಕೆ ಇಲ್ಲದಿರುವುದನ್ನು ಎತ್ತಿ ತೋರುತ್ತಿದೆ.

ಈ ಬಗ್ಗೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ತತ್‌ಕ್ಷಣ ಕ್ರಮ ತೆಗೆದುಕೊಳ್ಳದಿದ್ದಲ್ಲಿ ದಸರಾ ಮಹೋತ್ಸವದ ಈ ಹೊತ್ತಿನಲ್ಲಿ ಮೈಸೂರಿನ ಮಾನ ವಿಶ್ವದೆಲ್ಲೆಡೆ ಹರಾಜಾಗುವುದು ನಿಶ್ಚಿತ. ಆದ್ದರಿಂದ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಮೈಸೂರು ನಗರದ ಅವ್ಯವಸ್ಥೆಯನ್ನು ಕೂಡಲೇ ಸರಿಪಡಿಸಬೇಕು. ಒಂದು ವೇಳೆ ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳದಿದ್ದಲ್ಲಿ ಹೋರಾಟ ಅನಿವಾರ್ಯವಾಗಲಿದೆ ಎಂದು ಅನಿಕೇತನ ಸೇವಾ ಟ್ರಸ್ಟ್ ನ  ಅಧ್ಯಕ್ಷರಾದ ಕೆ ವಿ ಮಲ್ಲೇಶ್ ಅಭಿಪ್ರಾಯಪಟ್ಟಿದ್ದಾರೆ.

andolanait

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

8 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

9 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

10 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

15 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

22 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

22 hours ago