ಜಿಲ್ಲೆಗಳು

ಕೊಡಗು ಜಿಲ್ಲೆಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ

ಅಗತ್ಯ ಕ್ರಮ ಕೈಗೊಳ್ಳಲು ಮುಂದಾದ ಜಿಲ್ಲಾಡಳಿತ / ಸೋಂಕಿತ ಹಂದಿಗಳ ವಧೆಗೆ ಸೂಚನೆ

ಮಡಿಕೇರಿ: ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದ್ದು, ಹಂದಿ ಸಾಕಾಣಿಕಾ ಕೇಂದ್ರದಲ್ಲಿರುವ ಹಂದಿಗಳಲ್ಲಿ ಜ್ವರ ಇರುವುದು ದೃಢಪಟ್ಟಿದೆ.

ಸೋಂಕು ಹರಡುವುದನ್ನು ತಡೆಗಟ್ಟಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಲು ಆದೇಶ ಹೊರಡಿಸಿದೆ. ಈ ಹಂದಿ ಸಾಕಾಣಿಕ ಕೇಂದ್ರದ ೧ ಕಿ.ಮೀ ವ್ಯಾಪ್ತಿಯನ್ನು ರೋಗ ಪೀಡಿತ ವಲಯವೆಂದು ಮತ್ತು ೧೦ ಕಿ.ಮೀ ವ್ಯಾಪ್ತಿಯನ್ನು ಜಾಗೃತ ವಲಯವೆಂದು ಘೋಷಿಸಲಾಗಿದೆ.

ಸೋಂಕಿಗೆ ತುತ್ತಾಗಿರುವ ಹಂದಿಗಳನ್ನು ವಧೆ ಮಾಡಿ ವೈಜ್ಞಾನಿಕ ರೂಪದಲ್ಲಿ ಸಂಸ್ಕಾರ ಮಾಡಬೇಕೆಂದು ಆದೇಶಿಸಲಾಗಿದೆ. ರೋಗ ಪೀಡಿತ ಹಂದಿ ಫಾರಂನಿಂದ ೧೦ ಕಿ.ಮೀ. ಒಳಗಿನ ಎಲ್ಲಾ ಹಂದಿ ಸಾಕಾಣೆದಾರರು ಹೊಸದಾಗಿ ಹಂದಿಗಳನ್ನು ಬೇರೆ ಕಡೆಯಿಂದ ಕೊಂಡು ತರಬಾರದು. ಹಂದಿಗಳ ಮತ್ತು ಹಂದಿ ಸಾಕಾಣಿಕೆ ಕೇಂದ್ರಗಳಲ್ಲಿನ ಕೆಲಸಗಾರರ ಸಂಚಾರ ನಿಯಂತ್ರಿಸಬೇಕು. ಹಂದಿಗಳಿಗೆ ಹೋಟೆಲ್ ಹಾಸ್ಟೆಲ್‌ಗಳಲ್ಲಿನ ಮಿಕ್ಕಿದ ಆಹಾರ ಸಂಗ್ರಹಿಸಿ ತಿನ್ನಿಸುವವರು ಕಡ್ಡಾಯವಾಗಿ ಅಂತಹ ಆಹಾರ ಪದಾರ್ಥವನ್ನು ಕನಿಷ್ಟ ೨೦ ನಿಮಿಷಗಳ ಕಾಲ ಬೇಯಿಸಿ ಕೊಡಬೇಕೆಂದು ಸೂಚಿಸಲಾಗಿದೆ.

ಹಂದಿ ಮಾಂಸದ ಹೋಟೆಲ್ ಮತ್ತು ಹಂದಿ ಮಾಂಸ ಮಾರಾಟ ಮಾಡುವ ಅಂಗಡಿಯಲ್ಲಿನ ಉಳಿಕೆ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಹಂದಿಗಳಿಗೆ ನೀಡಬಾರದು. ಸಂದರ್ಶಕರಿಗೆ ಹಂದಿ ಫಾರಂ ಒಳಗೆ ಪ್ರವೇಶಕ್ಕೆ ಅವಕಾಶ ನೀಡಬಾರದು. ಹಂದಿ ಆಹಾರ, ಇತರೆ ಸಾಮಗ್ರಿಗಳನ್ನು ಫಾರಂಗೆ ಸಾಗಿಸುವ ವಾಹನಗಳನ್ನು ಸೋಂಕು ನಿವಾರಕ ದ್ರಾವಣದಿಂದ ಶುಚಿಗೊಳಿಸಬೇಕು. ಹಂದಿ ಫಾರಂನ ಕೆಲಸಗಾರರು ಬೇರೆ ಫಾರಂಗೆ ಹೋಗಬಾರದೆಂದು ಸ್ಪಷ್ಟ ನಿರ್ದೇಶನವನ್ನು ನೀಡಲಾಗಿದೆ.

ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ನಿಗಾವಹಿಸಿ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳಿಗೆ ಸಹಕಾರ ನೀಡಿ ಆಫ್ರಿಕನ್ ಹಂದಿ ಜ್ವರದ ಹತೋಟಿಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ದಂಡಾಧಿಕಾರಿಗಳು ಸೂಚಿಸಿದ್ದಾರೆ.

andolana

Recent Posts

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

54 mins ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

56 mins ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

1 hour ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

1 hour ago

ಫೆ.17ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್‌ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿಗೆ ಆಹ್ವಾನ

ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್‌ ರೆಹಮಾನ್‌ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…

3 hours ago

ಮಾದಪ್ಪನ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ…

3 hours ago