ಮೈಸೂರು : ಕಳೆದ ಎರಡು ದಿನಗಳ ಹಿಂದೆಯಷ್ಟೇ ನಂಜನಗೂಡು ಮತ್ತು ಹೆಚ್.ಡಿ.ಕೋಟೆ ತಾಲೂಕಿನ ಸುತ್ತ ಕಾಣಿಸಿಕೊಂಡಿದ್ದ ನರಭಕ್ಷಕ ಹುಲಿಯನ್ನು ಹಿಡಯುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಲಿಯ ಓಡಾಟದಿಂದ ಕಂಗಾಲಾಗಿದ್ದ ಜನರು ನಿಟ್ಟುಸಿರು ಬಿಟ್ಟಿದ್ದರು. ಆದರೆ ದೀಗ ಮೈಸೂರು ವ್ಯಾಪ್ತಿಗೆ ಸೇರಿದ ಗ್ರಾಮಗಳ ಸುತ್ತಾ-ಮುತ್ತ ಹುಲಿಯೊಂದು ಕಾಣಿಸಿಕೊಂಡಿದೆ.
ಮೈಸೂರಿನ ಚಿಕ್ಕಕಾನ್ಯ, ದೊಡ್ಡಕಾನ್ಯ, ಬ್ಯಾತಹಳ್ಳಿ, ಸಿಂಧುವಳ್ಳಿ, ಗ್ರಾಮಗಳಲ್ಲಿ ಹುಲಿ ಕಾಣಿಸಿಕೊಂಡಿದ್ದು, ಗ್ರಾಮದ ಜನತೆಯ ನಿದ್ದೆಗೆಡಿಸಿದೆ. ಗ್ರಾಮದ ಸುತ್ತಾ-ಮುತ್ತ ಎಲ್ಲಾದರೂ ಹುಲಿ ಕಾಣಿಸಿಕೊಂಡಲ್ಲಿ ತಕ್ಷಣ ಅರಣ್ಯ ಇಲಾಕೆಗೆ ಮಾಹಿತಿ ನೀಡುವಂತೆ ಅರಣ್ಯಾಧಿಕಾರಿಗಳು ಗ್ರಾಮಸ್ಥರಿಗೆ ತಿಳಿಸಿದ್ದಾರೆ.
ಮೂರು ಹುಲಿಗಳ ದರ್ಶನ:
ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರು ಕೆಲಸ ಮುಗಿಸಿಕೊಂಡು ಹೋಗುವ ಸಂದರ್ಭದಲ್ಲಿ ಹುಲಿ ಕಾಣಿಸಿಕೊಂಡಿದೆ. ತಾಂಡ್ಯಾ ಹಾಗೂ ಅಡಕನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ, ರಾತ್ರಿ ಪಾಳಿಯ ಕೆಲಸ ಮುಗಿಸಿ ಹೋಗುವಾಗ ಹುಲಿ ಪ್ರತ್ಯಕ್ಷವಾಗಿದೆ. ಆದರೇ ಕೆಲವು ಕಾರ್ಮಿಕರು ಹೇಳುವ ಪ್ರಕಾರ ರಾತ್ರಿ ಒಟ್ಟು ಮೂರು ಹುಲಿಗಳು ಕಾಣಿಸಿಕೊಂಡಿತ್ತು ಎನ್ನುತ್ತಾರೆ. ಇದೀಗ ಹುಲಿ ಕಾಣಿಸಿಕೊಂಡ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು. ಅರಣ್ಯಾಧಿಕಾರಿಗಳು ಹುಲಿಯ ಜಾಡನ್ನು ಹಿಡಿದು ಸೆರೆ ಹಿಡಿಯಲು ಮುಂದಾಗಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…