ಮೈಸೂರು: ಗುಂಬಜ್ ತೆರವಿಗೆ ನಾನು ತೀರ್ಮಾನ ಮಾಡಿದ್ದೇನೆ. ಅದನ್ನು ಜಿಲ್ಲಾಡಳಿತಕ್ಕೆ ಕೇಳುವ ಅವಶ್ಯಕತೆ ಇಲ್ಲ ಎಂದು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯ ಪ್ರತಾಪ್ ಸಿಂಹ ತಿಳಿಸಿದರು.
ಮೈಸೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇದೆ. ಎನ್ ಒಸಿ ಕೂಡ ತೆಗೆದುಕೊಂಡು ಇಲ್ಲ. ಸಾರ್ವಜನಿಕರ ಹಿತಾಸಕ್ತಿ ಅಂತ ಸುಮ್ಮನಿದ್ದೇವೆ.ಈ ರೀತಿಯ ಗುಂಬಜ್ ಮಾದರಿ ನಿಲ್ದಾಣವನ್ನು ಕಟ್ಟಿದ್ದನ್ನು ನೋಡಿಕೊಂಡು ಸುಮ್ಮನಿರಲ್ಲ ಎಂದು ಹೇಳಿದರು.
ಗುಂಬಜ್ ತೆರವಿಗೆ ನಾನು ನೀಡಿದ ಎರಡು ದಿನದ ಗಡುವು ಮುಗಿದಿದೆ. ಇನ್ನೂ ಎರಡು ದಿನ ಬಾಕಿ ಇದೆ. ಎರಡು ದಿನದಲ್ಲಿ ತೆರವು ಮಾಡದೆ ಇದ್ದರೆ ನಾನು ಹೇಳಿದಂತೆ ನಾನೇ ತೆರವು ಮಾಡುತ್ತೇನೆ. ಆದರೆ, ಬಸ್ ಸ್ಟ್ಯಾಂಡ್ ತೆರವು ಮಾಡವುದಿಲ್ಲ. ಬಸ್ ಸ್ಟ್ಯಾಂಡ್ ಮೇಲಿನ ಗುಂಬಜ್ ಮಾತ್ರ ತೆರವು ಮಾಡುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾನು ಹೇಳಿಕೆ ಕೊಡುವ ಮುನ್ನ ಬರೀ ಗುಂಬಜ್ ಇತ್ತು. ನಂತರ ರಾತ್ರೋರಾತ್ರಿ ಅದರ ಮೇಲೆ ಕಳಸ ಹೇಗೆ ಬಂತು. ಮೈಸೂರು ಅರಮನೆ ಮೇಲಿನ ಗೋಪುರಕ್ಕೂ ಮಸೀದಿ ಮೇಲಿನ ಗುಂಬಜ್ ಗೂ ವ್ಯತ್ಯಾಸ ಇಲ್ವಾ? ಅರಮನೆ ಗೋಪುರಕ್ಕೂ ಗುಂಬಜ್ ಗೂ ಹೋಲಿಕೆ ಮಾಡುವ ಮುನ್ನ ವಾಸ್ತುಶಿಲ್ಪ ಓದಿ ಕೊಳ್ಳಿ ಎಂದು ಗುಡುಗಿದರು.
ಅರಮನೆ ಗೋಪುರ ಇಂಡೋ- ಸಾರ್ಸೆನಿಕ್ ವಾಸ್ತುಶಿಲ್ಪದ್ದು ಬಸ್ ಸ್ಟ್ಯಾಂಡ್ ಮೇಲೆ ಇವರು ಯಾವ ವಾಸ್ತುಶಿಲ್ಪ ಸೃಷ್ಟಿಸುತ್ತಾರೆ ಹೇಳಿ. ಗುಂಬಜ್ ಕಟ್ಟಿದ್ದು ಪ್ರಶ್ನಿಸದಿದ್ದರೆ ಅರ್ಧ ಚಂದ್ರವನ್ನು ಕಟ್ಟಿ ಬಿಡುತ್ತಿದ್ದರು. ಬಸ್ ಸ್ಟ್ಯಾಂಡ್ ಕಟ್ಟಿದ ಗುತ್ತಿಗೆದಾರ ತನ್ನ ಮೇಲೆ ಬೇಕಾದರೆ ಗುಂಬಜ್, ಮಿನಾರ್ ಕಟ್ಟಿ ಕೊಳ್ಳಲಿ.
ಶಾಸಕ ರಾಮದಾಸ್ ಅವರು ಅರಮನೆ ಮಾದರಿಯಲ್ಲಿ 20 ಬಸ್ ಸ್ಟ್ಯಾಂಡ್ ಕಟ್ಟಲಿ. ನಾನು ಗುಂಬಜ್ ಬಗ್ಗೆ ಧ್ವನಿ ಎತ್ತಿದ್ದಕ್ಕೆ ರಾಮದಾಸ್ ಅವರು ಮೌನವಹಿಸಿದ್ದಾರೆ ಎಂದರೆ ಅದರ ಅರ್ಥ ನನ್ನ ಮಾತಿಗೆ ಅವರ ಸಮ್ಮತಿ ಇದೆ ಅಂತ ಅರ್ಥ ಎಂದು ತಿಳಿಸಿದರು.
ನವದೆಹಲಿ: ಇಸ್ರೇಲ್-ಇರಾನ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ…
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…
ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…
ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. ನಾಗರಹೊಳೆ ರಾಷ್ಟ್ರೀಯ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್ ಸ್ಟ್ರೋಕ್ ಭೀತಿ ಎದುರಾಗಿದೆ. ಹಲವೆಡೆ…