ಜಿಲ್ಲೆಗಳು

ಎರಡು ದಿನ ಕಾದು ನಾನೇ ತೆರವುಗೊಳಿಸುವೆ : ಸಂಸದ ಸಿಂಹ

ಮೈಸೂರು: ಗುಂಬಜ್ ತೆರವಿಗೆ ನಾನು ತೀರ್ಮಾನ ಮಾಡಿದ್ದೇನೆ. ಅದನ್ನು ಜಿಲ್ಲಾಡಳಿತಕ್ಕೆ ಕೇಳುವ ಅವಶ್ಯಕತೆ ಇಲ್ಲ ಎಂದು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯ ಪ್ರತಾಪ್ ಸಿಂಹ ತಿಳಿಸಿದರು.

ಮೈಸೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇದೆ. ಎನ್ ಒಸಿ ಕೂಡ ತೆಗೆದುಕೊಂಡು ಇಲ್ಲ. ಸಾರ್ವಜನಿಕರ ಹಿತಾಸಕ್ತಿ ಅಂತ ಸುಮ್ಮನಿದ್ದೇವೆ.‌ಈ ರೀತಿಯ ಗುಂಬಜ್ ಮಾದರಿ ನಿಲ್ದಾಣವನ್ನು ಕಟ್ಟಿದ್ದನ್ನು ನೋಡಿಕೊಂಡು ಸುಮ್ಮನಿರಲ್ಲ ಎಂದು ಹೇಳಿದರು.

ಗುಂಬಜ್ ತೆರವಿಗೆ ನಾನು ನೀಡಿದ ಎರಡು ದಿನದ ಗಡುವು ಮುಗಿದಿದೆ. ಇನ್ನೂ ಎರಡು ದಿನ ಬಾಕಿ ಇದೆ. ಎರಡು ದಿನದಲ್ಲಿ ತೆರವು ಮಾಡದೆ ಇದ್ದರೆ ನಾನು ಹೇಳಿದಂತೆ ನಾನೇ ತೆರವು ಮಾಡುತ್ತೇನೆ. ಆದರೆ,  ಬಸ್ ಸ್ಟ್ಯಾಂಡ್ ತೆರವು ಮಾಡವುದಿಲ್ಲ. ಬಸ್ ಸ್ಟ್ಯಾಂಡ್ ಮೇಲಿನ ಗುಂಬಜ್ ಮಾತ್ರ ತೆರವು ಮಾಡುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾನು ಹೇಳಿಕೆ ಕೊಡುವ ಮುನ್ನ ಬರೀ ಗುಂಬಜ್ ಇತ್ತು. ನಂತರ ರಾತ್ರೋರಾತ್ರಿ ಅದರ ಮೇಲೆ ಕಳಸ ಹೇಗೆ ಬಂತು. ಮೈಸೂರು ಅರಮನೆ ಮೇಲಿನ ಗೋಪುರಕ್ಕೂ ಮಸೀದಿ ಮೇಲಿನ ಗುಂಬಜ್ ಗೂ ವ್ಯತ್ಯಾಸ ಇಲ್ವಾ? ಅರಮನೆ ಗೋಪುರಕ್ಕೂ ಗುಂಬಜ್ ಗೂ ಹೋಲಿಕೆ ಮಾಡುವ ಮುನ್ನ ವಾಸ್ತುಶಿಲ್ಪ ಓದಿ ಕೊಳ್ಳಿ ಎಂದು ಗುಡುಗಿದರು.

ಅರಮನೆ ಗೋಪುರ ಇಂಡೋ- ಸಾರ್ಸೆನಿಕ್ ವಾಸ್ತುಶಿಲ್ಪದ್ದು ಬಸ್ ಸ್ಟ್ಯಾಂಡ್ ಮೇಲೆ ಇವರು ಯಾವ ವಾಸ್ತುಶಿಲ್ಪ ಸೃಷ್ಟಿಸುತ್ತಾರೆ ಹೇಳಿ. ಗುಂಬಜ್ ಕಟ್ಟಿದ್ದು ಪ್ರಶ್ನಿಸದಿದ್ದರೆ ಅರ್ಧ ಚಂದ್ರವನ್ನು ಕಟ್ಟಿ ಬಿಡುತ್ತಿದ್ದರು. ಬಸ್ ಸ್ಟ್ಯಾಂಡ್ ಕಟ್ಟಿದ ಗುತ್ತಿಗೆದಾರ ತನ್ನ ಮೇಲೆ ಬೇಕಾದರೆ ಗುಂಬಜ್, ಮಿನಾರ್ ಕಟ್ಟಿ ಕೊಳ್ಳಲಿ.
ಶಾಸಕ ರಾಮದಾಸ್ ಅವರು ಅರಮನೆ ಮಾದರಿಯಲ್ಲಿ 20 ಬಸ್ ಸ್ಟ್ಯಾಂಡ್ ಕಟ್ಟಲಿ. ನಾನು ಗುಂಬಜ್ ಬಗ್ಗೆ ಧ್ವನಿ ಎತ್ತಿದ್ದಕ್ಕೆ ರಾಮದಾಸ್ ಅವರು ಮೌನವಹಿಸಿದ್ದಾರೆ ಎಂದರೆ ಅದರ ಅರ್ಥ ನನ್ನ ಮಾತಿಗೆ ಅವರ ಸಮ್ಮತಿ ಇದೆ ಅಂತ ಅರ್ಥ ಎಂದು ತಿಳಿಸಿದರು.

andolana

Recent Posts

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

10 mins ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

1 hour ago

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಟಿ.ನರಸೀಪುರ: ಡೆತ್‌ನೋಟ್‌ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ…

2 hours ago

ಬಿಇಒಗಳು ಪ್ರಯಾಣಿಸುತ್ತಿದ್ದ ಕಾರು ಅಪಘಾತ : ಓರ್ವ ಸಾವು, ಹಲವರು ಗಂಭೀರ

ಮದ್ದೂರು : ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (ಬಿಇಒ) ಪ್ರಯಾಣಿಸುತ್ತಿದ್ದ ವಾಹನ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ. ಮದ್ದೂರು ಸಮೀಪದ…

2 hours ago

ಪಿರಿಯಾಪಟ್ಟಣ | ವಿಶೇಷಚೇತನರಿಗೆ ವಿತರಣೆಯಾಗದ ಸಾಧನಗಳು

ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…

4 hours ago

3 ತಿಂಗಳಿಂದ ಬಾರದ ಮಾಸಾಶನ ; ಬಡಜನರು ಕಂಗಾಲು

ವೃದ್ಧರು, ವಿಧವೆಯರು, ಅಂಗವಿಕಲರಿಗೆ ಬಾರದ ಮಾಸಿಕ ಹಣ ; ಕಚೇರಿಗಳಿಗೆ ನಿತ್ಯ ಅಲೆದಾಟ ಎಚ್.ಡಿ.ಕೋಟೆ : ವೃದ್ಧರು, ವಿಧವೆಯರು, ಅಂಗವಿಕಲರೂ…

5 hours ago