ಜಿಲ್ಲೆಗಳು

ಮತ್ತೆ ಸುವರ್ಣಾವತಿ ಹೊಳೆ ಪಾತ್ರದಲ್ಲಿ ನೆರೆ ಭೀತಿ

ಚಾಮರಾಜನಗರ: ಜಿಲ್ಲೆಯಲ್ಲಿ ಸತತ ಎರಡನೇ ದಿನಶುಕ್ರವಾರರಾತ್ರಿಯೂ ಧಾರಕಾರ ಮಳೆ ಮುಂದುವರಿದಿದ್ದು ಚಿಕ್ಕಹೊಳೆ -ಸುವರ್ಣಾವತಿ ಜಲಾಶಯಗಳ ನದಿ ಪಾತ್ರದಲ್ಲಿ ನೆರೆ ಭೀತಿ ಉಂಟಾಗಿದೆಯಲ್ಲದೇ ವಾಸದಮನೆ ಹಾಗೂ ವಿದ್ಯುತ್ ಕಂಬಗಳು ನೆಲಕ್ಕೆ ಒರಗಿವೆ.
ಸುವರ್ಣಾವತಿ ಹಾಗೂ ಚಿಕ್ಕಹೊಳೆ ಜಲಾಶಯಗಳಿಂದ ೧೪೦೦ ಕ್ಯೂಸೆಕ್ಸ್ ನೀರು ಬಿಡಲಾಗಿದೆ. ಅಲ್ಲದೇ, ಬಿ.ರಂ.ಬೆಟ್ಟ ಕೆರೆ, ಮರಗದಕೆರೆ, ಮಾಲೆಗೆರೆಕೆರೆ ಕೋಡಿ ಬಿದ್ದು ಹರಿಯುತ್ತಿರುವ ಹಿನ್ನೆಲೆಯಲ್ಲಿ ಚಾಮರಾಜನಗರ ಹಾಗೂ ಯಳಂದೂರು ತಾಲ್ಲೂಕಿನ ಎರಡೂ ಜಲಾಶಯಗಳ ನದಿಯ ಅಚ್ಚುಕಟ್ಟು ಪ್ರದೇಶದಲ್ಲಿ ನೆರೆ ಭೀತಿ ಎದುರಾಗಿದೆ.
ನದಿ ಪಾತ್ರದ ಸುತ್ತಮುತ್ತ ವಾಸಿಸುವ ಜನರು ಮತ್ತು ಕೃಷಿಕರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಯಳಂದೂರು ತಹಶೀಲ್ದಾರ್ ಕೆ ಬಿ.ಆನಂದಪ್ಪ ನಾಯಕ ಮನವಿ ಮಾಡಿದ್ದಾರೆ.
ಯಳಂದೂರಿನ ಕೆಸ್ತೂರು ಕೆರೆ ಮತ್ತೆ ಕೋಡಿಬಿದ್ದು ಮನೆಗಳತ್ತ ನೀರು ನುಗ್ಗಿದ್ದು ಯಳಂದೂರು ತಾ.ಮದ್ದೂರು, ಗಣಗನೂರು, ಅಗರ, ಮಾಂಬಳ್ಳಿ ಗ್ರಾಮಗಳತ್ತ ನೆರೆ ಆವರಿಸಿದೆ.
ಯಳಂದೂರು ತಾಲ್ಲೂಕಿನಲ್ಲಿ ೪೨, ಹನೂರು ತಾ.೬ ಮತ್ತು ಚಾ.ನಗರ ತಾ.ನಲ್ಲಿ ೧ ಮನೆ ಭಾಗಶಃ ಹಾನಿ ಗೊಳಗಾಗಿರುವುದಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಶನಿವಾರ ವರದಿ ಸಲ್ಲಿಕೆಯಾಗಿದೆ.ಶುಕ್ರವಾರ ಯಳಂದೂರಿನಲ್ಲಿ ೧೩ ಮತ್ತು ಚಾ.ನಗರ ತಾಲ್ಲೂಕಿನಲ್ಲಿ
೨ಮನೆ ಭಾಗಶಃ ಕುಸಿದಿರುವ ವರದಿಯಾಗಿದೆ.
ಅಕ್ಟೋಬರ್ ನಲ್ಲಿ ಈ ತನಕ ಮಳೆಯಿಂದ ಜಿಲ್ಲೆಯಲ್ಲಿ ೯೩ಮನೆ ಮತ್ತು ೭ವಿದ್ಯುತ್ ಪೋಲುಗಳಿಗೆ ಹಾನಿ ಸಂಭವಿಸಿರುವುದಾಗಿ ಆಯಾ ತಾಲ್ಲೂಕು ಕಚೇರಿಗಳಿಂದ ಪ್ರಾಧಿಕಾರಕ್ಕೆ ವರದಿ ಸಲ್ಲಿಕೆಯಾಗಿದೆ.
ಗುರುವಾರಕ್ಕೆ ಹೋಲಿಸಿದರೆ ಶುಕ್ರವಾರ ಜಿಲ್ಲೆಯಲ್ಲಿ ಮಳೆ ಪ್ರಮಾಣ ಸ್ವಲ್ಪ ತಗ್ಗಿದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ. ಶನಿವಾರ ಸಂಜೆ ೫ಘಂಟೆ ವರೆಗೂ ಮಳೆ ಧರೆಗೆ ಇಳಿದಿರಲಿಲ್ಲವಾದರೂ ಮೋಡ ಕವಿದ ದಟ್ಟ ವಾತಾವರಣ ಆವರಿಸಿತ್ತು.
ಚಿಕ್ಕಮೋಳೆ, ದೊಡ್ಡ ಮೋಳೆ, ಬ್ಯಾಡಮೂಡ್ಲು ಭಾಗದ ನೂರಾರು ಎಕರೆ ಜಲಾವೃತವಾಗಿ ಬೆಳೆಹಾನಿ ಯಾಗಿರುವುದಾಗಿ ತಿಳಿದು ಬಂದಿದೆ.

andolanait

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

40 mins ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

1 hour ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

2 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

5 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

5 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

5 hours ago