ಚಾಮರಾಜನಗರ: ಜಿಲ್ಲೆಯಲ್ಲಿ ಸತತ ಎರಡನೇ ದಿನಶುಕ್ರವಾರರಾತ್ರಿಯೂ ಧಾರಕಾರ ಮಳೆ ಮುಂದುವರಿದಿದ್ದು ಚಿಕ್ಕಹೊಳೆ -ಸುವರ್ಣಾವತಿ ಜಲಾಶಯಗಳ ನದಿ ಪಾತ್ರದಲ್ಲಿ ನೆರೆ ಭೀತಿ ಉಂಟಾಗಿದೆಯಲ್ಲದೇ ವಾಸದಮನೆ ಹಾಗೂ ವಿದ್ಯುತ್ ಕಂಬಗಳು ನೆಲಕ್ಕೆ ಒರಗಿವೆ.
ಸುವರ್ಣಾವತಿ ಹಾಗೂ ಚಿಕ್ಕಹೊಳೆ ಜಲಾಶಯಗಳಿಂದ ೧೪೦೦ ಕ್ಯೂಸೆಕ್ಸ್ ನೀರು ಬಿಡಲಾಗಿದೆ. ಅಲ್ಲದೇ, ಬಿ.ರಂ.ಬೆಟ್ಟ ಕೆರೆ, ಮರಗದಕೆರೆ, ಮಾಲೆಗೆರೆಕೆರೆ ಕೋಡಿ ಬಿದ್ದು ಹರಿಯುತ್ತಿರುವ ಹಿನ್ನೆಲೆಯಲ್ಲಿ ಚಾಮರಾಜನಗರ ಹಾಗೂ ಯಳಂದೂರು ತಾಲ್ಲೂಕಿನ ಎರಡೂ ಜಲಾಶಯಗಳ ನದಿಯ ಅಚ್ಚುಕಟ್ಟು ಪ್ರದೇಶದಲ್ಲಿ ನೆರೆ ಭೀತಿ ಎದುರಾಗಿದೆ.
ನದಿ ಪಾತ್ರದ ಸುತ್ತಮುತ್ತ ವಾಸಿಸುವ ಜನರು ಮತ್ತು ಕೃಷಿಕರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಯಳಂದೂರು ತಹಶೀಲ್ದಾರ್ ಕೆ ಬಿ.ಆನಂದಪ್ಪ ನಾಯಕ ಮನವಿ ಮಾಡಿದ್ದಾರೆ.
ಯಳಂದೂರಿನ ಕೆಸ್ತೂರು ಕೆರೆ ಮತ್ತೆ ಕೋಡಿಬಿದ್ದು ಮನೆಗಳತ್ತ ನೀರು ನುಗ್ಗಿದ್ದು ಯಳಂದೂರು ತಾ.ಮದ್ದೂರು, ಗಣಗನೂರು, ಅಗರ, ಮಾಂಬಳ್ಳಿ ಗ್ರಾಮಗಳತ್ತ ನೆರೆ ಆವರಿಸಿದೆ.
ಯಳಂದೂರು ತಾಲ್ಲೂಕಿನಲ್ಲಿ ೪೨, ಹನೂರು ತಾ.೬ ಮತ್ತು ಚಾ.ನಗರ ತಾ.ನಲ್ಲಿ ೧ ಮನೆ ಭಾಗಶಃ ಹಾನಿ ಗೊಳಗಾಗಿರುವುದಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಶನಿವಾರ ವರದಿ ಸಲ್ಲಿಕೆಯಾಗಿದೆ.ಶುಕ್ರವಾರ ಯಳಂದೂರಿನಲ್ಲಿ ೧೩ ಮತ್ತು ಚಾ.ನಗರ ತಾಲ್ಲೂಕಿನಲ್ಲಿ
೨ಮನೆ ಭಾಗಶಃ ಕುಸಿದಿರುವ ವರದಿಯಾಗಿದೆ.
ಅಕ್ಟೋಬರ್ ನಲ್ಲಿ ಈ ತನಕ ಮಳೆಯಿಂದ ಜಿಲ್ಲೆಯಲ್ಲಿ ೯೩ಮನೆ ಮತ್ತು ೭ವಿದ್ಯುತ್ ಪೋಲುಗಳಿಗೆ ಹಾನಿ ಸಂಭವಿಸಿರುವುದಾಗಿ ಆಯಾ ತಾಲ್ಲೂಕು ಕಚೇರಿಗಳಿಂದ ಪ್ರಾಧಿಕಾರಕ್ಕೆ ವರದಿ ಸಲ್ಲಿಕೆಯಾಗಿದೆ.
ಗುರುವಾರಕ್ಕೆ ಹೋಲಿಸಿದರೆ ಶುಕ್ರವಾರ ಜಿಲ್ಲೆಯಲ್ಲಿ ಮಳೆ ಪ್ರಮಾಣ ಸ್ವಲ್ಪ ತಗ್ಗಿದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ. ಶನಿವಾರ ಸಂಜೆ ೫ಘಂಟೆ ವರೆಗೂ ಮಳೆ ಧರೆಗೆ ಇಳಿದಿರಲಿಲ್ಲವಾದರೂ ಮೋಡ ಕವಿದ ದಟ್ಟ ವಾತಾವರಣ ಆವರಿಸಿತ್ತು.
ಚಿಕ್ಕಮೋಳೆ, ದೊಡ್ಡ ಮೋಳೆ, ಬ್ಯಾಡಮೂಡ್ಲು ಭಾಗದ ನೂರಾರು ಎಕರೆ ಜಲಾವೃತವಾಗಿ ಬೆಳೆಹಾನಿ ಯಾಗಿರುವುದಾಗಿ ತಿಳಿದು ಬಂದಿದೆ.
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…