ಜಿಲ್ಲೆಗಳು

ನನೆಗುದಿಗೆ ಬಿದ್ದಿದ್ದ ಕಟ್ಟಡಗಳ ನಕ್ಷೆ ಅನುಮೋದನೆಗೆ ಒಪ್ಪಿಗೆ

ಜಿಲ್ಲಾಧಿಕಾರಿಗಳೂ ಆದ ಪ್ರಾಧಿಕಾರದ ಅಧ್ಯಕ್ಷ ಡಾ.ಕೆ.ವಿ.ರಾಜೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆ

ಮೈಸೂರು: ಹಲವು ತಿಂಗಳಿಂದ ಬಡಾವಣೆ ರಚನೆ, ಕಟ್ಟಡಗಳ ನಿರ್ಮಾಣದ ನಕ್ಷೆ ಅನುಮೋದನೆಗಾಗಿ ಕಾದು ಕುಳಿತಿದ್ದ ಕಡತಗಳಿಗೆ ಒಪ್ಪಿಗೆ ಕೊಡಲಾಯಿತು.

ಜಿಲ್ಲಾಧಿಕಾರಿಗಳೂ ಆದ ಮುಡಾ ಅಧ್ಯಕ್ಷ ಡಾ.ಕೆ.ವಿ.ರಾಜೇಂದ್ರ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಬೆಳಿಗ್ಗೆ ೧೧.೧೫ರಿಂದ ಸಂಜೆ ೪.೩೦ರವರೆಗೆ ನಡೆದ ಸಾಮಾನ್ಯ ಸಭೆಯಲ್ಲಿ ಹಲವು ತಿಂಗಳಿಂದ ನಗರ ಯೋಜಕ ಶಾಖೆಯಲ್ಲಿ ಧೂಳು ತಿನ್ನುತ್ತಿದ್ದ ಕಡತಗಳಿಗೆ ಮುಕ್ತಿ ನೀಡಲಾಯಿತು. ಒಂದೊಂದು ಕಡತಗಳ ವಿಷಯಗಳನ್ನು ಆಯುಕ್ತ ಜಿ.ಟಿ.ದಿನೇಶ್‌ಕುಮಾರ್ ಓದುತ್ತಿದ್ದಂತೆ ಅದರ ಬಗ್ಗೆ ಚರ್ಚಿಸಿ ಒಪ್ಪಿಗೆ ನೀಡಲಾಯಿತು. ಆರು ತಿಂಗಳಿಂದ ಸಭೆ ನಡೆಯದ ಕಾರಣ ಮಂಡಿಸಲಾಗಿದ್ದ ೩೪೩ ವಿಷಯಗಳಲ್ಲಿ ೨೪೩ ವಿಷಯಗಳಿಗೆ ಒಪ್ಪಿಗೆ ಕೊಡಲಾಯಿತು.

ತಾತ್ಕಾಲಿಕ ವಸತಿ ವಿನ್ಯಾಸ, ಖಾಸಗಿ ಬಡಾವಣೆಗಳಿಗೆ ಅನುಮೋದನೆ, ಭೂ ಬದಲಾವಣೆ, ಏಕ ನಕ್ಷೆ ಅನುಮೋದನೆ, ನಿವೇಶನಗಳ ಬಿಡುಗಡೆ, ತುಂಡು ಭೂಮಿ ಮಂಜೂರಾತಿ, ಏಕ ಮನೆಗಳನ್ನು ನಿರ್ಮಾಣ ಮಾಡುವ ಪ್ಲಾನ್‌ಸೇರಿದಂತೆ ಇನ್ನಿತರ ವಿಚಾರಗಳಿಗೆ ಸಮ್ಮತಿಸಲಾಯಿತು. ಮೈಸೂರು ನಗರದ ಅಭಿವೃದ್ಧಿ ವಿಚಾರ, ಹೊಸ ಬಡಾವಣೆಗಳ ಪ್ರಸ್ತಾಪ, ಕ್ರಿಯಾಯೋಜನೆಗಳಿಗೆ ಒಪ್ಪಿಗೆ ನೀಡುವ ವಿಚಾರದ ಪ್ರಸ್ತಾಪವಾಗಲಿಲ್ಲ.

ಶಾಸಕರಾದ ತನ್ವೀರ್‌ಸೇಠ್, ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಬಿ.ಹರ್ಷವರ್ಧನ, ವಿಧಾನಪರಿಷತ್ ಸದಸ್ಯರಾದ ಎಚ್.ವಿಶ್ವನಾಥ್, ಮರಿತಿಬ್ಬೇಗೌಡ, ಮಧು ಮಾದೇಗೌಡ, ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ದಿನೇಶ್ ಗೂಳೀಗೌಡ, ನಾಮ ನಿರ್ದೇಶಿತ ಸದಸ್ಯರಾದ ಎಸ್‌ಬಿಎಂ ಮಂಜು, ಕೆ.ಮಾದೇಶ್, ಲಿಂಗಣ್ಣ, ಎಂ.ಎನ್.ನವೀನ್ ಕುಮಾರ್, ಎಸ್.ಲಕ್ಷ್ಮೀದೇವಿ, ಅಧೀಕ್ಷಕ ಅಭಿಯಂತರ ಚನ್ನಕೇಶವ ಇನ್ನಿತರ ಸದಸ್ಯರು ಹಾಜರಿದ್ದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಕೆ.ವಿ.ರಾಜೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್, ಶಾಸಕರಾದ ಎಚ್.ವಿಶ್ವನಾಥ್,ತನ್ವೀರ್‌ಸೇಠ್,ಎಸ್.ಎ.ರಾಮದಾಸ್,ಎಲ್.ನಾಗೇಂದ್ರ, ಬಿ.ಹರ್ಷವರ್ಧನ, ಮರಿತಿಬ್ಬೇಗೌಡ, ಮಧುಮಾದೇಗೌಡ,ಡಾ.ಡಿ.ತಿಮ್ಮಯ್ಯ,ಸಿ.ಎನ್.ಮಂಜೇಗೌಡ, ದಿನೇಶ್ ಗೂಳೀಗೌಡ ಹಾಜರಿದ್ದರು

andolanait

Recent Posts

ವಿ.ಬಾಡಗದಲ್ಲಿ ಕೌಟುಂಬಿಕ ಹಾಕಿ ಪಂದ್ಯಕ್ಕೆ ಚಾಲನೆ

ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…

2 hours ago

ಮದ್ಯಪಾನಿಗಳ ತಾಣವಾದ ಶಾಲಾ ಕಟ್ಟಡ

ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…

2 hours ago

ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ: ಆಕಾಂಕ್ಷಿಗಳ ಕಸರತ್ತು

ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …

2 hours ago

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

12 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

12 hours ago