ಜಿಲ್ಲೆಗಳು

ನನೆಗುದಿಗೆ ಬಿದ್ದಿದ್ದ ಕಟ್ಟಡಗಳ ನಕ್ಷೆ ಅನುಮೋದನೆಗೆ ಒಪ್ಪಿಗೆ

ಜಿಲ್ಲಾಧಿಕಾರಿಗಳೂ ಆದ ಪ್ರಾಧಿಕಾರದ ಅಧ್ಯಕ್ಷ ಡಾ.ಕೆ.ವಿ.ರಾಜೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆ

ಮೈಸೂರು: ಹಲವು ತಿಂಗಳಿಂದ ಬಡಾವಣೆ ರಚನೆ, ಕಟ್ಟಡಗಳ ನಿರ್ಮಾಣದ ನಕ್ಷೆ ಅನುಮೋದನೆಗಾಗಿ ಕಾದು ಕುಳಿತಿದ್ದ ಕಡತಗಳಿಗೆ ಒಪ್ಪಿಗೆ ಕೊಡಲಾಯಿತು.

ಜಿಲ್ಲಾಧಿಕಾರಿಗಳೂ ಆದ ಮುಡಾ ಅಧ್ಯಕ್ಷ ಡಾ.ಕೆ.ವಿ.ರಾಜೇಂದ್ರ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಬೆಳಿಗ್ಗೆ ೧೧.೧೫ರಿಂದ ಸಂಜೆ ೪.೩೦ರವರೆಗೆ ನಡೆದ ಸಾಮಾನ್ಯ ಸಭೆಯಲ್ಲಿ ಹಲವು ತಿಂಗಳಿಂದ ನಗರ ಯೋಜಕ ಶಾಖೆಯಲ್ಲಿ ಧೂಳು ತಿನ್ನುತ್ತಿದ್ದ ಕಡತಗಳಿಗೆ ಮುಕ್ತಿ ನೀಡಲಾಯಿತು. ಒಂದೊಂದು ಕಡತಗಳ ವಿಷಯಗಳನ್ನು ಆಯುಕ್ತ ಜಿ.ಟಿ.ದಿನೇಶ್‌ಕುಮಾರ್ ಓದುತ್ತಿದ್ದಂತೆ ಅದರ ಬಗ್ಗೆ ಚರ್ಚಿಸಿ ಒಪ್ಪಿಗೆ ನೀಡಲಾಯಿತು. ಆರು ತಿಂಗಳಿಂದ ಸಭೆ ನಡೆಯದ ಕಾರಣ ಮಂಡಿಸಲಾಗಿದ್ದ ೩೪೩ ವಿಷಯಗಳಲ್ಲಿ ೨೪೩ ವಿಷಯಗಳಿಗೆ ಒಪ್ಪಿಗೆ ಕೊಡಲಾಯಿತು.

ತಾತ್ಕಾಲಿಕ ವಸತಿ ವಿನ್ಯಾಸ, ಖಾಸಗಿ ಬಡಾವಣೆಗಳಿಗೆ ಅನುಮೋದನೆ, ಭೂ ಬದಲಾವಣೆ, ಏಕ ನಕ್ಷೆ ಅನುಮೋದನೆ, ನಿವೇಶನಗಳ ಬಿಡುಗಡೆ, ತುಂಡು ಭೂಮಿ ಮಂಜೂರಾತಿ, ಏಕ ಮನೆಗಳನ್ನು ನಿರ್ಮಾಣ ಮಾಡುವ ಪ್ಲಾನ್‌ಸೇರಿದಂತೆ ಇನ್ನಿತರ ವಿಚಾರಗಳಿಗೆ ಸಮ್ಮತಿಸಲಾಯಿತು. ಮೈಸೂರು ನಗರದ ಅಭಿವೃದ್ಧಿ ವಿಚಾರ, ಹೊಸ ಬಡಾವಣೆಗಳ ಪ್ರಸ್ತಾಪ, ಕ್ರಿಯಾಯೋಜನೆಗಳಿಗೆ ಒಪ್ಪಿಗೆ ನೀಡುವ ವಿಚಾರದ ಪ್ರಸ್ತಾಪವಾಗಲಿಲ್ಲ.

ಶಾಸಕರಾದ ತನ್ವೀರ್‌ಸೇಠ್, ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಬಿ.ಹರ್ಷವರ್ಧನ, ವಿಧಾನಪರಿಷತ್ ಸದಸ್ಯರಾದ ಎಚ್.ವಿಶ್ವನಾಥ್, ಮರಿತಿಬ್ಬೇಗೌಡ, ಮಧು ಮಾದೇಗೌಡ, ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ದಿನೇಶ್ ಗೂಳೀಗೌಡ, ನಾಮ ನಿರ್ದೇಶಿತ ಸದಸ್ಯರಾದ ಎಸ್‌ಬಿಎಂ ಮಂಜು, ಕೆ.ಮಾದೇಶ್, ಲಿಂಗಣ್ಣ, ಎಂ.ಎನ್.ನವೀನ್ ಕುಮಾರ್, ಎಸ್.ಲಕ್ಷ್ಮೀದೇವಿ, ಅಧೀಕ್ಷಕ ಅಭಿಯಂತರ ಚನ್ನಕೇಶವ ಇನ್ನಿತರ ಸದಸ್ಯರು ಹಾಜರಿದ್ದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಕೆ.ವಿ.ರಾಜೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್, ಶಾಸಕರಾದ ಎಚ್.ವಿಶ್ವನಾಥ್,ತನ್ವೀರ್‌ಸೇಠ್,ಎಸ್.ಎ.ರಾಮದಾಸ್,ಎಲ್.ನಾಗೇಂದ್ರ, ಬಿ.ಹರ್ಷವರ್ಧನ, ಮರಿತಿಬ್ಬೇಗೌಡ, ಮಧುಮಾದೇಗೌಡ,ಡಾ.ಡಿ.ತಿಮ್ಮಯ್ಯ,ಸಿ.ಎನ್.ಮಂಜೇಗೌಡ, ದಿನೇಶ್ ಗೂಳೀಗೌಡ ಹಾಜರಿದ್ದರು

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

2 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

2 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

2 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

2 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

2 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

3 hours ago