ಜಿಲ್ಲಾಧಿಕಾರಿಗಳೂ ಆದ ಪ್ರಾಧಿಕಾರದ ಅಧ್ಯಕ್ಷ ಡಾ.ಕೆ.ವಿ.ರಾಜೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆ
ಮೈಸೂರು: ಹಲವು ತಿಂಗಳಿಂದ ಬಡಾವಣೆ ರಚನೆ, ಕಟ್ಟಡಗಳ ನಿರ್ಮಾಣದ ನಕ್ಷೆ ಅನುಮೋದನೆಗಾಗಿ ಕಾದು ಕುಳಿತಿದ್ದ ಕಡತಗಳಿಗೆ ಒಪ್ಪಿಗೆ ಕೊಡಲಾಯಿತು.
ಜಿಲ್ಲಾಧಿಕಾರಿಗಳೂ ಆದ ಮುಡಾ ಅಧ್ಯಕ್ಷ ಡಾ.ಕೆ.ವಿ.ರಾಜೇಂದ್ರ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಬೆಳಿಗ್ಗೆ ೧೧.೧೫ರಿಂದ ಸಂಜೆ ೪.೩೦ರವರೆಗೆ ನಡೆದ ಸಾಮಾನ್ಯ ಸಭೆಯಲ್ಲಿ ಹಲವು ತಿಂಗಳಿಂದ ನಗರ ಯೋಜಕ ಶಾಖೆಯಲ್ಲಿ ಧೂಳು ತಿನ್ನುತ್ತಿದ್ದ ಕಡತಗಳಿಗೆ ಮುಕ್ತಿ ನೀಡಲಾಯಿತು. ಒಂದೊಂದು ಕಡತಗಳ ವಿಷಯಗಳನ್ನು ಆಯುಕ್ತ ಜಿ.ಟಿ.ದಿನೇಶ್ಕುಮಾರ್ ಓದುತ್ತಿದ್ದಂತೆ ಅದರ ಬಗ್ಗೆ ಚರ್ಚಿಸಿ ಒಪ್ಪಿಗೆ ನೀಡಲಾಯಿತು. ಆರು ತಿಂಗಳಿಂದ ಸಭೆ ನಡೆಯದ ಕಾರಣ ಮಂಡಿಸಲಾಗಿದ್ದ ೩೪೩ ವಿಷಯಗಳಲ್ಲಿ ೨೪೩ ವಿಷಯಗಳಿಗೆ ಒಪ್ಪಿಗೆ ಕೊಡಲಾಯಿತು.
ತಾತ್ಕಾಲಿಕ ವಸತಿ ವಿನ್ಯಾಸ, ಖಾಸಗಿ ಬಡಾವಣೆಗಳಿಗೆ ಅನುಮೋದನೆ, ಭೂ ಬದಲಾವಣೆ, ಏಕ ನಕ್ಷೆ ಅನುಮೋದನೆ, ನಿವೇಶನಗಳ ಬಿಡುಗಡೆ, ತುಂಡು ಭೂಮಿ ಮಂಜೂರಾತಿ, ಏಕ ಮನೆಗಳನ್ನು ನಿರ್ಮಾಣ ಮಾಡುವ ಪ್ಲಾನ್ಸೇರಿದಂತೆ ಇನ್ನಿತರ ವಿಚಾರಗಳಿಗೆ ಸಮ್ಮತಿಸಲಾಯಿತು. ಮೈಸೂರು ನಗರದ ಅಭಿವೃದ್ಧಿ ವಿಚಾರ, ಹೊಸ ಬಡಾವಣೆಗಳ ಪ್ರಸ್ತಾಪ, ಕ್ರಿಯಾಯೋಜನೆಗಳಿಗೆ ಒಪ್ಪಿಗೆ ನೀಡುವ ವಿಚಾರದ ಪ್ರಸ್ತಾಪವಾಗಲಿಲ್ಲ.
ಶಾಸಕರಾದ ತನ್ವೀರ್ಸೇಠ್, ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಬಿ.ಹರ್ಷವರ್ಧನ, ವಿಧಾನಪರಿಷತ್ ಸದಸ್ಯರಾದ ಎಚ್.ವಿಶ್ವನಾಥ್, ಮರಿತಿಬ್ಬೇಗೌಡ, ಮಧು ಮಾದೇಗೌಡ, ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ದಿನೇಶ್ ಗೂಳೀಗೌಡ, ನಾಮ ನಿರ್ದೇಶಿತ ಸದಸ್ಯರಾದ ಎಸ್ಬಿಎಂ ಮಂಜು, ಕೆ.ಮಾದೇಶ್, ಲಿಂಗಣ್ಣ, ಎಂ.ಎನ್.ನವೀನ್ ಕುಮಾರ್, ಎಸ್.ಲಕ್ಷ್ಮೀದೇವಿ, ಅಧೀಕ್ಷಕ ಅಭಿಯಂತರ ಚನ್ನಕೇಶವ ಇನ್ನಿತರ ಸದಸ್ಯರು ಹಾಜರಿದ್ದರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಕೆ.ವಿ.ರಾಜೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್, ಶಾಸಕರಾದ ಎಚ್.ವಿಶ್ವನಾಥ್,ತನ್ವೀರ್ಸೇಠ್,ಎಸ್.ಎ.ರಾಮದಾಸ್,ಎಲ್.ನಾಗೇಂದ್ರ, ಬಿ.ಹರ್ಷವರ್ಧನ, ಮರಿತಿಬ್ಬೇಗೌಡ, ಮಧುಮಾದೇಗೌಡ,ಡಾ.ಡಿ.ತಿಮ್ಮಯ್ಯ,ಸಿ.ಎನ್.ಮಂಜೇಗೌಡ, ದಿನೇಶ್ ಗೂಳೀಗೌಡ ಹಾಜರಿದ್ದರು
ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…
ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್ಕಾಂಗ್ಗೆ ಬಂದಾಗ…
ಡಾ.ಮೈಸೂರು ಉಮೇಶ್ ಹತ್ತಾರು ಜನಪದ ಕಾವ್ಯ, ನೂರಾರು ತತ್ವಪದ ಮತ್ತು ಭಜನೆ ಪದಗಳನ್ನು ಹಾಡುವ ಅಂಕಪ್ಪ ಈ ನೆಲದ ಸಂಪತ್ತು …
ನವೀನ್ ಡಿಸೋಜ ಮಡಿಕೇರಿ-ಮಂಗಳೂರು ಹೆದ್ದಾರಿಯ ಈ ಪ್ರದೇಶ ಈಗ ಸುರಕ್ಷಿತ ೧೧ ಸೂಕ್ಷ್ಮ ಪ್ರದೇಶಗಳಲ್ಲಿ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿ ಮಡಿಕೇರಿ:…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯಸಭೆ, ರಾಜ್ಯ ವಿಧಾನ ಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದ್ದು, ಮೈಸೂರು ಭಾಗದ…
ಸಂದರ್ಶನ: ಶ್ರೀಧರ್ ಆರ್ ಭಟ್ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ಮೈಸೂರು: ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವಾರು ಸವಾಲುಗಳಿವೆ. ಸಚಿವನಾಗಿ…