ಜಿಲ್ಲೆಗಳು

ನನೆಗುದಿಗೆ ಬಿದ್ದಿದ್ದ ಕಟ್ಟಡಗಳ ನಕ್ಷೆ ಅನುಮೋದನೆಗೆ ಒಪ್ಪಿಗೆ

ಜಿಲ್ಲಾಧಿಕಾರಿಗಳೂ ಆದ ಪ್ರಾಧಿಕಾರದ ಅಧ್ಯಕ್ಷ ಡಾ.ಕೆ.ವಿ.ರಾಜೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆ

ಮೈಸೂರು: ಹಲವು ತಿಂಗಳಿಂದ ಬಡಾವಣೆ ರಚನೆ, ಕಟ್ಟಡಗಳ ನಿರ್ಮಾಣದ ನಕ್ಷೆ ಅನುಮೋದನೆಗಾಗಿ ಕಾದು ಕುಳಿತಿದ್ದ ಕಡತಗಳಿಗೆ ಒಪ್ಪಿಗೆ ಕೊಡಲಾಯಿತು.

ಜಿಲ್ಲಾಧಿಕಾರಿಗಳೂ ಆದ ಮುಡಾ ಅಧ್ಯಕ್ಷ ಡಾ.ಕೆ.ವಿ.ರಾಜೇಂದ್ರ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಬೆಳಿಗ್ಗೆ ೧೧.೧೫ರಿಂದ ಸಂಜೆ ೪.೩೦ರವರೆಗೆ ನಡೆದ ಸಾಮಾನ್ಯ ಸಭೆಯಲ್ಲಿ ಹಲವು ತಿಂಗಳಿಂದ ನಗರ ಯೋಜಕ ಶಾಖೆಯಲ್ಲಿ ಧೂಳು ತಿನ್ನುತ್ತಿದ್ದ ಕಡತಗಳಿಗೆ ಮುಕ್ತಿ ನೀಡಲಾಯಿತು. ಒಂದೊಂದು ಕಡತಗಳ ವಿಷಯಗಳನ್ನು ಆಯುಕ್ತ ಜಿ.ಟಿ.ದಿನೇಶ್‌ಕುಮಾರ್ ಓದುತ್ತಿದ್ದಂತೆ ಅದರ ಬಗ್ಗೆ ಚರ್ಚಿಸಿ ಒಪ್ಪಿಗೆ ನೀಡಲಾಯಿತು. ಆರು ತಿಂಗಳಿಂದ ಸಭೆ ನಡೆಯದ ಕಾರಣ ಮಂಡಿಸಲಾಗಿದ್ದ ೩೪೩ ವಿಷಯಗಳಲ್ಲಿ ೨೪೩ ವಿಷಯಗಳಿಗೆ ಒಪ್ಪಿಗೆ ಕೊಡಲಾಯಿತು.

ತಾತ್ಕಾಲಿಕ ವಸತಿ ವಿನ್ಯಾಸ, ಖಾಸಗಿ ಬಡಾವಣೆಗಳಿಗೆ ಅನುಮೋದನೆ, ಭೂ ಬದಲಾವಣೆ, ಏಕ ನಕ್ಷೆ ಅನುಮೋದನೆ, ನಿವೇಶನಗಳ ಬಿಡುಗಡೆ, ತುಂಡು ಭೂಮಿ ಮಂಜೂರಾತಿ, ಏಕ ಮನೆಗಳನ್ನು ನಿರ್ಮಾಣ ಮಾಡುವ ಪ್ಲಾನ್‌ಸೇರಿದಂತೆ ಇನ್ನಿತರ ವಿಚಾರಗಳಿಗೆ ಸಮ್ಮತಿಸಲಾಯಿತು. ಮೈಸೂರು ನಗರದ ಅಭಿವೃದ್ಧಿ ವಿಚಾರ, ಹೊಸ ಬಡಾವಣೆಗಳ ಪ್ರಸ್ತಾಪ, ಕ್ರಿಯಾಯೋಜನೆಗಳಿಗೆ ಒಪ್ಪಿಗೆ ನೀಡುವ ವಿಚಾರದ ಪ್ರಸ್ತಾಪವಾಗಲಿಲ್ಲ.

ಶಾಸಕರಾದ ತನ್ವೀರ್‌ಸೇಠ್, ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಬಿ.ಹರ್ಷವರ್ಧನ, ವಿಧಾನಪರಿಷತ್ ಸದಸ್ಯರಾದ ಎಚ್.ವಿಶ್ವನಾಥ್, ಮರಿತಿಬ್ಬೇಗೌಡ, ಮಧು ಮಾದೇಗೌಡ, ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ದಿನೇಶ್ ಗೂಳೀಗೌಡ, ನಾಮ ನಿರ್ದೇಶಿತ ಸದಸ್ಯರಾದ ಎಸ್‌ಬಿಎಂ ಮಂಜು, ಕೆ.ಮಾದೇಶ್, ಲಿಂಗಣ್ಣ, ಎಂ.ಎನ್.ನವೀನ್ ಕುಮಾರ್, ಎಸ್.ಲಕ್ಷ್ಮೀದೇವಿ, ಅಧೀಕ್ಷಕ ಅಭಿಯಂತರ ಚನ್ನಕೇಶವ ಇನ್ನಿತರ ಸದಸ್ಯರು ಹಾಜರಿದ್ದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಕೆ.ವಿ.ರಾಜೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್, ಶಾಸಕರಾದ ಎಚ್.ವಿಶ್ವನಾಥ್,ತನ್ವೀರ್‌ಸೇಠ್,ಎಸ್.ಎ.ರಾಮದಾಸ್,ಎಲ್.ನಾಗೇಂದ್ರ, ಬಿ.ಹರ್ಷವರ್ಧನ, ಮರಿತಿಬ್ಬೇಗೌಡ, ಮಧುಮಾದೇಗೌಡ,ಡಾ.ಡಿ.ತಿಮ್ಮಯ್ಯ,ಸಿ.ಎನ್.ಮಂಜೇಗೌಡ, ದಿನೇಶ್ ಗೂಳೀಗೌಡ ಹಾಜರಿದ್ದರು

andolanait

Recent Posts

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

1 hour ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

2 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

2 hours ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

3 hours ago

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

6 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

6 hours ago