ತಿ.ನರಸೀಪುರ : ತಾಲ್ಲೂಕಿನ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ೨೦೨೨-೨೩ ನೇ ಸಾಲಿಗೆ ಕೃಷಿ ಹಾಗೂ ಕೃಷಿ ಸಂಬಂಧಿತ ಕ್ಷೇತ್ರಗಳಲ್ಲಿ ಸಾಧನೆಗೈದ ಕೃಷಿಕರಿಗೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕೃಷಿ, ಹೈನುಗಾರಿಕೆ, ಮೀನುಗಾರಿಕೆ ತೋಟಗಾರಿಕೆ, ರೇಷ್ಮೆ, ಕೃಷಿ ಅರಣ್ಯ ಈ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ ರೈತರು ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆ ಸಮಿತಿಯ ತೀರ್ಮಾನದಂತೆ ಜಿಲ್ಲಾ ಮಟ್ಟದಲ್ಲಿ ಪ್ರತಿ ಕ್ಷೇತ್ರದಲ್ಲಿ ಇಬ್ಬರಂತೆ ಒಟ್ಟು ಐದು ಕ್ಷೇತ್ರಗಳಿಂದ ೧೦ ಜನರಿಗೆ ತಲಾ ೨೫ ಸಾವಿರ ಹಾಗೂ ತಾಲ್ಲೂಕು ಮಟ್ಟದಲ್ಲಿ ಪ್ರತಿ ಕ್ಷೇತ್ರದಲ್ಲಿ ಒಬ್ಬರಂತೆ ಐದು ಮಂದಿಗೆ ತಲಾ ೧೦ ಸಾವಿರ ರೂ. ಬಹುಮಾನ, ಶ್ರೇಷ್ಠ ಕೃಷಿಕ ಗೌರವಗಳೊಂದಿಗೆ ನೀಡಲಾಗುತ್ತದೆ.
ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ರೈತರು, ರೈತ ಮಹಿಳೆಯರು ಅರ್ಜಿ ನಮೂನೆಗಳನ್ನು ಪಡೆದು ಭರ್ತಿ ಮಾಡಿ ಡಿ. ೩೦ರೊಳಗಾಗಿ ಮತ್ತೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸುವಂತೆ ಇಲಾಖೆಯ ಪ್ರಕಟಣೆಉಲ್ಲಿ ಕೋರಲಾಗಿದೆ.
ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…
ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…
ವಾಷಿಂಗ್ಟನ್: ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…