ತಿ.ನರಸೀಪುರ : ತಾಲ್ಲೂಕಿನ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ೨೦೨೨-೨೩ ನೇ ಸಾಲಿಗೆ ಕೃಷಿ ಹಾಗೂ ಕೃಷಿ ಸಂಬಂಧಿತ ಕ್ಷೇತ್ರಗಳಲ್ಲಿ ಸಾಧನೆಗೈದ ಕೃಷಿಕರಿಗೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕೃಷಿ, ಹೈನುಗಾರಿಕೆ, ಮೀನುಗಾರಿಕೆ ತೋಟಗಾರಿಕೆ, ರೇಷ್ಮೆ, ಕೃಷಿ ಅರಣ್ಯ ಈ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ ರೈತರು ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆ ಸಮಿತಿಯ ತೀರ್ಮಾನದಂತೆ ಜಿಲ್ಲಾ ಮಟ್ಟದಲ್ಲಿ ಪ್ರತಿ ಕ್ಷೇತ್ರದಲ್ಲಿ ಇಬ್ಬರಂತೆ ಒಟ್ಟು ಐದು ಕ್ಷೇತ್ರಗಳಿಂದ ೧೦ ಜನರಿಗೆ ತಲಾ ೨೫ ಸಾವಿರ ಹಾಗೂ ತಾಲ್ಲೂಕು ಮಟ್ಟದಲ್ಲಿ ಪ್ರತಿ ಕ್ಷೇತ್ರದಲ್ಲಿ ಒಬ್ಬರಂತೆ ಐದು ಮಂದಿಗೆ ತಲಾ ೧೦ ಸಾವಿರ ರೂ. ಬಹುಮಾನ, ಶ್ರೇಷ್ಠ ಕೃಷಿಕ ಗೌರವಗಳೊಂದಿಗೆ ನೀಡಲಾಗುತ್ತದೆ.
ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ರೈತರು, ರೈತ ಮಹಿಳೆಯರು ಅರ್ಜಿ ನಮೂನೆಗಳನ್ನು ಪಡೆದು ಭರ್ತಿ ಮಾಡಿ ಡಿ. ೩೦ರೊಳಗಾಗಿ ಮತ್ತೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸುವಂತೆ ಇಲಾಖೆಯ ಪ್ರಕಟಣೆಉಲ್ಲಿ ಕೋರಲಾಗಿದೆ.
ವಿರುಧುನಗರ್ : ತಮಿಳುನಾಡಿನ ವಿರುಧುನಗರ್ ಜಿಲ್ಲೆಯ ಕಟ್ಟನಾರ್ ಪಟ್ಟಿ ಹಳ್ಳಿಯ ಸಮೀಪ ವನಜ್ ಪಟಾಕಿ ತಯಾರಿಕಾ ಘಟಕದಲ್ಲಿ ಭಾನುವಾರ ಮಧ್ಯಾಹ್ನ…
ಕೆ.ಆರ್.ನಗರ : ತಾಲೂಕಿನ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಬಳಿ ನಡೆದ ಹಜರತ್ ಖಾದರ್ ಲಿಂಗವಲ್ಲಿ ಉರುಸ್ ಕಾರ್ಯಕ್ರಮಕ್ಕೆ ಬಂದಿದ್ದವರು ಕಾವೇರಿ…
ಹನೂರು : ಉಡುತೊರೆ ಹಳ್ಳ ಜಲಾಶಯದಲ್ಲಿ ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಆನೆಗಳನ್ನು ಸುಮಾರು 17 ಗಂಟೆಗಳ…
ನವದೆಹಲಿ : ಜಾತ್ಯತೀತ ಜನತಾದಳದ ಜೊತೆಗೆ ಯಾವ ರಾಜಕೀಯ ನಾಯಕರೂ ಸಂಪರ್ಕ ಸಾಧಿಸಿಲ್ಲ. ಈ ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ…
ನವದೆಹಲಿ : ತಮಿಳುನಾಡಿನ ಡಿಎಂಕೆ ರಾಜಕೀಯ ಸ್ವಾರ್ಥಕ್ಕೆ ದಕ್ಷಿಣದ ರಾಜ್ಯಗಳ ಹಿತ ಬಲಿಯಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು…
ಮಂಡ್ಯ : ಬೇಸಿಗೆ ರಜೆಯ ಸಮಯದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಮತ್ತು ಎಡಮುರಿ ಪ್ರವಾಸಿ…