ತಿ.ನರಸೀಪುರ : ತಾಲ್ಲೂಕಿನ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ೨೦೨೨-೨೩ ನೇ ಸಾಲಿಗೆ ಕೃಷಿ ಹಾಗೂ ಕೃಷಿ ಸಂಬಂಧಿತ ಕ್ಷೇತ್ರಗಳಲ್ಲಿ ಸಾಧನೆಗೈದ ಕೃಷಿಕರಿಗೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕೃಷಿ, ಹೈನುಗಾರಿಕೆ, ಮೀನುಗಾರಿಕೆ ತೋಟಗಾರಿಕೆ, ರೇಷ್ಮೆ, ಕೃಷಿ ಅರಣ್ಯ ಈ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ ರೈತರು ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆ ಸಮಿತಿಯ ತೀರ್ಮಾನದಂತೆ ಜಿಲ್ಲಾ ಮಟ್ಟದಲ್ಲಿ ಪ್ರತಿ ಕ್ಷೇತ್ರದಲ್ಲಿ ಇಬ್ಬರಂತೆ ಒಟ್ಟು ಐದು ಕ್ಷೇತ್ರಗಳಿಂದ ೧೦ ಜನರಿಗೆ ತಲಾ ೨೫ ಸಾವಿರ ಹಾಗೂ ತಾಲ್ಲೂಕು ಮಟ್ಟದಲ್ಲಿ ಪ್ರತಿ ಕ್ಷೇತ್ರದಲ್ಲಿ ಒಬ್ಬರಂತೆ ಐದು ಮಂದಿಗೆ ತಲಾ ೧೦ ಸಾವಿರ ರೂ. ಬಹುಮಾನ, ಶ್ರೇಷ್ಠ ಕೃಷಿಕ ಗೌರವಗಳೊಂದಿಗೆ ನೀಡಲಾಗುತ್ತದೆ.
ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ರೈತರು, ರೈತ ಮಹಿಳೆಯರು ಅರ್ಜಿ ನಮೂನೆಗಳನ್ನು ಪಡೆದು ಭರ್ತಿ ಮಾಡಿ ಡಿ. ೩೦ರೊಳಗಾಗಿ ಮತ್ತೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸುವಂತೆ ಇಲಾಖೆಯ ಪ್ರಕಟಣೆಉಲ್ಲಿ ಕೋರಲಾಗಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…