ಹನೂರು: ಕೃಷಿ ಇಲಾಖೆಯಿಂದ ದೊರಕುವ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಕೃಷಿಯಲ್ಲಿ ಹೆಚ್ಚಿನ ಇಳುವರಿಯನ್ನು ಪಡೆಯುವುದರ ಮೂಲಕ ಅರ್ಥಿಕವಾಗಿ ಅಭಿವೃದ್ದಿ ಹೊಂದಬೇಕು ಎಂದು ಶಾಸಕ ಅರ್.ನರೇಂದ್ರ ಸಲಹೆ ನೀಡಿದರು.
ತಾಲೂಕಿನ ಕೌದಳ್ಳಿ ಗ್ರಾಮದ ಅರಣ್ಯ ಇಲಾಖೆಯ ಅತಿಥಿ ಗೃಹದ ಅವರಣದಲ್ಲಿ ಬುಧವಾರ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಫಲಾನುಭವಿಗಳಿಗೆ ಕೃಷಿ ಪರಿಕರಗಳನ್ನು ವಿತರಿಸಿ ಮಾತನಾಡಿದರು.
ಕೃಷಿಯಲ್ಲಿ ನಿಯಮಿತ ಸಂಪನ್ಮೂಲಗಳನ್ನು ಬಳಕೆ ಮಾಡಿಕೊಂಡು ಹೆಚ್ಚುವರಿ ಇಳುವರಿ ಪಡೆಯುವ ವಿಧಾನವನ್ನು ಉತ್ತೇಜಿಸುವ ಸಲುವಾಗಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯನ್ನು ಜಾರಿಗೆ ತಂದಿದೆ. ಕೃಷಿ ಭೂಮಿಯನ್ನು ನೀರಾವರಿ ವ್ಯವಸ್ಥೆಗೆ ಒಳಪಡುವಂತೆ ಮಾಡುವುದು ಹಾಗೂ ಕೃಷಿಯಲ್ಲಿ ನೀರಾವರಿ ತಗಲುವ ವೆಚ್ಚವನ್ನು ಕನಿಷ್ಟಗೊಳಿಸುವಂತೆ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶ. ಇದರ ಜತೆಗೆ ಕೃಷಿಗೆ ಪೂರಕವಾದ ಚಟುವಟಿಕೆಗಳನ್ನು ಅಭಿವೃದ್ಧಿ ಪಡಿಸಬಹುದಾಗಿದೆ. ಈ ಯೋಜನೆಯಡಿ ತಾಲೂಕಿನ ಕೌದಳ್ಳಿ, ಕುರಟ್ಟಿ ಹೊಸೂರು, ಅಜ್ಜೀಪುರ, ಶೆಟ್ಟಳ್ಳಿ ಹಾಗೂ ದೊಡ್ಡಲತ್ತೂರು ಗ್ರಾಮಗಳು ಆಯ್ಕೆಯಾಗಿದ್ದು, ಆರ್ಹ ಫಲಾನುಭವಿಗಳಿಗೆ ಕೃಷಿ ಪರಿಕರಗಳನ್ನು ವಿತರಿಸಲಾಗುತ್ತಿದೆ. ಅಲ್ಲದೇ ಈ ಯೋಜನೆಯಡಿ ಇನ್ನು ಹಲವು ಸವಲತ್ತುಗಳು ದೊರಕಲಿದೆ. ಅದ್ದರಿಂದ ರೈತರು ಇದರ ಪ್ರಯೋಜನ ಪಡೆದುಕೊಂಡು ಕೃಷಿಯಲ್ಲಿ ಅಭಿವೃದ್ದಿ ಹೊಂದಬೇಕು ಎಂದು ತಿಳಿಸಿದರು.
ಈ ವೇಳೆ 50 ಫಲಾನುಭವಿಗಳಿಗೆ ಜಾನುವಾರು ನೆಲಹಾಸು, 30 ಫಲಾನುಭವಿಗಳಿಗೆ ಮೇವು ಕತ್ತರಿಸುವ ಯಂತ್ರ ಹಾಗೂ ಒಬ್ಬರಿಗೆ ಜೇನು ಸಾಕಾಣೆ ಪೆಟ್ಟಿಗೆಯನ್ನು ವಿತರಿಸಲಾಯಿತು.
ಈ ಸಂಧರ್ಭದಲ್ಲಿ ಜಿಪಂ ಮಾಜಿ ಉಪಾಧ್ಯಕ್ಷ ಬಸವರಾಜು, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಸುಂದರಮ್ಮ, ಕೃಷಿ ಅಧಿಕಾರಿಗಳಾದ ರಘುವೀರ್, ವೆಂಕಟನಾಯ್ಕ, ಮುಖಂಡರಾದ ಮೆಹಬೂಬ್, ರಾಜಣ್ಣ ಹಾಗೂ ಇನ್ನಿತರರು ಇದ್ದರು.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…