ಜಿಲ್ಲೆಗಳು

ಕೃಷಿ ಇಲಾಖೆಯ ಸವಲತ್ತು ಬಳಸಿಕೊಂಡು ಆರ್ಥಿಕ ಅಭಿವೃದ್ಧಿ ಹೊಂದಿ : ಶಾಸಕ ಆರ್ ನರೇಂದ್ರ ಸಲಹೆ

ಹನೂರು: ಕೃಷಿ ಇಲಾಖೆಯಿಂದ ದೊರಕುವ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಕೃಷಿಯಲ್ಲಿ ಹೆಚ್ಚಿನ ಇಳುವರಿಯನ್ನು ಪಡೆಯುವುದರ ಮೂಲಕ ಅರ್ಥಿಕವಾಗಿ ಅಭಿವೃದ್ದಿ ಹೊಂದಬೇಕು ಎಂದು ಶಾಸಕ ಅರ್.ನರೇಂದ್ರ ಸಲಹೆ ನೀಡಿದರು.
ತಾಲೂಕಿನ ಕೌದಳ್ಳಿ ಗ್ರಾಮದ ಅರಣ್ಯ ಇಲಾಖೆಯ ಅತಿಥಿ ಗೃಹದ ಅವರಣದಲ್ಲಿ ಬುಧವಾರ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಫಲಾನುಭವಿಗಳಿಗೆ ಕೃಷಿ ಪರಿಕರಗಳನ್ನು ವಿತರಿಸಿ ಮಾತನಾಡಿದರು.
ಕೃಷಿಯಲ್ಲಿ ನಿಯಮಿತ ಸಂಪನ್ಮೂಲಗಳನ್ನು ಬಳಕೆ ಮಾಡಿಕೊಂಡು ಹೆಚ್ಚುವರಿ ಇಳುವರಿ ಪಡೆಯುವ ವಿಧಾನವನ್ನು ಉತ್ತೇಜಿಸುವ ಸಲುವಾಗಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯನ್ನು ಜಾರಿಗೆ ತಂದಿದೆ. ಕೃಷಿ ಭೂಮಿಯನ್ನು ನೀರಾವರಿ ವ್ಯವಸ್ಥೆಗೆ ಒಳಪಡುವಂತೆ ಮಾಡುವುದು ಹಾಗೂ ಕೃಷಿಯಲ್ಲಿ ನೀರಾವರಿ ತಗಲುವ ವೆಚ್ಚವನ್ನು ಕನಿಷ್ಟಗೊಳಿಸುವಂತೆ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶ. ಇದರ ಜತೆಗೆ ಕೃಷಿಗೆ ಪೂರಕವಾದ ಚಟುವಟಿಕೆಗಳನ್ನು ಅಭಿವೃದ್ಧಿ ಪಡಿಸಬಹುದಾಗಿದೆ. ಈ ಯೋಜನೆಯಡಿ ತಾಲೂಕಿನ ಕೌದಳ್ಳಿ, ಕುರಟ್ಟಿ ಹೊಸೂರು, ಅಜ್ಜೀಪುರ, ಶೆಟ್ಟಳ್ಳಿ ಹಾಗೂ ದೊಡ್ಡಲತ್ತೂರು ಗ್ರಾಮಗಳು ಆಯ್ಕೆಯಾಗಿದ್ದು, ಆರ್ಹ ಫಲಾನುಭವಿಗಳಿಗೆ ಕೃಷಿ ಪರಿಕರಗಳನ್ನು ವಿತರಿಸಲಾಗುತ್ತಿದೆ. ಅಲ್ಲದೇ ಈ ಯೋಜನೆಯಡಿ ಇನ್ನು ಹಲವು ಸವಲತ್ತುಗಳು ದೊರಕಲಿದೆ. ಅದ್ದರಿಂದ ರೈತರು ಇದರ ಪ್ರಯೋಜನ ಪಡೆದುಕೊಂಡು ಕೃಷಿಯಲ್ಲಿ ಅಭಿವೃದ್ದಿ ಹೊಂದಬೇಕು ಎಂದು ತಿಳಿಸಿದರು.
ಈ ವೇಳೆ 50 ಫಲಾನುಭವಿಗಳಿಗೆ ಜಾನುವಾರು ನೆಲಹಾಸು, 30 ಫಲಾನುಭವಿಗಳಿಗೆ ಮೇವು ಕತ್ತರಿಸುವ ಯಂತ್ರ ಹಾಗೂ ಒಬ್ಬರಿಗೆ ಜೇನು ಸಾಕಾಣೆ ಪೆಟ್ಟಿಗೆಯನ್ನು ವಿತರಿಸಲಾಯಿತು.
ಈ ಸಂಧರ್ಭದಲ್ಲಿ ಜಿಪಂ ಮಾಜಿ ಉಪಾಧ್ಯಕ್ಷ ಬಸವರಾಜು, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಸುಂದರಮ್ಮ, ಕೃಷಿ ಅಧಿಕಾರಿಗಳಾದ ರಘುವೀರ್, ವೆಂಕಟನಾಯ್ಕ, ಮುಖಂಡರಾದ ಮೆಹಬೂಬ್, ರಾಜಣ್ಣ ಹಾಗೂ ಇನ್ನಿತರರು ಇದ್ದರು.

andolanait

Recent Posts

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು…

1 hour ago

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

1 hour ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

2 hours ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

2 hours ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

2 hours ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

2 hours ago