ಹನೂರು: ಕೃಷಿ ಇಲಾಖೆಯಿಂದ ದೊರಕುವ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಕೃಷಿಯಲ್ಲಿ ಹೆಚ್ಚಿನ ಇಳುವರಿಯನ್ನು ಪಡೆಯುವುದರ ಮೂಲಕ ಅರ್ಥಿಕವಾಗಿ ಅಭಿವೃದ್ದಿ ಹೊಂದಬೇಕು ಎಂದು ಶಾಸಕ ಅರ್.ನರೇಂದ್ರ ಸಲಹೆ ನೀಡಿದರು.
ತಾಲೂಕಿನ ಕೌದಳ್ಳಿ ಗ್ರಾಮದ ಅರಣ್ಯ ಇಲಾಖೆಯ ಅತಿಥಿ ಗೃಹದ ಅವರಣದಲ್ಲಿ ಬುಧವಾರ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಫಲಾನುಭವಿಗಳಿಗೆ ಕೃಷಿ ಪರಿಕರಗಳನ್ನು ವಿತರಿಸಿ ಮಾತನಾಡಿದರು.
ಕೃಷಿಯಲ್ಲಿ ನಿಯಮಿತ ಸಂಪನ್ಮೂಲಗಳನ್ನು ಬಳಕೆ ಮಾಡಿಕೊಂಡು ಹೆಚ್ಚುವರಿ ಇಳುವರಿ ಪಡೆಯುವ ವಿಧಾನವನ್ನು ಉತ್ತೇಜಿಸುವ ಸಲುವಾಗಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯನ್ನು ಜಾರಿಗೆ ತಂದಿದೆ. ಕೃಷಿ ಭೂಮಿಯನ್ನು ನೀರಾವರಿ ವ್ಯವಸ್ಥೆಗೆ ಒಳಪಡುವಂತೆ ಮಾಡುವುದು ಹಾಗೂ ಕೃಷಿಯಲ್ಲಿ ನೀರಾವರಿ ತಗಲುವ ವೆಚ್ಚವನ್ನು ಕನಿಷ್ಟಗೊಳಿಸುವಂತೆ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶ. ಇದರ ಜತೆಗೆ ಕೃಷಿಗೆ ಪೂರಕವಾದ ಚಟುವಟಿಕೆಗಳನ್ನು ಅಭಿವೃದ್ಧಿ ಪಡಿಸಬಹುದಾಗಿದೆ. ಈ ಯೋಜನೆಯಡಿ ತಾಲೂಕಿನ ಕೌದಳ್ಳಿ, ಕುರಟ್ಟಿ ಹೊಸೂರು, ಅಜ್ಜೀಪುರ, ಶೆಟ್ಟಳ್ಳಿ ಹಾಗೂ ದೊಡ್ಡಲತ್ತೂರು ಗ್ರಾಮಗಳು ಆಯ್ಕೆಯಾಗಿದ್ದು, ಆರ್ಹ ಫಲಾನುಭವಿಗಳಿಗೆ ಕೃಷಿ ಪರಿಕರಗಳನ್ನು ವಿತರಿಸಲಾಗುತ್ತಿದೆ. ಅಲ್ಲದೇ ಈ ಯೋಜನೆಯಡಿ ಇನ್ನು ಹಲವು ಸವಲತ್ತುಗಳು ದೊರಕಲಿದೆ. ಅದ್ದರಿಂದ ರೈತರು ಇದರ ಪ್ರಯೋಜನ ಪಡೆದುಕೊಂಡು ಕೃಷಿಯಲ್ಲಿ ಅಭಿವೃದ್ದಿ ಹೊಂದಬೇಕು ಎಂದು ತಿಳಿಸಿದರು.
ಈ ವೇಳೆ 50 ಫಲಾನುಭವಿಗಳಿಗೆ ಜಾನುವಾರು ನೆಲಹಾಸು, 30 ಫಲಾನುಭವಿಗಳಿಗೆ ಮೇವು ಕತ್ತರಿಸುವ ಯಂತ್ರ ಹಾಗೂ ಒಬ್ಬರಿಗೆ ಜೇನು ಸಾಕಾಣೆ ಪೆಟ್ಟಿಗೆಯನ್ನು ವಿತರಿಸಲಾಯಿತು.
ಈ ಸಂಧರ್ಭದಲ್ಲಿ ಜಿಪಂ ಮಾಜಿ ಉಪಾಧ್ಯಕ್ಷ ಬಸವರಾಜು, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಸುಂದರಮ್ಮ, ಕೃಷಿ ಅಧಿಕಾರಿಗಳಾದ ರಘುವೀರ್, ವೆಂಕಟನಾಯ್ಕ, ಮುಖಂಡರಾದ ಮೆಹಬೂಬ್, ರಾಜಣ್ಣ ಹಾಗೂ ಇನ್ನಿತರರು ಇದ್ದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…