ಹನೂರು: ಕೃಷಿ ಇಲಾಖೆಯಿಂದ ದೊರಕುವ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಕೃಷಿಯಲ್ಲಿ ಹೆಚ್ಚಿನ ಇಳುವರಿಯನ್ನು ಪಡೆಯುವುದರ ಮೂಲಕ ಅರ್ಥಿಕವಾಗಿ ಅಭಿವೃದ್ದಿ ಹೊಂದಬೇಕು ಎಂದು ಶಾಸಕ ಅರ್.ನರೇಂದ್ರ ಸಲಹೆ ನೀಡಿದರು.
ತಾಲೂಕಿನ ಕೌದಳ್ಳಿ ಗ್ರಾಮದ ಅರಣ್ಯ ಇಲಾಖೆಯ ಅತಿಥಿ ಗೃಹದ ಅವರಣದಲ್ಲಿ ಬುಧವಾರ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಫಲಾನುಭವಿಗಳಿಗೆ ಕೃಷಿ ಪರಿಕರಗಳನ್ನು ವಿತರಿಸಿ ಮಾತನಾಡಿದರು.
ಕೃಷಿಯಲ್ಲಿ ನಿಯಮಿತ ಸಂಪನ್ಮೂಲಗಳನ್ನು ಬಳಕೆ ಮಾಡಿಕೊಂಡು ಹೆಚ್ಚುವರಿ ಇಳುವರಿ ಪಡೆಯುವ ವಿಧಾನವನ್ನು ಉತ್ತೇಜಿಸುವ ಸಲುವಾಗಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯನ್ನು ಜಾರಿಗೆ ತಂದಿದೆ. ಕೃಷಿ ಭೂಮಿಯನ್ನು ನೀರಾವರಿ ವ್ಯವಸ್ಥೆಗೆ ಒಳಪಡುವಂತೆ ಮಾಡುವುದು ಹಾಗೂ ಕೃಷಿಯಲ್ಲಿ ನೀರಾವರಿ ತಗಲುವ ವೆಚ್ಚವನ್ನು ಕನಿಷ್ಟಗೊಳಿಸುವಂತೆ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶ. ಇದರ ಜತೆಗೆ ಕೃಷಿಗೆ ಪೂರಕವಾದ ಚಟುವಟಿಕೆಗಳನ್ನು ಅಭಿವೃದ್ಧಿ ಪಡಿಸಬಹುದಾಗಿದೆ. ಈ ಯೋಜನೆಯಡಿ ತಾಲೂಕಿನ ಕೌದಳ್ಳಿ, ಕುರಟ್ಟಿ ಹೊಸೂರು, ಅಜ್ಜೀಪುರ, ಶೆಟ್ಟಳ್ಳಿ ಹಾಗೂ ದೊಡ್ಡಲತ್ತೂರು ಗ್ರಾಮಗಳು ಆಯ್ಕೆಯಾಗಿದ್ದು, ಆರ್ಹ ಫಲಾನುಭವಿಗಳಿಗೆ ಕೃಷಿ ಪರಿಕರಗಳನ್ನು ವಿತರಿಸಲಾಗುತ್ತಿದೆ. ಅಲ್ಲದೇ ಈ ಯೋಜನೆಯಡಿ ಇನ್ನು ಹಲವು ಸವಲತ್ತುಗಳು ದೊರಕಲಿದೆ. ಅದ್ದರಿಂದ ರೈತರು ಇದರ ಪ್ರಯೋಜನ ಪಡೆದುಕೊಂಡು ಕೃಷಿಯಲ್ಲಿ ಅಭಿವೃದ್ದಿ ಹೊಂದಬೇಕು ಎಂದು ತಿಳಿಸಿದರು.
ಈ ವೇಳೆ 50 ಫಲಾನುಭವಿಗಳಿಗೆ ಜಾನುವಾರು ನೆಲಹಾಸು, 30 ಫಲಾನುಭವಿಗಳಿಗೆ ಮೇವು ಕತ್ತರಿಸುವ ಯಂತ್ರ ಹಾಗೂ ಒಬ್ಬರಿಗೆ ಜೇನು ಸಾಕಾಣೆ ಪೆಟ್ಟಿಗೆಯನ್ನು ವಿತರಿಸಲಾಯಿತು.
ಈ ಸಂಧರ್ಭದಲ್ಲಿ ಜಿಪಂ ಮಾಜಿ ಉಪಾಧ್ಯಕ್ಷ ಬಸವರಾಜು, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಸುಂದರಮ್ಮ, ಕೃಷಿ ಅಧಿಕಾರಿಗಳಾದ ರಘುವೀರ್, ವೆಂಕಟನಾಯ್ಕ, ಮುಖಂಡರಾದ ಮೆಹಬೂಬ್, ರಾಜಣ್ಣ ಹಾಗೂ ಇನ್ನಿತರರು ಇದ್ದರು.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…