ಜಿಲ್ಲೆಗಳು

ಸಹಜ ಕೃಷಿ ತರಬೇತಿ ಕಾರ್ಯಕ್ರಮದಲ್ಲಿ ʼಜೀವ ಜಗತ್ತುʼ ಪುಸ್ತಕ ಬಿಡುಗಡೆ

ಚಾಮರಾಜನಗರ : ನಗರದ ಕೆವಿಕೆ ಸಭಾಂಗಣದಲ್ಲಿ ಇಂದು ಜೆಎಸ್’ಬಿ ಪ್ರತಿಷ್ಠಾನ, ಕೊಳ್ಳೇಗಾಲ & ಕೃಷಿ ವಿಜ್ಞಾನ ಕೇಂದ್ರ (ಕೆವಿಕೆ) ಇವರ ಸಹಯೋಗದೊಂದಿಗೆ ಜೀವ ಜಗತ್ತು ಪುಸ್ತಕ ಬಿಡುಗಡೆ ಹಾಗೂ ಸಹಜ ಕೃಷಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಗಿಡಕ್ಕೆ ನೀರೆರೆದು, ಜೀವ ಜಗತ್ತು ಪುಸ್ತಕವನು ಬಿಡುಗಡೆಗೊಳಿಸುವ ಮೂಲಕ ಕಾರ್ಯಕ್ರಮವನ್ನು ಸಾಹಿತಿ, ಹಿರಿಯ ಪತ್ರಕರ್ತತು ಹಾಗೂ ಕನ್ನಡ ಪ್ರಭ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾದ ಅಂಶಿ ಪ್ರಸನ್ನಕುಮಾರ್‌ ಅವರು ಉದ್ಘಾಟಿಸಿ ಕಾರ್ಯಕ್ರಮದ ಕುರಿತು ಮಾತನಾಡಿದರು.
ನಂತರದಲ್ಲಿ ಕೆವಿಕೆ ಕೃಷಿ ವಿಜ್ಞಾನಿ ಡ.| ಯೋಗೀಶ್ ಜಿ ಎಸ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ದೇವರಾಜು ಕಪ್ಪಸೋಗೆ, ಜೆ ಎಸ್ ಬಿ ಪ್ರತಿಷ್ಠಾನದ ಅಧ್ಯಕ್ಷ ಶಶಿಕುಮಾರ್ ಎಸ್ ಮಾತನಾಡಿದರು.
ಬಳಿಕ ಕಾರ್ಯಕ್ರಮದಲ್ಲಿ ಹಾಜರಿದ್ದ ರೈತರಿಗೆ ಸಹಜ ಕೃಷಿ ಬಗ್ಗೆ ಸಹಜ ಕೃಷಿ ವಿಜ್ಞಾನಿ ಡಾ.ಮಂಜುನಾಥ ರವರು ತರಬೇತಿ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲೆ ಮಾತ್ರವಲ್ಲದೇ ಅಕ್ಕಪಕ್ಕದ ಜಿಲ್ಲೆಯ ರೈತರುಗಳು, ರೈತ ಮುಖಂಡರು, ಸ್ವದೇಶಿ ಆಂದೋಲನ ಚಳುವಳಿ ಸಂಚಾಲಕರಾದ ಮಾಧವನ್, ರೈತ ಸಾಹಿತಿ ಪ್ರಶಾಂತ ಜಯರಾಂ, ಚಿಂತಕರಾದ ಕೋಟಂಬಳ್ಳಿ ಗುರುಸ್ವಾಮಿ, ಯುವ ರೈತರಾದ ಶಿವಕುಮಾರ, ಮುಡಿಗುಂಡ ಪ್ರಸಾದ್, ಮಧುಕರ, ತೇರಂಬಳ್ಳಿ ಕುಮಾರ, ಕೃಷಿ ವಿಜ್ಞಾನಿಗಳಾದ ಶೃತಿ, ರಜತ್, ಆದರ್ಶ ಮತ್ತು ಕೆವಿಕೆ ಸಿಬ್ಬಂದಿಗಳು, ಮತ್ತಿತರರು ಹಾಜರಿದ್ದರು.

andolanait

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

4 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

18 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

18 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

18 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

18 hours ago