ಅಂತರಸಂತೆ: ಕಾಡಿಗೆ ಸೌದೆ ತರಲು ತೆರಳಿದ್ದ ಮಂಜು ಎಂಬವರ ಮೇಲೆ ಹುಲಿಯೊಂದು ದಾಳಿ ನಡೆಸಿದ ಘಟನೆಯ ಹಿನ್ನೆಲೆಯಲ್ಲಿ ಹುಲಿಯನ್ನು ಬೇರೆಡೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಅರಣ್ಯಾಧಿಕಾರಿಗಳ ಕಚೇರಿ ಎದುರು ಹಾಡಿಯ ಜನರು ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಎಚ್.ಡಿ.ಕೋಟೆ ತಾಲ್ಲೂಕಿನ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಬಳ್ಳೆ ಹಾಡಿಯ ಮಂಜು(17) ಎಂಬ ಯುವಕನು ಜ.22ರಂದು ಕಾಡಿಗೆ ಸೌದೆ ತರಲು ತೆರಳಿದ್ದ ವೇಳೆ ಹಾಡಿಯ ಸಮೀಪ ಹುಲಿಯೊಂದು ಆತನ ಮೇಲೆ ದಾಳಿ ನಡೆಸಿ ಬಲಿ ಪಡೆದಿತ್ತು. ಬಳಿಕ ಹಾಡಿಯ ಜನರು ಹುಲಿಯನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿ ಕೆಲ ಕಾಲ ರಸ್ತೆ ತಡೆ ನಡೆಸಿ ಪ್ರತಿಭಟಿಸಿದ್ದರು.
ಹುಲಿ ದಾಳಿಯಾಗದಂತೆ ಎಚ್ಚರ ವಹಿಸುತ್ತೇವೆ ಎಂದು ಅರಣ್ಯಾಧಿಕಾರಿಗಳು ಭರವಸೆಯನ್ನು ನೀಡಿದ್ದ ಮೇರೆಗೆ ಪ್ರತಿಭಟನೆಯನ್ನು ಕೈಬಿಡಲಾಗಿತ್ತು. ಆದರೆ ಇದೀಗ ಮತ್ತೇ ಎರಡು ದಿನಗಳ ಹಿಂದೆ ಹಾಡಿಯ ಸಮೀಪವೇ ಹುಲಿಯೊಂದು ಹಸುವನ್ನು ಕೊಂದ ಹಾಕಿದ್ದು, ಭಯಭೀತರಾದ ಹಾಡಿಯ ಜನರು, ಹುಲಿಯನ್ನು ಸ್ಥಳಾಂತರಿಸುವವರೆಗೂ ಧರಣಿ ಮುಂದುವರಿಸಲಾಗುವುದು ಎಂದು ಪಟ್ಟ ಹಿಡಿದು ಅರಣ್ಯ ಇಲಾಖೆಯ ಕಚೇರಿ ಎದುರು ಪ್ರತಿಭಟನೆ ಆರಂಭಿಸಿದ್ದಾರೆ.
ರಮೇಶ್, ವಡ್ಡರಗುಡಿ ಚಿಕ್ಕಣ್ಣ, ಅಯ್ಯಪ್ಪ, ಗಂಗೆ, ಮಾಸ್ತಿ, ಟಿ.ಸಿ.ಸುರೇಶ್, ಚಂದ್ರು, ನಾಗರಾಜು, ಮಹದೇವ, ಕೂಸಣ್ಣ ಸೇರಿದಂತೆ ಹಾಡಿ ಅರಣ್ಯ ಹಕ್ಕು ಸಮಿತಿ ಸದಸ್ಯರು, ನಿವಾಸಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…