ಮೈಸೂರು: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯಕ್ರಮದ ಅನ್ವಯ ಮೈಸೂರು ವಿಶ್ವವಿದ್ಯಾನಿಲಯ ವೈದ್ಯಕೀಯ ಸಮಾಜಶಾಸ್ತ್ರ ಪುಸ್ತಕದಲ್ಲಿ ಏಡ್ಸ್, ಕ್ಯಾನ್ಸರ್ಗೆ ಸ್ವಮೂತ್ರ ಪಾನವೇ ಮದ್ದು ಎಂದು ದಾಖಲಾಗಿದ್ದು, ಇದು ಅತ್ಯಂತ ಅವೈಜ್ಞಾನಿಕ ಮತ್ತು ಮೂರ್ಖತನದ ಪರಮಾವಧಿ ಎಂದು ಎಐಡಿಎಸ್ಓ ಜಿಲ್ಲಾ ಅಧ್ಯಕ್ಷ ಸುಭಾಷ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೂತ್ರ ಚಿಕಿತ್ಸೆಯ ಪ್ರಕೃತಿ ಚಿಕಿತ್ಸೆಯು ಒಂದು ಭಾಗ. ಸ್ವಪಾನದಿಂದ ಏಡ್ಸ್, ಕ್ಯಾನ್ಸರ್, ಕಣ್ಣು, ಕಿವಿ, ಹಲ್ಲು ಹಾಗೂ ಚರ್ಮರೋಗಗಳನ್ನು ನಿಯಂತ್ರಿಸಬಹುದು ಎಂಬ ಅವೈಜ್ಞಾನಿಕವಾದ ಅಂಶಗಳನ್ನು ವಿಶ್ವವಿದ್ಯಾನಿಲಯದ ಪಠ್ಯಕ್ರಮದಲ್ಲಿ ಅಳವಡಿಸಿರುವುದು ದುರಂತವೇ ಸರಿ. ವೈದ್ಯಕೀಯ ಸಮಾಜಶಾಸ್ತ್ರ ಪುಸ್ತಕದಲ್ಲಿ ವೈಜ್ಞಾನಿಕವಾಗಿ ಸಾಬೀತಾಗಿರುವ ಅಂಶಗಳನ್ನು ಸೇರಿಸಬೇಕೇ ಹೊರತು, ಕೇವಲ ಪ್ರಾಚೀನ ಗ್ರಂಥಗಳನ್ನು ಉಲ್ಲೇಖ ಮಾಡಿ ಈ ರೀತಿ ಪಠ್ಯಗಳನ್ನು ರಚಿಸಿರುವುದನ್ನು ಈ ಕೂಡಲೇ ವಾಪಸ್ ಪಡೆಯಬೇಕು. ಈ ಕೂಡಲೇ ವಿಶ್ವವಿದ್ಯಾನಿಲಯದ ಪದಾಧಿಕಾರಿಗಳು ಹಾಗೂ ಸರ್ಕಾರವೇ ಮಧ್ಯ ಪ್ರವೇಶಿಸಿ ಅವೈಜ್ಞಾನಿಕ ಪಠ್ಯಕ್ರಮವನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಬೃಹತ್ ಹೋರಾಟ ಎದುರಿಸಬೇಕಾಗುತ್ತದೆ ಎಂದು ಎಐಡಿಎಸ್ಓ ಎಚ್ಚರಿಕೆ ನೀಡಿದ್ದಾರೆ.
ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…
ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು ಕೆಜಿಗೆ ರೂ. ೮೯ ಇದ್ದ ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…
ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ ಅಲ್ಪ ವಿರಾಮವನ್ನು ಘೋಷಿಸಲಾಗಿದೆ. ಈ ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…
ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ…
ಹಾಲಿವುಡ್ನ ಪ್ರಖ್ಯಾತ ನಿರ್ದೇಶಕ ಚಾಡ್ ಸ್ಟಹೆಲ್ಸ್ಕಿ ನಿರ್ದೇಶನದ john wick" ಸರಣಿ ಚಿತ್ರಗಳಲ್ಲಿನ ಅಂತ್ಯವಿಲ್ಲದ ಶವಗಳ ಎಣಿಕೆ, ಕ್ವೆಂಟಿನ್ ಟರೆಂಟಿನೋ…
ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ಹಾಡೊಂದು ದೇಶಾದ್ಯಂತ ಸುದ್ದಿ ಮಾಡಿತಷ್ಟೇ. ಅದರ ಪ್ರಸ್ತಾಪ ಲೋಕಸಭೆಯಲ್ಲೂ ಆಯಿತು. ವಾರ್ತಾ ಮತ್ತು ಪ್ರಸಾರ…