ಜಿಲ್ಲೆಗಳು

ಎಐಡಿಎಸ್‌ಒ ಸಹಯೋಗದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ಚಾಮರಾಜನಗರ: ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ-೨೦) ಬ್ಯಾಚ್ ಪದವಿ ವಿದ್ಯಾರ್ಥಿಗಳ ಫಲಿತಾಂಶವನ್ನು ಕೂಡಲೇ ಪ್ರಕಟಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್‌ನ ಜಿಲ್ಲಾ ಸಮಿತಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಡಳಿತ ಭವನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಈಗಾಗಲೇ ರಾಜ್ಯದಲ್ಲಿ ಎನ್‌ಇಪಿ ಮೊದಲ ಬ್ಯಾಚ್‌ನ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತಲುಪಿದ್ದಾರೆ. ಮೊದಲ ವರ್ಷದ ಎರಡನೇ ಸೆಮಿಸ್ಟರ್ ಫಲಿತಾಂಶ ಬಿಡುಗಡೆಯಾಗಿಲ್ಲ. ಕೂಡಲೇ ಮೈಸೂರು ವಿಶ್ವವಿದ್ಯಾಲಯವು ಫಲಿತಾಂಶವನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ವಿದ್ಯಾರ್ಥಿವೇತನ ಬಿಡುಗಡೆಯಾಗದೆ ವಿದ್ಯಾರ್ಥಿಗಳಲ್ಲಿ ಆತಂಕ ಮನೆ ಮಾಡಿದೆ. ಬಡ ಕುಟುಂಬಗಳ ನೂರಾರು ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣದ ಪೂರೈಕೆಗಾಗಿ ವಿದ್ಯಾರ್ಥಿವೇತನದ ಮೇಲೆ ಅವಲಂಬಿತರಾಗಿರುತ್ತಾರೆ. ವಿದ್ಯಾರ್ಥಿವೇತನ ಸಿಗದಿದ್ದರೆ ಅವರಲ್ಲಿ ಬಹುಪಾಲು ವಿದ್ಯಾರ್ಥಿಗಳು ಶಿಕ್ಷಣವನ್ನು ಪೂರೈಸುವುದೇ ಕಷ್ಟಕರವಾಗುತ್ತದೆ. ಕೂಡಲೇ ಸರ್ಕಾರ ವಿದ್ಯಾರ್ಥಿವೇತನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಪದವಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಸಂಖ್ಯೆಗಳನ್ನು ಹೆಚ್ಚಿಸುವ ಜೊತೆಗೆ ದಾಖಲಾತಿ ಪ್ರಮಾಣವನ್ನು ಹೆಚ್ಚಿಸಬೇಕು. ನಗರದ ಹೊರವಲಯದಲ್ಲಿ ಸ್ಥಾಪನೆಯಾಗುತ್ತಿರುವ ನೂತನ ವಿಶ್ವವಿದ್ಯಾಲಯದ ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು. ಸೆಲ್ಫ್ ಫೈನಾನ್ಸ್ ಕೋರ್ಸ್ಗಳನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸಬಾರದು ಎಂದು ಆಗ್ರಹಿಸಿದರು.ಸ್ಥಳಕ್ಕಾಗಮಿಸಿದ ಉಪ ತಹಸೀಲ್ದಾರ್ ರಂಗರಾಜು ಅವರ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿ ಪ್ರತಿಭಟನೆಯನ್ನು ಅಂತ್ಯಗೊಳಿಸಲಾಯಿತು.
ಪ್ರತಿಭಟನೆಯಲ್ಲಿ ಸಮಿತಿಯ ಜಿಲ್ಲಾ ಸಂಚಾಲಕಿ ಆಸಿಯಾ ಬೇಗಂ, ರಚಿತಾ, ಬಿಂದುಶ್ರೀ, ರಕ್ಷಿತಾ, ಅನಿತಾ, ಸುಚಿತ್ರಾ, ಶಾಲಿನಿ, ಅಪೂರ್ವ, ಚಂದನ, ಭಾಗ್ಯಲಕ್ಷ್ಮಿ ಸೇರಿದಂತೆ ಇತರರಿದ್ದರು.

andolanait

Recent Posts

ರಾಮನಗರ: ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ದೋಚಿದ ಕಳ್ಳರು

ರಾಮನಗರ: ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ದೋಚಿರುವ ಘಟನೆ ರಾಮನಗರದ ದ್ಯಾವರಸೇಗೌಡನದೊಡ್ಡಿ ಸಮೀಪ ನಡೆದಿದೆ. ಸಾಫ್ಟ್‌ವೇರ್‌ ಉದ್ಯೋಗಿಯಾಗಿರುವ…

35 mins ago

ಜೋಳದ ಫಸಲು ಕಾಯುವ ವೇಳೆ ಕಾಡಾನೆ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿ ಜೋಳದ ಪಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ…

1 hour ago

ಓದುಗರ ಪತ್ರ: ಸ್ವಾಗತಾರ್ಹ ತೀರ್ಪು!

ಅಧಿಕ ಸುಂಕ ಹೇರಿಕೆ ಚಟ ಬ್ರಹ್ಮಾಸ್ತ್ರವಾಗಿತ್ತು ಟ್ರಂಪಣ್ಣನಿಗೆ ವಿವಿಧ ದೇಶಗಳನು ನಿಯಂತ್ರಿಸಲು! ಆದರೀಗ ರದ್ದುಗೊಳಿಸಿದೆ ಅಮೆರಿಕದ ಸುಪ್ರೀಂ ಕೋರ್ಟ್ ಅಽಕ…

1 hour ago

ಓದುಗರ ಪತ್ರ: ಮಕ್ಕಳಿಗೆ ಮೊಬೈಲ್ ನಿಷೇಧದ ಚಿಂತನೆ: ಸ್ವಾಗತಾರ್ಹ

ರಾಜ್ಯದಲ್ಲಿ ೧೬ ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿರುವುದು ಸ್ವಾಗತಾರ್ಹ.…

2 hours ago

ಓದುಗರ ಪತ್ರ: ಮಕ್ಕಳು ಅಗತ್ಯವಿರುವಷ್ಟೇ ಮೊಬೈಲ್ ಬಳಸಲಿ

ಶಾಲಾ -ಕಾಲೇಜುಗಳಲ್ಲಿ, ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯನ್ನು ನಿಷೇಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರು ಹೇಳಿರುವುದು ಮಾಧ್ಯಮಗಳಲ್ಲಿ…

2 hours ago

ಓದುಗರ ಪತ್ರ: ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ಕೈಬಿಡಿ

ಮೈಸೂರಿನಲ್ಲಿ ೧೯೧೨ರಲ್ಲಿ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ರೇಷ್ಮೆ ಉದ್ಯಮವು ಜಾಗತಿಕ ಮಟ್ಟದಲ್ಲಿ ಮೈಸೂರು ಸಿಲ್ಕ್ ಸೀರೆ…

2 hours ago