ಜಿಲ್ಲೆಗಳು

ಅಲಗುಮೂಲೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಯಶಸ್ವಿ

ಹನೂರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಸರ್ಕಾರದ ವಿನೂತನ ಕಾರ್ಯಕ್ರಮಗಳನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಲು ತಹಸಿಲ್ದಾರ್ ಆನಂದಯ್ಯ ರವರು ಸಲಹೆ ನೀಡಿದರು.

ತಾಲೂಕಿನ ಅಲಗುಮೂಲೆ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜನರು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಕಚೇರಿಗೆ ಅಲೆಯುವ ಬದಲಾಗಿ ಅಧಿಕಾರಿಗಳೇ ನಿಮ್ಮ ಗ್ರಾಮದ ಕಡೆಗೆ ಬಂದು ಜನರ ಕುಂದು ಕೊರತೆಗಳನ್ನು ಆಲಿಸಿ, ಬಗೆಹರಿಸುವ ಕಾರ್ಯಕ್ರಮ ಇದಾಗಿದೆ. ಆದ್ದರಿಂದ ಗ್ರಾಮೀಣ ಜನರು ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುವ ಜೊತೆಗೆ ಯಾವುದೇ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಅಹವಾಲುಗಳನ್ನು ನೀಡಿ. ಸಾಧ್ಯವಾದರೆ ಅದನ್ನು ಇಲ್ಲೇ ಬಗೆಹರಿಸಲಾಗುವುದು. ಇಲ್ಲವಾದರೆ ಕಚೇರಿ ಹಂತದಲ್ಲಿ ಬಗೆಹರಿಸಲು ಒತ್ತು ನೀಡಲಾಗುವುದು. ಅದಕ್ಕಾಗಿಯೇ ವಿವಿಧ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂದು ತಿಳಿಸಿದರು

ಕಾರ್ಯಕ್ರಮದಲ್ಲಿ ಒಟ್ಟು 33 ಅರ್ಜಿ ಅಹವಾಲುಗಳನ್ನು ಸ್ವೀಕರಿಸಲಾಯಿತು. ಅವುಗಳಲ್ಲಿ ಕಂದಾಯ ಇಲಾಖೆಯ 27, ಪಂಚಾಯತ್ ರಾಜ್ ಇಲಾಖೆ, ಸಹಕಾರಿ ಇಲಾಖೆ, ಸಾರಿಗೆ ಇಲಾಖೆ, ಲೋಕೋಪಯೋಗಿ ಇಲಾಖೆ, ಕೆಇಬಿ ಮತ್ತು ಅರಣ್ಯ ಇಲಾಖೆಗಳಿಗೆ ಸಂಬಂಧಿಸಿದ ತಲಾ ಒಂದು ಅರ್ಜಿಗಳು ಸ್ವೀಕೃತವಾದವು.

ಈ ಸಂದರ್ಭದಲ್ಲಿ ಮಣಗಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುಳಾ ಪ್ರಭುಸ್ವಾಮಿ, ಪರಿಶಿಷ್ಟ ವರ್ಗಗಳ ಇಲಾಖೆಯ ನವೀನ್ ಮಠದ್, ಕೃಷಿ ಅಧಿಕಾರಿ ರಘುವೀರ್. ತಾಲ್ಲೂಕು ಪಂಚಾಯತಿ ಅಭಿಯಂತರ ಸಿದ್ದಪ್ಪಾಜಿಗೌಡ,ಆರ್ ಐ ಮಹದೇವಸ್ವಾಮಿ ಗ್ರಾಮಲೆಕ್ಕಿಗ ಶೇಷಣ್ಣ, ಪಿಡಿಒ ನಾಗರಾಜ್ ಮೂರ್ತಿ ಹಾಜರಿದ್ದರು.

andolanait

Recent Posts

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

2 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

3 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

5 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

8 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

8 hours ago

ಜಿಬಿಎ ಚುನಾವಣೆಗೆ ಕಾಲಾವಕಾಶ ನೀಡಿದ ಸುಪ್ರೀಂಕೋರ್ಟ್‌

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆ ನಡೆಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ರಿಲೀಫ್‌ ನೀಡಿದೆ. ಜಿಬಿಎ ಚುನಾವಣೆಗೆ…

10 hours ago