ಹನೂರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಸರ್ಕಾರದ ವಿನೂತನ ಕಾರ್ಯಕ್ರಮಗಳನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಲು ತಹಸಿಲ್ದಾರ್ ಆನಂದಯ್ಯ ರವರು ಸಲಹೆ ನೀಡಿದರು.
ತಾಲೂಕಿನ ಅಲಗುಮೂಲೆ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜನರು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಕಚೇರಿಗೆ ಅಲೆಯುವ ಬದಲಾಗಿ ಅಧಿಕಾರಿಗಳೇ ನಿಮ್ಮ ಗ್ರಾಮದ ಕಡೆಗೆ ಬಂದು ಜನರ ಕುಂದು ಕೊರತೆಗಳನ್ನು ಆಲಿಸಿ, ಬಗೆಹರಿಸುವ ಕಾರ್ಯಕ್ರಮ ಇದಾಗಿದೆ. ಆದ್ದರಿಂದ ಗ್ರಾಮೀಣ ಜನರು ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುವ ಜೊತೆಗೆ ಯಾವುದೇ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಅಹವಾಲುಗಳನ್ನು ನೀಡಿ. ಸಾಧ್ಯವಾದರೆ ಅದನ್ನು ಇಲ್ಲೇ ಬಗೆಹರಿಸಲಾಗುವುದು. ಇಲ್ಲವಾದರೆ ಕಚೇರಿ ಹಂತದಲ್ಲಿ ಬಗೆಹರಿಸಲು ಒತ್ತು ನೀಡಲಾಗುವುದು. ಅದಕ್ಕಾಗಿಯೇ ವಿವಿಧ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂದು ತಿಳಿಸಿದರು
ಕಾರ್ಯಕ್ರಮದಲ್ಲಿ ಒಟ್ಟು 33 ಅರ್ಜಿ ಅಹವಾಲುಗಳನ್ನು ಸ್ವೀಕರಿಸಲಾಯಿತು. ಅವುಗಳಲ್ಲಿ ಕಂದಾಯ ಇಲಾಖೆಯ 27, ಪಂಚಾಯತ್ ರಾಜ್ ಇಲಾಖೆ, ಸಹಕಾರಿ ಇಲಾಖೆ, ಸಾರಿಗೆ ಇಲಾಖೆ, ಲೋಕೋಪಯೋಗಿ ಇಲಾಖೆ, ಕೆಇಬಿ ಮತ್ತು ಅರಣ್ಯ ಇಲಾಖೆಗಳಿಗೆ ಸಂಬಂಧಿಸಿದ ತಲಾ ಒಂದು ಅರ್ಜಿಗಳು ಸ್ವೀಕೃತವಾದವು.
ಈ ಸಂದರ್ಭದಲ್ಲಿ ಮಣಗಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುಳಾ ಪ್ರಭುಸ್ವಾಮಿ, ಪರಿಶಿಷ್ಟ ವರ್ಗಗಳ ಇಲಾಖೆಯ ನವೀನ್ ಮಠದ್, ಕೃಷಿ ಅಧಿಕಾರಿ ರಘುವೀರ್. ತಾಲ್ಲೂಕು ಪಂಚಾಯತಿ ಅಭಿಯಂತರ ಸಿದ್ದಪ್ಪಾಜಿಗೌಡ,ಆರ್ ಐ ಮಹದೇವಸ್ವಾಮಿ ಗ್ರಾಮಲೆಕ್ಕಿಗ ಶೇಷಣ್ಣ, ಪಿಡಿಒ ನಾಗರಾಜ್ ಮೂರ್ತಿ ಹಾಜರಿದ್ದರು.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…