ಜಿಲ್ಲೆಗಳು

ತಾಂತ್ರಿಕ ದೋಷ: ಜನವರಿ 22ರಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳ ಮುಂದೂಡಿಕೆ

ತಾಂತ್ರಿಕ ದೋಷ ಉಂಟಾಗಿರುವ ಕಾರಣ ಜನವರಿ 22ರಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಯುವರಾಜ ಕಾಲೇಜು ತಿಳಿಸಿದೆ.

ಈ ಹಿಂದೆಯೇ ಜನವರಿ ಹಾಗೂ ಫೆಬ್ರವರಿ ತಿಂಗಳುಗಳಲ್ಲಿ ಪದವಿ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಲಾಗಿತ್ತು. ಆದರೆ ಸೋಮವಾರ ಪರೀಕ್ಷೆ ಇದ್ದು ಇನ್ನೂ ಸಹ ಪ್ರವೇಶಪತ್ರ ಕೈ ಸೇರದ ಕಾರಣ ಆತಂಕಗೊಂಡ ವಿದ್ಯಾರ್ಥಿಗಳು ಇಂದು ( ಜನವರಿ 20 ) ಕಾಲೇಜಿನ ಮುಂದೆ ಜಮಾಯಿಸಿದ್ದರು.

ಬಳಿಕ ಕಾಲೇಜು ಆಡಳಿತ ಮಂಡಳಿ ಸೂಚನಾ ಫಲಕದಲ್ಲಿ ಸೋಮವಾರ ಇದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಕಟಣೆ ಹೊರಡಿಸಿ ಸ್ಪಷ್ಟನೆ ನೀಡಿದೆ. ಏಕೀಕೃತ ವಿಶ್ವವಿದ್ಯಾಲಯ ಕಾಲೇಜು ನಿರ್ವಹಣಾ ವ್ಯವಸ್ಥೆ (UUCMS) ತಂತ್ರಜ್ಞಾನದಲ್ಲಿ ಪರೀಕ್ಷಾ ಕಾರ್ಯಗಳನ್ನು ನಿರ್ವಹಿಸಲು ತಾಂತ್ರಿಕ ದೋಷ ಇರುವ ಕಾರಣ ಜನವರಿ 22ರಂದು ನಡೆಯಬೇಕಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಫೆಬ್ರವರಿ 12ಕ್ಕೆ ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಲ್ಲದೇ ಪರೀಕ್ಷೆ ಅವಧಿಯಲ್ಲಿ ಯಾವುದೇ ಬದಲಾವಣೆ ಇಲ್ಲ, ಹಿಂದಿನಂತೆಯೇ ಬೆಳಗ್ಗೆ ಹಾಗೂ ಮಧ್ಯಾಹ್ನ ಮುಂದುವರೆಯುತ್ತದೆ ಎಂದೂ ಸಹ ತಿಳಿಸಲಾಗಿದೆ.

andolana

Recent Posts

ಮ.ಬೆಟ್ಟ | ಕೊನೆಗೂ ಬೋನಿಗೆ ಬಿದ್ದ ಚಿರತೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

7 mins ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

1 hour ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

2 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

2 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

3 hours ago

ಕಣಿವೆಗೆ ಉರುಳಿದ ಸೇನಾ ವಾಹನ : 10 ಸೈನಿಕರ ಸಾವು

11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…

3 hours ago