ಜಿಲ್ಲೆಗಳು

ತಾಂತ್ರಿಕ ದೋಷ: ಜನವರಿ 22ರಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳ ಮುಂದೂಡಿಕೆ

ತಾಂತ್ರಿಕ ದೋಷ ಉಂಟಾಗಿರುವ ಕಾರಣ ಜನವರಿ 22ರಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಯುವರಾಜ ಕಾಲೇಜು ತಿಳಿಸಿದೆ.

ಈ ಹಿಂದೆಯೇ ಜನವರಿ ಹಾಗೂ ಫೆಬ್ರವರಿ ತಿಂಗಳುಗಳಲ್ಲಿ ಪದವಿ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಲಾಗಿತ್ತು. ಆದರೆ ಸೋಮವಾರ ಪರೀಕ್ಷೆ ಇದ್ದು ಇನ್ನೂ ಸಹ ಪ್ರವೇಶಪತ್ರ ಕೈ ಸೇರದ ಕಾರಣ ಆತಂಕಗೊಂಡ ವಿದ್ಯಾರ್ಥಿಗಳು ಇಂದು ( ಜನವರಿ 20 ) ಕಾಲೇಜಿನ ಮುಂದೆ ಜಮಾಯಿಸಿದ್ದರು.

ಬಳಿಕ ಕಾಲೇಜು ಆಡಳಿತ ಮಂಡಳಿ ಸೂಚನಾ ಫಲಕದಲ್ಲಿ ಸೋಮವಾರ ಇದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಕಟಣೆ ಹೊರಡಿಸಿ ಸ್ಪಷ್ಟನೆ ನೀಡಿದೆ. ಏಕೀಕೃತ ವಿಶ್ವವಿದ್ಯಾಲಯ ಕಾಲೇಜು ನಿರ್ವಹಣಾ ವ್ಯವಸ್ಥೆ (UUCMS) ತಂತ್ರಜ್ಞಾನದಲ್ಲಿ ಪರೀಕ್ಷಾ ಕಾರ್ಯಗಳನ್ನು ನಿರ್ವಹಿಸಲು ತಾಂತ್ರಿಕ ದೋಷ ಇರುವ ಕಾರಣ ಜನವರಿ 22ರಂದು ನಡೆಯಬೇಕಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಫೆಬ್ರವರಿ 12ಕ್ಕೆ ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಲ್ಲದೇ ಪರೀಕ್ಷೆ ಅವಧಿಯಲ್ಲಿ ಯಾವುದೇ ಬದಲಾವಣೆ ಇಲ್ಲ, ಹಿಂದಿನಂತೆಯೇ ಬೆಳಗ್ಗೆ ಹಾಗೂ ಮಧ್ಯಾಹ್ನ ಮುಂದುವರೆಯುತ್ತದೆ ಎಂದೂ ಸಹ ತಿಳಿಸಲಾಗಿದೆ.

andolana

Recent Posts

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

8 mins ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

52 mins ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

1 hour ago

ಬೆಟ್ಟಳ್ಳಿ ಮಾರಮ್ಮನ ಜಾತ್ರೆ ; ಹನೂರಲ್ಲಿ 2 ದಿನ ಮದ್ಯ ಮಾರಾಟ ನಿಷೇಧ

ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು…

1 hour ago

ಕೆ.ಆರ್.ಆಸ್ಪತ್ರೆಯಲ್ಲಿ 100 ಹಾಸಿಗೆಯುಳ್ಳ ICU ಘಟಕ ಸ್ಥಾಪಿಸಿ : ಎಂಎಲ್‌ಸಿ ಕೆ.ಶಿವಕುಮಾರ್ ಮನವಿ

ಬೆಂಗಳೂರು : ಮಂಡ್ಯ, ಚಾಮರಾಜನಗರ, ಹೊಳೆನರಸೀಪುರದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುವ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ತುರ್ತು ಸೇವೆಗಳ ಅನುಕೂಲಕ್ಕಾಗಿ ಆಸ್ಪತ್ರೆಯಲ್ಲಿ…

2 hours ago

ಈವರೆಗೂ ಇರಾನ್‌ನಿಂದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ: ಸಚಿವ ಜೈಶಂಕರ್‌

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್‌…

4 hours ago