ಜಿಲ್ಲೆಗಳು

ತಾಂತ್ರಿಕ ದೋಷ: ಜನವರಿ 22ರಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳ ಮುಂದೂಡಿಕೆ

ತಾಂತ್ರಿಕ ದೋಷ ಉಂಟಾಗಿರುವ ಕಾರಣ ಜನವರಿ 22ರಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಯುವರಾಜ ಕಾಲೇಜು ತಿಳಿಸಿದೆ.

ಈ ಹಿಂದೆಯೇ ಜನವರಿ ಹಾಗೂ ಫೆಬ್ರವರಿ ತಿಂಗಳುಗಳಲ್ಲಿ ಪದವಿ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಲಾಗಿತ್ತು. ಆದರೆ ಸೋಮವಾರ ಪರೀಕ್ಷೆ ಇದ್ದು ಇನ್ನೂ ಸಹ ಪ್ರವೇಶಪತ್ರ ಕೈ ಸೇರದ ಕಾರಣ ಆತಂಕಗೊಂಡ ವಿದ್ಯಾರ್ಥಿಗಳು ಇಂದು ( ಜನವರಿ 20 ) ಕಾಲೇಜಿನ ಮುಂದೆ ಜಮಾಯಿಸಿದ್ದರು.

ಬಳಿಕ ಕಾಲೇಜು ಆಡಳಿತ ಮಂಡಳಿ ಸೂಚನಾ ಫಲಕದಲ್ಲಿ ಸೋಮವಾರ ಇದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಕಟಣೆ ಹೊರಡಿಸಿ ಸ್ಪಷ್ಟನೆ ನೀಡಿದೆ. ಏಕೀಕೃತ ವಿಶ್ವವಿದ್ಯಾಲಯ ಕಾಲೇಜು ನಿರ್ವಹಣಾ ವ್ಯವಸ್ಥೆ (UUCMS) ತಂತ್ರಜ್ಞಾನದಲ್ಲಿ ಪರೀಕ್ಷಾ ಕಾರ್ಯಗಳನ್ನು ನಿರ್ವಹಿಸಲು ತಾಂತ್ರಿಕ ದೋಷ ಇರುವ ಕಾರಣ ಜನವರಿ 22ರಂದು ನಡೆಯಬೇಕಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಫೆಬ್ರವರಿ 12ಕ್ಕೆ ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಲ್ಲದೇ ಪರೀಕ್ಷೆ ಅವಧಿಯಲ್ಲಿ ಯಾವುದೇ ಬದಲಾವಣೆ ಇಲ್ಲ, ಹಿಂದಿನಂತೆಯೇ ಬೆಳಗ್ಗೆ ಹಾಗೂ ಮಧ್ಯಾಹ್ನ ಮುಂದುವರೆಯುತ್ತದೆ ಎಂದೂ ಸಹ ತಿಳಿಸಲಾಗಿದೆ.

andolana

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

33 mins ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

3 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

4 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

6 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

7 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

11 hours ago