ಜಿಲ್ಲೆಗಳು

ತಾಂತ್ರಿಕ ದೋಷ: ಜನವರಿ 22ರಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳ ಮುಂದೂಡಿಕೆ

ತಾಂತ್ರಿಕ ದೋಷ ಉಂಟಾಗಿರುವ ಕಾರಣ ಜನವರಿ 22ರಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಯುವರಾಜ ಕಾಲೇಜು ತಿಳಿಸಿದೆ.

ಈ ಹಿಂದೆಯೇ ಜನವರಿ ಹಾಗೂ ಫೆಬ್ರವರಿ ತಿಂಗಳುಗಳಲ್ಲಿ ಪದವಿ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಲಾಗಿತ್ತು. ಆದರೆ ಸೋಮವಾರ ಪರೀಕ್ಷೆ ಇದ್ದು ಇನ್ನೂ ಸಹ ಪ್ರವೇಶಪತ್ರ ಕೈ ಸೇರದ ಕಾರಣ ಆತಂಕಗೊಂಡ ವಿದ್ಯಾರ್ಥಿಗಳು ಇಂದು ( ಜನವರಿ 20 ) ಕಾಲೇಜಿನ ಮುಂದೆ ಜಮಾಯಿಸಿದ್ದರು.

ಬಳಿಕ ಕಾಲೇಜು ಆಡಳಿತ ಮಂಡಳಿ ಸೂಚನಾ ಫಲಕದಲ್ಲಿ ಸೋಮವಾರ ಇದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಕಟಣೆ ಹೊರಡಿಸಿ ಸ್ಪಷ್ಟನೆ ನೀಡಿದೆ. ಏಕೀಕೃತ ವಿಶ್ವವಿದ್ಯಾಲಯ ಕಾಲೇಜು ನಿರ್ವಹಣಾ ವ್ಯವಸ್ಥೆ (UUCMS) ತಂತ್ರಜ್ಞಾನದಲ್ಲಿ ಪರೀಕ್ಷಾ ಕಾರ್ಯಗಳನ್ನು ನಿರ್ವಹಿಸಲು ತಾಂತ್ರಿಕ ದೋಷ ಇರುವ ಕಾರಣ ಜನವರಿ 22ರಂದು ನಡೆಯಬೇಕಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಫೆಬ್ರವರಿ 12ಕ್ಕೆ ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಲ್ಲದೇ ಪರೀಕ್ಷೆ ಅವಧಿಯಲ್ಲಿ ಯಾವುದೇ ಬದಲಾವಣೆ ಇಲ್ಲ, ಹಿಂದಿನಂತೆಯೇ ಬೆಳಗ್ಗೆ ಹಾಗೂ ಮಧ್ಯಾಹ್ನ ಮುಂದುವರೆಯುತ್ತದೆ ಎಂದೂ ಸಹ ತಿಳಿಸಲಾಗಿದೆ.

andolana

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

1 hour ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

8 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

8 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

8 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

8 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

8 hours ago