ಜಿಲ್ಲೆಗಳು

ಫೆ.೬ ರಿಂದ ೬ ದಿನಗಳ ಕಾಲ ನಡೆಯಲಿರುವ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ!

ಮೈಸೂರು: ಮೈಸೂರಿನ ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದಲ್ಲಿ ನಡೆಯಲಿರುವ ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಫೆ. 6 ರಿಂದ 11ರವರೆಗೆ ನಡೆಯಲಿರುವ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿ ಜಾತ್ರೆಯಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದು ಜೆಎಸ್‌ಎಸ್ ವಿದ್ಯಾಪೀಠದ ಕಾರ್ಯದರ್ಶಿ ಎಸ್.ಪಿ.ಮಂಜುನಾಥ್ ತಿಳಿಸಿದರು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತ್ರಾ ಮಹೋತ್ಸವದಲ್ಲಿ ವೈವಿಧ್ಯಮಯ ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ ಚಟುವಟಿಕೆಗಳ ಅನಾವರಣಗೊಳ್ಳಲಿದೆ ಎಂದು ತಿಳಿಸಿದರು.

ಫೆ.6ಕ್ಕೆ ಕೊಂಡೋತ್ಸವ, 7ಕ್ಕೆ ಸಾಮೂಹಿಕ ವಿವಾಹ, 8ಕ್ಕೆ ರಥೋತ್ಸವ, 9ಕ್ಕೆ ಲಕ್ಷ ದೀಪೋತ್ಸವ, 10ಕ್ಕೆ ತೆಪ್ಪೋತ್ಸವ, 11ರಂದು ಅನ್ನ ಬ್ರಹ್ಮೋತ್ಸವದ ಮೂಲಕ ಮುಕ್ತಾಯಗೊಳ್ಳಲಿದೆ.

ಈ ಆರು ದಿನಗಳು ಭಜನೆ, ರಂಗೋಲಿ, ಚಿತ್ರಕಲೆ, ಗಾಳಿಪಟ, ಚಿತ್ರಸಂತೆ, ಕುಸ್ತಿ, ದನಗಳ ಜಾತ್ರೆ, ಕಪಿಲಾರತಿ, ದೋಣಿ ವಿಹಾರ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ ಎಂದರು.

ಇನ್ನೂ, ಸುತ್ತೂರು ಜಾತ್ರೆಗೆ ಸುಮಾರು 25 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಬರುವ ಭಕ್ತರಿಗೆ ಪ್ರಸಾದ ವಿನಿಯೋಗಿಸಲು ಗೋದಾಮಿನಲ್ಲಿ ದಿನಸಿ ಪದಾರ್ಥಗಳ ಶೇಖರಣೆ ಮಾಡಲಾಗಿದೆ. 1000 ಕ್ವಿಂಟಾಲ್ ಅಕ್ಕಿ, 180 ಕ್ವಿಂಟಾಲ್ ತೊಗರಿಬೇಳೆ, 1500 ಕ್ಯಾನ್ ಅಡುಗೆ ಎಣ್ಣೆ, 12 ಟನ್ ಬೆಲ್ಲ, 4000 ಕೆಜಿ ಖಾರದಪುಡಿ, 250 ಕ್ವಿಂಟಾಲ್ ಸಕ್ಕರೆ, 500 ಕೆ.ಜಿ. ನಂದಿನಿ ತುಪ್ಪ, 8000 ಲೀ. ಹಾಲು, 28,000 ಲೀ. ಮೊಸರು, 5000 ಕೆ.ಜಿ. ಉಪ್ಪಿನಕಾಯಿ ಸಿದ್ದಗೊಂಡಿದೆ ಎಂದು ತಿಳಿಸಿದರು.

ಕೃಷಿ ಜಾತ್ರೆಗೆ ಮುಂದಾದ ಸುತ್ತೂರು ಮಠ : ಸುತ್ತೂರು ಜಾತ್ರೆಯಲ್ಲಿ ಈ ಬಾರಿ ಕೃಷಿ ಬ್ರಹ್ಮಾಂಡ ಮುಖ್ಯ ಆರರ್ಷಣೆಯಾಗಿದೆ. ಒಂದು ಎಕರೆ ಜಾಗದಲ್ಲಿ 150 ಬೆಳೆ ಬೆಳೆದಿದ್ದಾರೆ. ಪ್ರತಿ ವರ್ಷದಂತೆ ಈ ಭಾರಿಯು ಸಹ ಕೃಷಿ ಮೇಳ ಆಯೋಜನೆ ಮಾಡಲಾಗಿದೆ. ಕೃಷಿ ಮೇಳದಲ್ಲಿ ವಿವಿಧ ಬಗೆಯ ಹೂ, ತರಕಾರಿ, ಸಸ್ಯಕಾಶಿ ಪ್ರದರ್ಶನ ಇರಲಿದೆ. ಕೃಷಿ ಮೇಳವು ದೇಸಿ ಸೊಗಡಿನ ಮಾದರಿಯಲ್ಲಿ ನಿರ್ಮಾಣಗೊಂಡಿದೆ.

ಅಮಿತ್‌ ಶಾ ಅವರಿಂದ ಅತಿಥಿ ಗೃಹ ಉದ್ಘಾಟಣೆ : ಫೆ.೧೦ ರಂದು ಶ್ರೀಮತಿ ಪಾರ್ವತಮ್ಮ ಹಾಗೂ ಡಾ.ಶಾಮನೂರು ಶಿವಶಂಕರಪ್ಪ ಅತಿಥಿಗೃಹವನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಆಗಮಿಸಿ ಉದ್ಘಾಟನೆ ಮಾಡಲಿದ್ದಾರೆ ಎಂದು ಮಠದ ಆಡಳಿತ ಮಂಡಳಿ ತಿಳಿಸಿದೆ.

andolanait

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

4 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

5 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

6 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

6 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

7 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

7 hours ago