ಜಿಲ್ಲೆಗಳು

ಫೆ.೬ ರಿಂದ ೬ ದಿನಗಳ ಕಾಲ ನಡೆಯಲಿರುವ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ!

ಮೈಸೂರು: ಮೈಸೂರಿನ ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದಲ್ಲಿ ನಡೆಯಲಿರುವ ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಫೆ. 6 ರಿಂದ 11ರವರೆಗೆ ನಡೆಯಲಿರುವ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿ ಜಾತ್ರೆಯಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದು ಜೆಎಸ್‌ಎಸ್ ವಿದ್ಯಾಪೀಠದ ಕಾರ್ಯದರ್ಶಿ ಎಸ್.ಪಿ.ಮಂಜುನಾಥ್ ತಿಳಿಸಿದರು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತ್ರಾ ಮಹೋತ್ಸವದಲ್ಲಿ ವೈವಿಧ್ಯಮಯ ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ ಚಟುವಟಿಕೆಗಳ ಅನಾವರಣಗೊಳ್ಳಲಿದೆ ಎಂದು ತಿಳಿಸಿದರು.

ಫೆ.6ಕ್ಕೆ ಕೊಂಡೋತ್ಸವ, 7ಕ್ಕೆ ಸಾಮೂಹಿಕ ವಿವಾಹ, 8ಕ್ಕೆ ರಥೋತ್ಸವ, 9ಕ್ಕೆ ಲಕ್ಷ ದೀಪೋತ್ಸವ, 10ಕ್ಕೆ ತೆಪ್ಪೋತ್ಸವ, 11ರಂದು ಅನ್ನ ಬ್ರಹ್ಮೋತ್ಸವದ ಮೂಲಕ ಮುಕ್ತಾಯಗೊಳ್ಳಲಿದೆ.

ಈ ಆರು ದಿನಗಳು ಭಜನೆ, ರಂಗೋಲಿ, ಚಿತ್ರಕಲೆ, ಗಾಳಿಪಟ, ಚಿತ್ರಸಂತೆ, ಕುಸ್ತಿ, ದನಗಳ ಜಾತ್ರೆ, ಕಪಿಲಾರತಿ, ದೋಣಿ ವಿಹಾರ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ ಎಂದರು.

ಇನ್ನೂ, ಸುತ್ತೂರು ಜಾತ್ರೆಗೆ ಸುಮಾರು 25 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಬರುವ ಭಕ್ತರಿಗೆ ಪ್ರಸಾದ ವಿನಿಯೋಗಿಸಲು ಗೋದಾಮಿನಲ್ಲಿ ದಿನಸಿ ಪದಾರ್ಥಗಳ ಶೇಖರಣೆ ಮಾಡಲಾಗಿದೆ. 1000 ಕ್ವಿಂಟಾಲ್ ಅಕ್ಕಿ, 180 ಕ್ವಿಂಟಾಲ್ ತೊಗರಿಬೇಳೆ, 1500 ಕ್ಯಾನ್ ಅಡುಗೆ ಎಣ್ಣೆ, 12 ಟನ್ ಬೆಲ್ಲ, 4000 ಕೆಜಿ ಖಾರದಪುಡಿ, 250 ಕ್ವಿಂಟಾಲ್ ಸಕ್ಕರೆ, 500 ಕೆ.ಜಿ. ನಂದಿನಿ ತುಪ್ಪ, 8000 ಲೀ. ಹಾಲು, 28,000 ಲೀ. ಮೊಸರು, 5000 ಕೆ.ಜಿ. ಉಪ್ಪಿನಕಾಯಿ ಸಿದ್ದಗೊಂಡಿದೆ ಎಂದು ತಿಳಿಸಿದರು.

ಕೃಷಿ ಜಾತ್ರೆಗೆ ಮುಂದಾದ ಸುತ್ತೂರು ಮಠ : ಸುತ್ತೂರು ಜಾತ್ರೆಯಲ್ಲಿ ಈ ಬಾರಿ ಕೃಷಿ ಬ್ರಹ್ಮಾಂಡ ಮುಖ್ಯ ಆರರ್ಷಣೆಯಾಗಿದೆ. ಒಂದು ಎಕರೆ ಜಾಗದಲ್ಲಿ 150 ಬೆಳೆ ಬೆಳೆದಿದ್ದಾರೆ. ಪ್ರತಿ ವರ್ಷದಂತೆ ಈ ಭಾರಿಯು ಸಹ ಕೃಷಿ ಮೇಳ ಆಯೋಜನೆ ಮಾಡಲಾಗಿದೆ. ಕೃಷಿ ಮೇಳದಲ್ಲಿ ವಿವಿಧ ಬಗೆಯ ಹೂ, ತರಕಾರಿ, ಸಸ್ಯಕಾಶಿ ಪ್ರದರ್ಶನ ಇರಲಿದೆ. ಕೃಷಿ ಮೇಳವು ದೇಸಿ ಸೊಗಡಿನ ಮಾದರಿಯಲ್ಲಿ ನಿರ್ಮಾಣಗೊಂಡಿದೆ.

ಅಮಿತ್‌ ಶಾ ಅವರಿಂದ ಅತಿಥಿ ಗೃಹ ಉದ್ಘಾಟಣೆ : ಫೆ.೧೦ ರಂದು ಶ್ರೀಮತಿ ಪಾರ್ವತಮ್ಮ ಹಾಗೂ ಡಾ.ಶಾಮನೂರು ಶಿವಶಂಕರಪ್ಪ ಅತಿಥಿಗೃಹವನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಆಗಮಿಸಿ ಉದ್ಘಾಟನೆ ಮಾಡಲಿದ್ದಾರೆ ಎಂದು ಮಠದ ಆಡಳಿತ ಮಂಡಳಿ ತಿಳಿಸಿದೆ.

andolanait

Recent Posts

ಯುವನಿಧಿ ಯೋಜನೆ; 2,116 ಮಂದಿ ನೋಂದಣಿ

ನವೀನ್ ಡಿಸೋಜ 2079 ಪದವಿ, 37 ಮಂದಿ ಡಿಪ್ಲೊಮಾ ಪದವೀಧರರು, 877 ಯುವಕರು, 1239 ಮಂದಿ ಯುವತಿಯರಿಂದ ನೋಂದಣಿ ಮಡಿಕೇರಿ: ಸರ್ಕಾರದ…

4 mins ago

50 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣಕ್ಕೆ ಇಂದು ಚಾಲನೆ

ಮಹಾದೇಶ್ ಎಂ.ಗೌಡ ಹನೂರು ತಾಲ್ಲೂಕಿನ ಜನತೆಯ ಬಹು ದಿನಗಳ ಕನಸು ಈಡೇರುವ ನಿರೀಕ್ಷೆ  ಹನೂರು : ತಾಲ್ಲೂಕು ಕೇಂದ್ರ ಸ್ಥಾನದಲ್ಲಿ…

9 mins ago

ʼಸ್ವಚ್ಛ ಮಂಡ್ಯ ಗುರಿಯತ್ತ ಸಾಗುತ್ತಿರುವ ನಗರಸಭೆ’

ಹೇಮಂತ್‌ಕುಮಾರ್ ಮಂಡ್ಯ: ನಗರದಲ್ಲಿ ಕಳೆದ ಒಂದು ವಾರದಿಂದ ಸದ್ದಿಲ್ಲದೇ ಆರಂಭಗೊಂಡಿರುವ ಸ್ವಚ್ಛ ಸರ್ವೇಕ್ಷಣೆ ಅಭಿಯಾನವು ಸ್ವಚ್ಛ ಮಂಡ್ಯ ಗುರಿಯನ್ನಿಟ್ಟುಕೊಂಡು ಸಾಗಿರುವುದು…

13 mins ago

ನಿಯಮ ಮೀರಿ ವಾಹನ ನಿಲುಗಡೆ ಶುಲ್ಕ ವಸೂಲಿ

ಎಸ್.ಎಸ್.ಭಟ್ ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿ ನಿಲ್ಲಿಸುವ ವಾಹನಗಳ ಚಾಲಕರಿಂದ ಹಗಲು ದರೋಡೆ  ನಂಜನಗೂಡು: ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿ ನಿಲ್ಲಿಸಲಾಗುವ ವಾಹನಗಳ…

19 mins ago

ಜೊಹಾನ್ಸ್ ಬರ್ಗ್‌ನಲ್ಲಿ ಮಹಾತ್ಮ ಗಾಂಧಿ

ದಿನೇಶ್ ಬಸವಾಪಟ್ಟಣ ಜೊಹಾನ್ಸ್ ಬರ್ಗ್‌ನ ನಗರ ಪ್ರದಕ್ಷಿಣೆ ಸಮಯದಲ್ಲಿ ನಮ್ಮ ಮಾರ್ಗದರ್ಶಿ ಬಿಲ್ಲಿ, ದಕ್ಷಿಣ ಆಫ್ರಿಕನ್ನರಿಗೆ ಬಹಳ ಅತ್ಯಮೂಲ್ಯ ಅಕ…

24 mins ago