ಮೈಸೂರು: ಮೈಸೂರಿನ ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದಲ್ಲಿ ನಡೆಯಲಿರುವ ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಫೆ. 6 ರಿಂದ 11ರವರೆಗೆ ನಡೆಯಲಿರುವ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿ ಜಾತ್ರೆಯಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದು ಜೆಎಸ್ಎಸ್ ವಿದ್ಯಾಪೀಠದ ಕಾರ್ಯದರ್ಶಿ ಎಸ್.ಪಿ.ಮಂಜುನಾಥ್ ತಿಳಿಸಿದರು.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತ್ರಾ ಮಹೋತ್ಸವದಲ್ಲಿ ವೈವಿಧ್ಯಮಯ ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ ಚಟುವಟಿಕೆಗಳ ಅನಾವರಣಗೊಳ್ಳಲಿದೆ ಎಂದು ತಿಳಿಸಿದರು.
ಫೆ.6ಕ್ಕೆ ಕೊಂಡೋತ್ಸವ, 7ಕ್ಕೆ ಸಾಮೂಹಿಕ ವಿವಾಹ, 8ಕ್ಕೆ ರಥೋತ್ಸವ, 9ಕ್ಕೆ ಲಕ್ಷ ದೀಪೋತ್ಸವ, 10ಕ್ಕೆ ತೆಪ್ಪೋತ್ಸವ, 11ರಂದು ಅನ್ನ ಬ್ರಹ್ಮೋತ್ಸವದ ಮೂಲಕ ಮುಕ್ತಾಯಗೊಳ್ಳಲಿದೆ.
ಈ ಆರು ದಿನಗಳು ಭಜನೆ, ರಂಗೋಲಿ, ಚಿತ್ರಕಲೆ, ಗಾಳಿಪಟ, ಚಿತ್ರಸಂತೆ, ಕುಸ್ತಿ, ದನಗಳ ಜಾತ್ರೆ, ಕಪಿಲಾರತಿ, ದೋಣಿ ವಿಹಾರ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ ಎಂದರು.
ಇನ್ನೂ, ಸುತ್ತೂರು ಜಾತ್ರೆಗೆ ಸುಮಾರು 25 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಬರುವ ಭಕ್ತರಿಗೆ ಪ್ರಸಾದ ವಿನಿಯೋಗಿಸಲು ಗೋದಾಮಿನಲ್ಲಿ ದಿನಸಿ ಪದಾರ್ಥಗಳ ಶೇಖರಣೆ ಮಾಡಲಾಗಿದೆ. 1000 ಕ್ವಿಂಟಾಲ್ ಅಕ್ಕಿ, 180 ಕ್ವಿಂಟಾಲ್ ತೊಗರಿಬೇಳೆ, 1500 ಕ್ಯಾನ್ ಅಡುಗೆ ಎಣ್ಣೆ, 12 ಟನ್ ಬೆಲ್ಲ, 4000 ಕೆಜಿ ಖಾರದಪುಡಿ, 250 ಕ್ವಿಂಟಾಲ್ ಸಕ್ಕರೆ, 500 ಕೆ.ಜಿ. ನಂದಿನಿ ತುಪ್ಪ, 8000 ಲೀ. ಹಾಲು, 28,000 ಲೀ. ಮೊಸರು, 5000 ಕೆ.ಜಿ. ಉಪ್ಪಿನಕಾಯಿ ಸಿದ್ದಗೊಂಡಿದೆ ಎಂದು ತಿಳಿಸಿದರು.
ಕೃಷಿ ಜಾತ್ರೆಗೆ ಮುಂದಾದ ಸುತ್ತೂರು ಮಠ : ಸುತ್ತೂರು ಜಾತ್ರೆಯಲ್ಲಿ ಈ ಬಾರಿ ಕೃಷಿ ಬ್ರಹ್ಮಾಂಡ ಮುಖ್ಯ ಆರರ್ಷಣೆಯಾಗಿದೆ. ಒಂದು ಎಕರೆ ಜಾಗದಲ್ಲಿ 150 ಬೆಳೆ ಬೆಳೆದಿದ್ದಾರೆ. ಪ್ರತಿ ವರ್ಷದಂತೆ ಈ ಭಾರಿಯು ಸಹ ಕೃಷಿ ಮೇಳ ಆಯೋಜನೆ ಮಾಡಲಾಗಿದೆ. ಕೃಷಿ ಮೇಳದಲ್ಲಿ ವಿವಿಧ ಬಗೆಯ ಹೂ, ತರಕಾರಿ, ಸಸ್ಯಕಾಶಿ ಪ್ರದರ್ಶನ ಇರಲಿದೆ. ಕೃಷಿ ಮೇಳವು ದೇಸಿ ಸೊಗಡಿನ ಮಾದರಿಯಲ್ಲಿ ನಿರ್ಮಾಣಗೊಂಡಿದೆ.
ಅಮಿತ್ ಶಾ ಅವರಿಂದ ಅತಿಥಿ ಗೃಹ ಉದ್ಘಾಟಣೆ : ಫೆ.೧೦ ರಂದು ಶ್ರೀಮತಿ ಪಾರ್ವತಮ್ಮ ಹಾಗೂ ಡಾ.ಶಾಮನೂರು ಶಿವಶಂಕರಪ್ಪ ಅತಿಥಿಗೃಹವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಗಮಿಸಿ ಉದ್ಘಾಟನೆ ಮಾಡಲಿದ್ದಾರೆ ಎಂದು ಮಠದ ಆಡಳಿತ ಮಂಡಳಿ ತಿಳಿಸಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…