ಜಿಲ್ಲೆಗಳು

ಫೆ.೬ ರಿಂದ ೬ ದಿನಗಳ ಕಾಲ ನಡೆಯಲಿರುವ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ!

ಮೈಸೂರು: ಮೈಸೂರಿನ ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದಲ್ಲಿ ನಡೆಯಲಿರುವ ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಫೆ. 6 ರಿಂದ 11ರವರೆಗೆ ನಡೆಯಲಿರುವ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿ ಜಾತ್ರೆಯಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದು ಜೆಎಸ್‌ಎಸ್ ವಿದ್ಯಾಪೀಠದ ಕಾರ್ಯದರ್ಶಿ ಎಸ್.ಪಿ.ಮಂಜುನಾಥ್ ತಿಳಿಸಿದರು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತ್ರಾ ಮಹೋತ್ಸವದಲ್ಲಿ ವೈವಿಧ್ಯಮಯ ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ ಚಟುವಟಿಕೆಗಳ ಅನಾವರಣಗೊಳ್ಳಲಿದೆ ಎಂದು ತಿಳಿಸಿದರು.

ಫೆ.6ಕ್ಕೆ ಕೊಂಡೋತ್ಸವ, 7ಕ್ಕೆ ಸಾಮೂಹಿಕ ವಿವಾಹ, 8ಕ್ಕೆ ರಥೋತ್ಸವ, 9ಕ್ಕೆ ಲಕ್ಷ ದೀಪೋತ್ಸವ, 10ಕ್ಕೆ ತೆಪ್ಪೋತ್ಸವ, 11ರಂದು ಅನ್ನ ಬ್ರಹ್ಮೋತ್ಸವದ ಮೂಲಕ ಮುಕ್ತಾಯಗೊಳ್ಳಲಿದೆ.

ಈ ಆರು ದಿನಗಳು ಭಜನೆ, ರಂಗೋಲಿ, ಚಿತ್ರಕಲೆ, ಗಾಳಿಪಟ, ಚಿತ್ರಸಂತೆ, ಕುಸ್ತಿ, ದನಗಳ ಜಾತ್ರೆ, ಕಪಿಲಾರತಿ, ದೋಣಿ ವಿಹಾರ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ ಎಂದರು.

ಇನ್ನೂ, ಸುತ್ತೂರು ಜಾತ್ರೆಗೆ ಸುಮಾರು 25 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಬರುವ ಭಕ್ತರಿಗೆ ಪ್ರಸಾದ ವಿನಿಯೋಗಿಸಲು ಗೋದಾಮಿನಲ್ಲಿ ದಿನಸಿ ಪದಾರ್ಥಗಳ ಶೇಖರಣೆ ಮಾಡಲಾಗಿದೆ. 1000 ಕ್ವಿಂಟಾಲ್ ಅಕ್ಕಿ, 180 ಕ್ವಿಂಟಾಲ್ ತೊಗರಿಬೇಳೆ, 1500 ಕ್ಯಾನ್ ಅಡುಗೆ ಎಣ್ಣೆ, 12 ಟನ್ ಬೆಲ್ಲ, 4000 ಕೆಜಿ ಖಾರದಪುಡಿ, 250 ಕ್ವಿಂಟಾಲ್ ಸಕ್ಕರೆ, 500 ಕೆ.ಜಿ. ನಂದಿನಿ ತುಪ್ಪ, 8000 ಲೀ. ಹಾಲು, 28,000 ಲೀ. ಮೊಸರು, 5000 ಕೆ.ಜಿ. ಉಪ್ಪಿನಕಾಯಿ ಸಿದ್ದಗೊಂಡಿದೆ ಎಂದು ತಿಳಿಸಿದರು.

ಕೃಷಿ ಜಾತ್ರೆಗೆ ಮುಂದಾದ ಸುತ್ತೂರು ಮಠ : ಸುತ್ತೂರು ಜಾತ್ರೆಯಲ್ಲಿ ಈ ಬಾರಿ ಕೃಷಿ ಬ್ರಹ್ಮಾಂಡ ಮುಖ್ಯ ಆರರ್ಷಣೆಯಾಗಿದೆ. ಒಂದು ಎಕರೆ ಜಾಗದಲ್ಲಿ 150 ಬೆಳೆ ಬೆಳೆದಿದ್ದಾರೆ. ಪ್ರತಿ ವರ್ಷದಂತೆ ಈ ಭಾರಿಯು ಸಹ ಕೃಷಿ ಮೇಳ ಆಯೋಜನೆ ಮಾಡಲಾಗಿದೆ. ಕೃಷಿ ಮೇಳದಲ್ಲಿ ವಿವಿಧ ಬಗೆಯ ಹೂ, ತರಕಾರಿ, ಸಸ್ಯಕಾಶಿ ಪ್ರದರ್ಶನ ಇರಲಿದೆ. ಕೃಷಿ ಮೇಳವು ದೇಸಿ ಸೊಗಡಿನ ಮಾದರಿಯಲ್ಲಿ ನಿರ್ಮಾಣಗೊಂಡಿದೆ.

ಅಮಿತ್‌ ಶಾ ಅವರಿಂದ ಅತಿಥಿ ಗೃಹ ಉದ್ಘಾಟಣೆ : ಫೆ.೧೦ ರಂದು ಶ್ರೀಮತಿ ಪಾರ್ವತಮ್ಮ ಹಾಗೂ ಡಾ.ಶಾಮನೂರು ಶಿವಶಂಕರಪ್ಪ ಅತಿಥಿಗೃಹವನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಆಗಮಿಸಿ ಉದ್ಘಾಟನೆ ಮಾಡಲಿದ್ದಾರೆ ಎಂದು ಮಠದ ಆಡಳಿತ ಮಂಡಳಿ ತಿಳಿಸಿದೆ.

andolanait

Recent Posts

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

26 mins ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

10 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

10 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

10 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

10 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

10 hours ago