ಜಿಲ್ಲೆಗಳು

ಫೆ.೬ ರಿಂದ ೬ ದಿನಗಳ ಕಾಲ ನಡೆಯಲಿರುವ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ!

ಮೈಸೂರು: ಮೈಸೂರಿನ ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದಲ್ಲಿ ನಡೆಯಲಿರುವ ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಫೆ. 6 ರಿಂದ 11ರವರೆಗೆ ನಡೆಯಲಿರುವ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿ ಜಾತ್ರೆಯಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದು ಜೆಎಸ್‌ಎಸ್ ವಿದ್ಯಾಪೀಠದ ಕಾರ್ಯದರ್ಶಿ ಎಸ್.ಪಿ.ಮಂಜುನಾಥ್ ತಿಳಿಸಿದರು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತ್ರಾ ಮಹೋತ್ಸವದಲ್ಲಿ ವೈವಿಧ್ಯಮಯ ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ ಚಟುವಟಿಕೆಗಳ ಅನಾವರಣಗೊಳ್ಳಲಿದೆ ಎಂದು ತಿಳಿಸಿದರು.

ಫೆ.6ಕ್ಕೆ ಕೊಂಡೋತ್ಸವ, 7ಕ್ಕೆ ಸಾಮೂಹಿಕ ವಿವಾಹ, 8ಕ್ಕೆ ರಥೋತ್ಸವ, 9ಕ್ಕೆ ಲಕ್ಷ ದೀಪೋತ್ಸವ, 10ಕ್ಕೆ ತೆಪ್ಪೋತ್ಸವ, 11ರಂದು ಅನ್ನ ಬ್ರಹ್ಮೋತ್ಸವದ ಮೂಲಕ ಮುಕ್ತಾಯಗೊಳ್ಳಲಿದೆ.

ಈ ಆರು ದಿನಗಳು ಭಜನೆ, ರಂಗೋಲಿ, ಚಿತ್ರಕಲೆ, ಗಾಳಿಪಟ, ಚಿತ್ರಸಂತೆ, ಕುಸ್ತಿ, ದನಗಳ ಜಾತ್ರೆ, ಕಪಿಲಾರತಿ, ದೋಣಿ ವಿಹಾರ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ ಎಂದರು.

ಇನ್ನೂ, ಸುತ್ತೂರು ಜಾತ್ರೆಗೆ ಸುಮಾರು 25 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಬರುವ ಭಕ್ತರಿಗೆ ಪ್ರಸಾದ ವಿನಿಯೋಗಿಸಲು ಗೋದಾಮಿನಲ್ಲಿ ದಿನಸಿ ಪದಾರ್ಥಗಳ ಶೇಖರಣೆ ಮಾಡಲಾಗಿದೆ. 1000 ಕ್ವಿಂಟಾಲ್ ಅಕ್ಕಿ, 180 ಕ್ವಿಂಟಾಲ್ ತೊಗರಿಬೇಳೆ, 1500 ಕ್ಯಾನ್ ಅಡುಗೆ ಎಣ್ಣೆ, 12 ಟನ್ ಬೆಲ್ಲ, 4000 ಕೆಜಿ ಖಾರದಪುಡಿ, 250 ಕ್ವಿಂಟಾಲ್ ಸಕ್ಕರೆ, 500 ಕೆ.ಜಿ. ನಂದಿನಿ ತುಪ್ಪ, 8000 ಲೀ. ಹಾಲು, 28,000 ಲೀ. ಮೊಸರು, 5000 ಕೆ.ಜಿ. ಉಪ್ಪಿನಕಾಯಿ ಸಿದ್ದಗೊಂಡಿದೆ ಎಂದು ತಿಳಿಸಿದರು.

ಕೃಷಿ ಜಾತ್ರೆಗೆ ಮುಂದಾದ ಸುತ್ತೂರು ಮಠ : ಸುತ್ತೂರು ಜಾತ್ರೆಯಲ್ಲಿ ಈ ಬಾರಿ ಕೃಷಿ ಬ್ರಹ್ಮಾಂಡ ಮುಖ್ಯ ಆರರ್ಷಣೆಯಾಗಿದೆ. ಒಂದು ಎಕರೆ ಜಾಗದಲ್ಲಿ 150 ಬೆಳೆ ಬೆಳೆದಿದ್ದಾರೆ. ಪ್ರತಿ ವರ್ಷದಂತೆ ಈ ಭಾರಿಯು ಸಹ ಕೃಷಿ ಮೇಳ ಆಯೋಜನೆ ಮಾಡಲಾಗಿದೆ. ಕೃಷಿ ಮೇಳದಲ್ಲಿ ವಿವಿಧ ಬಗೆಯ ಹೂ, ತರಕಾರಿ, ಸಸ್ಯಕಾಶಿ ಪ್ರದರ್ಶನ ಇರಲಿದೆ. ಕೃಷಿ ಮೇಳವು ದೇಸಿ ಸೊಗಡಿನ ಮಾದರಿಯಲ್ಲಿ ನಿರ್ಮಾಣಗೊಂಡಿದೆ.

ಅಮಿತ್‌ ಶಾ ಅವರಿಂದ ಅತಿಥಿ ಗೃಹ ಉದ್ಘಾಟಣೆ : ಫೆ.೧೦ ರಂದು ಶ್ರೀಮತಿ ಪಾರ್ವತಮ್ಮ ಹಾಗೂ ಡಾ.ಶಾಮನೂರು ಶಿವಶಂಕರಪ್ಪ ಅತಿಥಿಗೃಹವನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಆಗಮಿಸಿ ಉದ್ಘಾಟನೆ ಮಾಡಲಿದ್ದಾರೆ ಎಂದು ಮಠದ ಆಡಳಿತ ಮಂಡಳಿ ತಿಳಿಸಿದೆ.

andolanait

Recent Posts

ಕಾಂಗ್ರೆಸ್‌ನಲ್ಲಿ ಡ್ರೈವರ್‌ ಬದಲಾಗಿದ್ದಾರೆ, ಬಸ್‌, ಎಂಜಿನ್‌ ಕೆಟ್ಟು ಹೋಗಿದೆ: ಆರ್.ಅಶೋಕ್‌ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಡ್ರೈವರ್‌ ಬದಲಾಗಿದ್ದಾರೆ ಅಷ್ಟೇ. ಬಸ್‌, ಎಂಜಿನ್‌ ಕೆಟ್ಟು ಹೋಗಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ಈ…

2 hours ago

ಮಡಿಕೇರಿ| ಹುಲಿ ದಾಳಿಗೆ ಜಾನುವಾರು ಬಲಿ

ಮಡಿಕೇರಿ: ತಾಲ್ಲೂಕಿನ ಕತ್ತಲೆಕಾಡು ಗ್ರಾಮದಲ್ಲಿ ವನ್ಯಪ್ರಾಣಿ ದಾಳಿಗೆ ಜಾನುವಾರು ಬಲಿಯಾಗಿದ್ದು, ಹುಲಿ ದಾಳಿಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮದ ಆನಂದ…

2 hours ago

ಡಿಕೆಶಿ ಸಂಪುಟದಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸ್ಥಾನ ನೀಡಿ: ಶಾಸಕ ಹರೀಶ್‌ ಗೌಡ

ಮೈಸೂರು: ಡಿಕೆಶಿ ಸಂಪುಟದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡುವಂತೆ ಶಾಸಕ ಹರೀಶ್‌ ಗೌಡ ಹೇಳಿದ್ದಾರೆ. ಈ…

2 hours ago

ಕಾಂಕ್ರೋಚ್‌ ಜನತಾ ಪಕ್ಷದ ಸಂಸ್ಥಾಪಕ ಜೂ.6ಕ್ಕೆ ಭಾರತಕ್ಕೆ ವಾಪಸ್‌

ನವದೆಹಲಿ: ಕಾಂಕ್ರೋಚ್‌ ಜನತಾ ಪಕ್ಷದ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಜೂನ್.‌6ರಂದು ಭಾರತಕ್ಕೆ ಮರಳಲಿದ್ದು, ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹೊಸದಾಗಿ…

2 hours ago

3000 ರೂಗೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಈಗ ಸಚಿವೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತಿಂಗಳಿಗೆ 3000 ರೂ ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಅವರು ಶಾಸಕಿಯಾಗಿ ಆಯ್ಕೆಯಾಗಿ, ಸಚಿವೆಯಾಗಿ…

3 hours ago

ಸಚಿವ ಸ್ಥಾನಕ್ಕಾಗಿ ನಾನು ದೆಹಲಿಗೆ ಹೋಗಲ್ಲ: ಯು.ಟಿ.ಖಾದರ್‌

ಚಿಕ್ಕಬಳ್ಳಾಪುರ: ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ. ನಾನು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದೆಹಲಿಗೆ…

3 hours ago