ಜಿಲ್ಲೆಗಳು

ಜಂಬೂಸವಾರಿಗೆ ಸಕಲ ಸಿದ್ಧತೆ: ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು : ಎರಡು ವರ್ಷ ಸರಳ ದಸರಾ ಆಚರಣೆ ಮಾಡಲಾಗಿದ್ದು ಈ ಬಾರಿ ಅದ್ದೂರಿಯಾಗಿ ದಸರಾ ಆಯೋಜಿಸಲಾಗುತ್ತಿದೆ. ಜಂಬೂಸವಾರಿಗೆ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ‌.ಸೋಮಶೇಖರ್ ಅವರು ಹೇಳಿದರು.

ಮಾವುತ ಮತ್ತು ಕಾವಾಡಿಗರು ಮತ್ತವರ ಕುಟುಂಬದವರಿಗೆ ಅರಮನೆ ಆವರಣದಲ್ಲಿ ಉಪಹಾರ ಬಡಿಸಿ ಯೋಗಕ್ಷೇಮ ವಿಚಾರಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಜಂಬೂಸವಾರಿ ಸಾಗುವ ರಸ್ತೆಯಲ್ಲಿ ಸಾರ್ವಜನಿಕರಿಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಆನೆಗಳಿಗೆ ಒಂದು ತಿಂಗಳಿಂದ ತರಬೇತಿ ನೀಡಲಾಗಿದೆ. ನಾಳೆ ಸಂಜೆ ಜಂಬೂಸವಾರಿ ಸಾಗಲಿದೆ, ಇದರ ಜೊತೆಗೆ 40 ಸ್ತಬ್ಧಚಿತ್ರಗಳು, ಕಲಾತಂಡಗಳು ಮೆರವಣಿಗೆಯಲ್ಲಿ ಸಾಗಲಿವೆ ಎಂದು ಹೇಳಿದರು.

ಬಂದೋಬಸ್ತ್ ಗಾಗಿ ಸುಮಾರು 4 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ರೀತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯಪಾಲರು, ಮುಖ್ಯಮಂತ್ರಿಗಳು, ಹೈಕೋರ್ಟ್ ನ್ಯಾಯಾಧೀಶರು ಸೇರಿದಂತೆ ಗಣ್ಯಾತಿಗಣ್ಯರು ಆಗಮಿಸಲಿದ್ದಾರೆ ಎಂದು ಹೇಳಿದರು.

ಪಾಸ್ ವಿತರಣೆ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಎಷ್ಟು ಸ್ಥಳಾವಕಾಶ ಇದೆಯೋ ಅಷ್ಟು ವ್ಯವಸ್ಥೆ ಮಾಡಲಾಗಿದೆ. ದಸರಾ ಎಂದರೆ ಕೇವಲ ಪಾಸ್ ಅಲ್ಲ. ಒಂದು ವಾರಗಳ ನಡೆದ ಯುವ ದಸರಾ, ಯುವ ಸಂಭ್ರಮ, ರೈತ ದಸರಾ, ಕುಸ್ತಿ ಇದ್ಯಾವುದಕ್ಕೂ ಪಾಸ್ ಇರಲಿಲ್ಲ. 15-20 ಲಕ್ಷ ಜನ ಸೇರುವ ನಿರೀಕ್ಷೆಯಿದೆ ಎಂದು ಹೇಳಿದರು.

ದಸರಾ ಉಪಸಮಿತಿ ವ್ಯವಸ್ಥಿತವಾಗಿ ಕಾರ್ಯಕ್ರಮಗಳನ್ನು ಆಯೋಜಿಸಿತ್ತು. ಅಪ್ಪು ನಮನ, ಯುವ ದಸರಾ, ರೈತ ದಸರಾ, ಕವಿಗೋಷ್ಠಿ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಿದವು. ಮಹಾರಾಣಿ ಅವರು ಕೂಡ ಎಲ್ಲಾ ರೀತಿಯ ಸಹಕಾರ ನೀಡಿದರು. ಅಧಿಕಾರಿಗಳು, ಮೈಸೂರು ಜನತೆಯ ಸಂಪೂರ್ಣ ಸಹಕಾರದಿಂದ ಎಲ್ಲವೂ ಸುಸೂತ್ರವಾಗಿ ಸಾಗಿದೆ ಎಂದು ಹೇಳಿದರು.

andolana

Recent Posts

ಮೇಲುಕೋಟೆಯಲ್ಲಿ ವಾಹನ ದಟ್ಟಣೆ ; ನಿಯಂತ್ರಣಕ್ಕೆ ಶಾಸಕರ ಸೂಚನೆ

ಮೇಲುಕೋಟೆ : ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯದ ಸುತ್ತ ಮತ್ತು ಉತ್ಸವ ಬೀದಿಗಳಲ್ಲಿ ಭಕ್ತರ ವಾಹನ ನಿಲುಗಡೆಯನ್ನು ನಿಯಂತ್ರಿಸಬೇಕು ಎಂದು ಮೇಲುಕೋಟೆ…

8 mins ago

ಮಂಗಳೂರು ಬಂದರಿಗೆ ಬಂದ ಎಲ್‌ಪಿಜಿ ಹೊತ್ತ ಎರಡು ಹಡಗು

ಮಂಗಳೂರು : ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ನಡುವೆ ರಷ್ಯಾದಿಂದ 96 ಸಾವಿರ ಮೆಟ್ರಿಕ್ ಟನ್ ಕಚ್ಚಾತೈಲ…

51 mins ago

ನಮ್ಮ ವೈರಿಗಳಿಗೆ ಮಾತ್ರ ಹೊರ್ಮುಜ್‌ ಮುಚ್ಚಿದೆ : ಇರಾನ್‌

ವಿಶ್ವಸಂಸ್ಥೆ : ಇರಾನ್‌ ವೈರಿಗಳು ಹಾಗೂ ಅವರೊಂದಿಗೆ ನಂಟು ಹೊಂದಿರುವ ರಾಷ್ಟ್ರಗಳಿಗೆ ಮಾತ್ರ ಹೊರ್ಮುಜ್‌ ಜಲಸಂಧಿ ಮುಚ್ಚಲಾಗಿದೆ ಎಂದು ವಿಶ್ವಸಂಸ್ಥೆಯ…

2 hours ago

ಹುಬ್ಬೆ ಹುಣಸೆ ಜಲಾಶಯಕ್ಕೂ ಕಾವೇರಿ ನೀರು : ಶಾಸಕ ಮಂಜುನಾಥ್‌ ಭರವಸೆ

ಹನೂರು : ವಿಧಾನಸಭಾ ಕ್ಷೇತ್ರದ ಪ್ರಮುಖ ಜಲಾಶಯಗಳ ಪೈಕಿ ರಾಮನ ಗುಡ್ಡ ಜಲಾಶಯಕ್ಕೆ ಕಳೆದ ಎರಡು ತಿಂಗಳ ಹಿಂದೆ ಕಾವೇರಿ…

2 hours ago

ಕತಾರ್‌ನಲ್ಲಿ ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್‌ ಪತನ: 6 ಜನರು ಸಾವು

ಕೈರೋ: ತಾಂತ್ರಿಕ ದೋಷದಿಂದಾಗಿ ಕತಾರ್‌ ಹೆಲಿಕಾಪ್ಟರ್‌ ಅಪಘಾತವಾಗಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ಹೇಳಿದೆ. ಕತಾರ್‌ನ ಪ್ರಾದೇಶಿಕ ನೀರಿನಲ್ಲಿ…

3 hours ago

ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ತಮ್ಮ ಸರ್ಕಾರ ಕ್ರಮ ಕೈಗೊಂಡಿದ್ದು, 6ನೇ ಹಂತದ ಕಾವೇರಿ ನೀರು…

3 hours ago