ಜಿಲ್ಲೆಗಳು

ದಸರಾ ಸುಗಮ ಸಂಚಾರಕ್ಕೆ ಸಕಲ ಸಿದ್ಧತೆ

ಬಸ್‌ಗಳ ಮಾರ್ಗಸೂಚಿ ಬಿಡುಗಡೆ ಮಾಡಿದ ಸಂಚಾರ ಪೊಲೀಸರು

ಮೈಸೂರು: ದಸರಾ ಮಹೋತ್ಸವದ ಪ್ರಯುಕ್ತ ಅ.೪ ಮತ್ತು ೫ ರಂದು ವಾಹನ ದಟ್ಟಣೆ ಕಡಿಮೆ ಮಾಡಲು ಮತ್ತು ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಗ್ರಾಮಾಂತರ ಸಾರಿಗೆ ಬಸ್ಸುಗಳು ಸಂಚರಿಸುವ ಮಾರ್ಗ ಬದಲಿಸಲಾಗಿದೆ.

ನಗರದ ಹೊರ ಭಾಗಗಳಿಂದ ಬರುವ ಹಾಗೂ ನಗರದಿಂದ ಹೊರ ಹೋಗುವ
ಗ್ರಾಮಾಂತರ ಸಾರಿಗೆ ಸಂಸ್ಥೆ ಬಸ್ಸುಗಳು ಸಂಚರಿಸುವ ಮಾರ್ಗಗಳು ಇಂತಿವೆ.

೧. ಮೈಸೂರು-ಬೆಂಗಳೂರು

ಮೈಸೂರು-ಬೆಂಗಳೂರು ರಸ್ತೆ- ನಾಡಪ್ರಭು ಕೆಂಪೇಗೌಡ ವೃತ್ತ- ಎಡ ತಿರುವು- ರಿಂಗ್ ರಸ್ತೆ ಮೂಲಕ ಮಹದೇವಪುರ ರಿಂಗ್ ರಸ್ತೆ ಜಂಕ್ಷನ್- ಬಲ ತಿರುವು- ಸಾತಗಳ್ಳಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ.

೨. ಹುಣಸೂರು ಮಾರ್ಗ
ಆಗಮನ:
ಹುಣಸೂರು ರಸ್ತೆ- ಆರ್.ವೆಂಕಟರಮಣಯ್ಯ ವೃತ್ತ (ಪಡುವಾರಹಳ್ಳಿ)- ಬಯಲು ರಂಗಮಂದಿರ ರಸ್ತೆ- ಬೋಗಾದಿ ರಸ್ತೆ ಜಂಕ್ಷನ್- ಎಂ.ಡಿ ಜಂಕ್ಷನ್- ಡಾ. ಪದ್ಮ ವೃತ್ತ- ಅಗ್ನಿಶಾಮಕ ಠಾಣೆ ಜಂಕ್ಷನ್- ಅಂಡರ್‌ಬ್ರಿಡ್ಜ್ ರಸ್ತೆ ಮೂಲಕ- ಏಕಲವ್ಯ ವೃತ್ತ- ಕೆ.ಆರ್.ಬಿ ರಸ್ತೆ-ಮಹಾರಾಜ ಕಾಲೇಜು ಮೈದಾನದ ತಾತ್ಕಾಲಿಕ ಬಸ್ ನಿಲ್ದಾಣ.
ನಿರ್ಗಮನ:
ಮಹಾರಾಜ ಕಾಲೇಜು ಮೈದಾನದ ತಾತ್ಕಾಲಿಕ ಬಸ್ ನಿಲ್ದಾಣ- ಕೆ.ಆರ್.ಬಿ-ರಸ್ತೆ- ಕೌಟಿಲ್ಯ ವೃತ್ತ- ಡಿ.ಸಿ. ಕಚೇರಿ ಆರ್ಚ್ ಗೇಟ್ ಜಂಕ್ಷನ್- ಹುಣಸೂರು ರಸ್ತೆ- ಕಲಾ ಮಂದಿರ ಜಂಕ್ಷನ್- ವಾಲ್ಮೀಕಿ ಜಂಕ್ಷನ್ ಮಾರ್ಗವಾಗಿ ಮುಂದೆ ಸಾಗುವುದು.

೩. ಬೋಗಾದಿ ಮಾರ್ಗ
ಆಗಮನ:
ಬೋಗಾದಿ ರಸ್ತೆ- ಎಂ.ಡಿ ಜಂಕ್ಷನ್- ಡಾ.ಪದ್ಮ ವೃತ್ತ- ಅಗ್ನಿಶಾಮಕ ಠಾಣೆ ಜಂಕ್ಷನ್- ಅಂಡರ್ ಬ್ರಿಡ್ಜ್ ರಸ್ತೆ ಮೂಲಕ- ಏಕಲವ್ಯ ವೃತ್ತ- ಕೆ.ಆರ್.ಬಿ ರಸ್ತೆ- ಮಹಾರಾಜ ಕಾಲೇಜು ಮೈದಾನದ ತಾತ್ಕಾಲಿಕ ಬಸ್ ನಿಲ್ದಾಣ.

ನಿರ್ಗಮನ:
ಮಹಾರಾಜ ಕಾಲೇಜು ಮೈದಾನದ ತಾತ್ಕಾಲಿಕ ಬಸ್ ನಿಲ್ದಾಣ – ಕೆ.ಆರ್.ಬಿ ರಸ್ತೆ- ಕೌಟಿಲ್ಯ ವೃತ್ತ- ಬೋಗಾದಿ ರಸ್ತೆ – .ಎಂ.ಡಿ ಜಂಕ್ಷನ್ ಮೂಲಕ ಬೋಗಾದಿ ರಸ್ತೆಯಲ್ಲಿ ಮುಂದೆ ಸಾಗುವುದು.

೪. ಎಚ್.ಡಿ. ಕೋಟೆ ಮಾರ್ಗ
ಆಗಮನ:
ಮಾನಂದವಾಡಿ ರಸ್ತೆ-ಶ್ರೀನಿವಾಸ ವೃತ್ತ- ಜೆ.ಎಲ್.ಬಿ. ರಸ್ತೆ- ವೇದಾಂತ ಹೆಮ್ಮಿಗೆ ವೃತ್ತ (ಎಸ್‌ಡಿಎಂ ಕಾಲೇಜು) – ಕಾಂತರಾಜ ಅರಸು ರಸ್ತೆ- ಅಶೋಕ ವೃತ್ತ (ಬಲ್ಲಾಳ್)- ಕೆ.ಜಿ.ಕೊಪ್ಪಲು ಅಂಡರ್ ಬ್ರಿಡ್ಜ್ ಜಂಕ್ಷನ್- ಕೆ.ಆರ್.ಬಿ ರಸ್ತೆ- ಏಕಲವ್ಯ ವೃತ್ತ- ಮಹಾರಾಜ ಕಾಲೇಜು ಮೈದಾನದ ತಾತ್ಕಾಲಿಕ ಬಸ್ ನಿಲ್ದಾಣ.

ನಿರ್ಗಮನ:
ಮಹಾರಾಜ ಕಾಲೇಜು ಮೈದಾನದ ತಾತ್ಕಾಲಿಕ ಬಸ್ ನಿಲ್ದಾಣ – ಕೆ.ಆರ್.ಬಿ ರಸ್ತೆ- ಕೌಟಿಲ್ಯ ವೃತ್ತ- ರಾಧಾಕೃಷ್ಣ ಮಾರ್ಗ- ಪ್ರಾಚ್ಯ ವಸ್ತುಸಂಗ್ರಹಾಲಯದ ಕಟ್ಟಡದ ಪೂರ್ವ ಭಾಗದ ರಸ್ತೆಗೆ ಬಲತಿರುವು ಪಡೆದು ಕೆ.ಆರ್.ಬಿ ರಸ್ತೆ- ಏಕಲವ್ಯ ವೃತ್ತ- ಕೆ.ಜಿ.ಕೊಪ್ಪಲು ರೈಲ್ವೆ ಅಂಡರ್ ಬ್ರಿಡ್ಜ್ ಜಂಕ್ಷನ್- ಅಶೋಕ ವೃತ್ತ (ಬಲ್ಲಾಳ್)- ವೇದಾಂತ ಹೆಮ್ಮಿಗೆ ವೃತ್ತ (ಎಸ್.ಡಿ.ಎಂ)- ಜೆ.ಎಲ್.ಬಿ ರಸ್ತೆ- ಶ್ರೀನಿವಾಸ ವೃತ್ತ- ಮಾನಂದವಾಡಿ ರಸ್ತೆ ಮೂಲಕ ಸಾಗುವುದು.

೫. ನಂಜನಗೂಡು ಮಾರ್ಗ
ನಂಜನಗೂಡು ರಸ್ತೆಯಲ್ಲಿ ಗುಂಡೂರಾವ್ ನಗರದ ಮೈದಾನದಲ್ಲಿ ನಿಲುಗಡೆ ಮಾಡಿ ಪ್ರಯಾಣಿಕರನ್ನು ಇಳಿಸಿ ಮತ್ತು ಹತ್ತಿಸಿಕೊಂಡು ನಂಜನಗೂಡು ರಸ್ತೆ ಮೂಲಕ ಮುಂದೆ ಸಾಗಬೇಕು. (ಗುಂಡೂರಾವ್ ನಗರದ ಮೈದಾನದಿಂದ ನಗರದ ಕಡೆಗೆ ಪ್ರವೇಶಿಸುವಂತಿಲ್ಲ.)

೬. ಬನ್ನೂರು, ತಿ.ನರಸೀಪುರ ಮಾರ್ಗ
ಟಿ.ನರಸಿಪುರ ರಸ್ತೆ ಟಿ ಜಂಕ್ಷನ್- ಲಲಿತಮಹಲ್ ರಸ್ತೆ ಮೂಲಕ ಲಲಿತಮಹಲ್ ಆಟದ ಮೈದಾನದಲ್ಲಿ ನಿಲುಗಡೆ ಮಾಡಿ ಪ್ರಯಾಣಿಕರನ್ನು ಇಳಿಸಿ ಮತ್ತು ಹತ್ತಿಸಿಕೊಂಡು ಟಿ.ನರಸೀಪುರ ರಸ್ತೆ ಮೂಲಕ ಮುಂದೆ ಸಾಗಬೇಕು. (ಲಲಿತಮಹಲ್ ಮೈದಾನದಿಂದ ನಗರದ ಕಡೆಗೆ ಪ್ರವೇಶಿಸುವಂತಿಲ್ಲ.)

ಭಾಗ-೦೨
ಅ.೫ರಂದು ಬೆಳಿಗ್ಗೆ ೭ರಿಂದ ರಾತ್ರಿ ೯ರವರೆಗೆ ನಗರ ವ್ಯಾಪ್ತಿಯಲ್ಲಿ
ನಗರ ಸಾರಿಗೆ ಬಸ್ಸುಗಳು ಸಂಚರಿಸುವ ಮಾರ್ಗ ಮತ್ತು ನಿಲುಗಡೆಯ ಸ್ಥಳ

ಕುವೆಂಪುನಗರ, ರಾಮಕೃಷ್ಣನಗರ ಹಾಗೂ ಸರಸ್ವತಿಪುರಂ ಕಡೆಯಿಂದ ನಗರಕ್ಕೆ ಆಗುಸುವ/ ನಿರ್ಗಮಿಸುವ ನಗರ ಸಾರಿಗೆ ಬಸ್ಸುಗಳು ರಾಮಸ್ವಾಮಿ ವೃತ್ತದ ಬಳಿ ನಿಲುಗಡೆ ಮಾಡಿ ಪ್ರಯಾಣಿಕರನ್ನು ಇಳಿಸಿ ಮತ್ತು ಹತ್ತಿಸಿಕೊಂಡು ಮುಂದೆ ಸಾಗಬೇಕು.

 

andolana

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

3 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

3 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

3 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

3 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

3 hours ago