ಜಿಲ್ಲೆಗಳು

ದಸರಾ ಸುಗಮ ಸಂಚಾರಕ್ಕೆ ಸಕಲ ಸಿದ್ಧತೆ

ಬಸ್‌ಗಳ ಮಾರ್ಗಸೂಚಿ ಬಿಡುಗಡೆ ಮಾಡಿದ ಸಂಚಾರ ಪೊಲೀಸರು

ಮೈಸೂರು: ದಸರಾ ಮಹೋತ್ಸವದ ಪ್ರಯುಕ್ತ ಅ.೪ ಮತ್ತು ೫ ರಂದು ವಾಹನ ದಟ್ಟಣೆ ಕಡಿಮೆ ಮಾಡಲು ಮತ್ತು ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಗ್ರಾಮಾಂತರ ಸಾರಿಗೆ ಬಸ್ಸುಗಳು ಸಂಚರಿಸುವ ಮಾರ್ಗ ಬದಲಿಸಲಾಗಿದೆ.

ನಗರದ ಹೊರ ಭಾಗಗಳಿಂದ ಬರುವ ಹಾಗೂ ನಗರದಿಂದ ಹೊರ ಹೋಗುವ
ಗ್ರಾಮಾಂತರ ಸಾರಿಗೆ ಸಂಸ್ಥೆ ಬಸ್ಸುಗಳು ಸಂಚರಿಸುವ ಮಾರ್ಗಗಳು ಇಂತಿವೆ.

೧. ಮೈಸೂರು-ಬೆಂಗಳೂರು

ಮೈಸೂರು-ಬೆಂಗಳೂರು ರಸ್ತೆ- ನಾಡಪ್ರಭು ಕೆಂಪೇಗೌಡ ವೃತ್ತ- ಎಡ ತಿರುವು- ರಿಂಗ್ ರಸ್ತೆ ಮೂಲಕ ಮಹದೇವಪುರ ರಿಂಗ್ ರಸ್ತೆ ಜಂಕ್ಷನ್- ಬಲ ತಿರುವು- ಸಾತಗಳ್ಳಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ.

೨. ಹುಣಸೂರು ಮಾರ್ಗ
ಆಗಮನ:
ಹುಣಸೂರು ರಸ್ತೆ- ಆರ್.ವೆಂಕಟರಮಣಯ್ಯ ವೃತ್ತ (ಪಡುವಾರಹಳ್ಳಿ)- ಬಯಲು ರಂಗಮಂದಿರ ರಸ್ತೆ- ಬೋಗಾದಿ ರಸ್ತೆ ಜಂಕ್ಷನ್- ಎಂ.ಡಿ ಜಂಕ್ಷನ್- ಡಾ. ಪದ್ಮ ವೃತ್ತ- ಅಗ್ನಿಶಾಮಕ ಠಾಣೆ ಜಂಕ್ಷನ್- ಅಂಡರ್‌ಬ್ರಿಡ್ಜ್ ರಸ್ತೆ ಮೂಲಕ- ಏಕಲವ್ಯ ವೃತ್ತ- ಕೆ.ಆರ್.ಬಿ ರಸ್ತೆ-ಮಹಾರಾಜ ಕಾಲೇಜು ಮೈದಾನದ ತಾತ್ಕಾಲಿಕ ಬಸ್ ನಿಲ್ದಾಣ.
ನಿರ್ಗಮನ:
ಮಹಾರಾಜ ಕಾಲೇಜು ಮೈದಾನದ ತಾತ್ಕಾಲಿಕ ಬಸ್ ನಿಲ್ದಾಣ- ಕೆ.ಆರ್.ಬಿ-ರಸ್ತೆ- ಕೌಟಿಲ್ಯ ವೃತ್ತ- ಡಿ.ಸಿ. ಕಚೇರಿ ಆರ್ಚ್ ಗೇಟ್ ಜಂಕ್ಷನ್- ಹುಣಸೂರು ರಸ್ತೆ- ಕಲಾ ಮಂದಿರ ಜಂಕ್ಷನ್- ವಾಲ್ಮೀಕಿ ಜಂಕ್ಷನ್ ಮಾರ್ಗವಾಗಿ ಮುಂದೆ ಸಾಗುವುದು.

೩. ಬೋಗಾದಿ ಮಾರ್ಗ
ಆಗಮನ:
ಬೋಗಾದಿ ರಸ್ತೆ- ಎಂ.ಡಿ ಜಂಕ್ಷನ್- ಡಾ.ಪದ್ಮ ವೃತ್ತ- ಅಗ್ನಿಶಾಮಕ ಠಾಣೆ ಜಂಕ್ಷನ್- ಅಂಡರ್ ಬ್ರಿಡ್ಜ್ ರಸ್ತೆ ಮೂಲಕ- ಏಕಲವ್ಯ ವೃತ್ತ- ಕೆ.ಆರ್.ಬಿ ರಸ್ತೆ- ಮಹಾರಾಜ ಕಾಲೇಜು ಮೈದಾನದ ತಾತ್ಕಾಲಿಕ ಬಸ್ ನಿಲ್ದಾಣ.

ನಿರ್ಗಮನ:
ಮಹಾರಾಜ ಕಾಲೇಜು ಮೈದಾನದ ತಾತ್ಕಾಲಿಕ ಬಸ್ ನಿಲ್ದಾಣ – ಕೆ.ಆರ್.ಬಿ ರಸ್ತೆ- ಕೌಟಿಲ್ಯ ವೃತ್ತ- ಬೋಗಾದಿ ರಸ್ತೆ – .ಎಂ.ಡಿ ಜಂಕ್ಷನ್ ಮೂಲಕ ಬೋಗಾದಿ ರಸ್ತೆಯಲ್ಲಿ ಮುಂದೆ ಸಾಗುವುದು.

೪. ಎಚ್.ಡಿ. ಕೋಟೆ ಮಾರ್ಗ
ಆಗಮನ:
ಮಾನಂದವಾಡಿ ರಸ್ತೆ-ಶ್ರೀನಿವಾಸ ವೃತ್ತ- ಜೆ.ಎಲ್.ಬಿ. ರಸ್ತೆ- ವೇದಾಂತ ಹೆಮ್ಮಿಗೆ ವೃತ್ತ (ಎಸ್‌ಡಿಎಂ ಕಾಲೇಜು) – ಕಾಂತರಾಜ ಅರಸು ರಸ್ತೆ- ಅಶೋಕ ವೃತ್ತ (ಬಲ್ಲಾಳ್)- ಕೆ.ಜಿ.ಕೊಪ್ಪಲು ಅಂಡರ್ ಬ್ರಿಡ್ಜ್ ಜಂಕ್ಷನ್- ಕೆ.ಆರ್.ಬಿ ರಸ್ತೆ- ಏಕಲವ್ಯ ವೃತ್ತ- ಮಹಾರಾಜ ಕಾಲೇಜು ಮೈದಾನದ ತಾತ್ಕಾಲಿಕ ಬಸ್ ನಿಲ್ದಾಣ.

ನಿರ್ಗಮನ:
ಮಹಾರಾಜ ಕಾಲೇಜು ಮೈದಾನದ ತಾತ್ಕಾಲಿಕ ಬಸ್ ನಿಲ್ದಾಣ – ಕೆ.ಆರ್.ಬಿ ರಸ್ತೆ- ಕೌಟಿಲ್ಯ ವೃತ್ತ- ರಾಧಾಕೃಷ್ಣ ಮಾರ್ಗ- ಪ್ರಾಚ್ಯ ವಸ್ತುಸಂಗ್ರಹಾಲಯದ ಕಟ್ಟಡದ ಪೂರ್ವ ಭಾಗದ ರಸ್ತೆಗೆ ಬಲತಿರುವು ಪಡೆದು ಕೆ.ಆರ್.ಬಿ ರಸ್ತೆ- ಏಕಲವ್ಯ ವೃತ್ತ- ಕೆ.ಜಿ.ಕೊಪ್ಪಲು ರೈಲ್ವೆ ಅಂಡರ್ ಬ್ರಿಡ್ಜ್ ಜಂಕ್ಷನ್- ಅಶೋಕ ವೃತ್ತ (ಬಲ್ಲಾಳ್)- ವೇದಾಂತ ಹೆಮ್ಮಿಗೆ ವೃತ್ತ (ಎಸ್.ಡಿ.ಎಂ)- ಜೆ.ಎಲ್.ಬಿ ರಸ್ತೆ- ಶ್ರೀನಿವಾಸ ವೃತ್ತ- ಮಾನಂದವಾಡಿ ರಸ್ತೆ ಮೂಲಕ ಸಾಗುವುದು.

೫. ನಂಜನಗೂಡು ಮಾರ್ಗ
ನಂಜನಗೂಡು ರಸ್ತೆಯಲ್ಲಿ ಗುಂಡೂರಾವ್ ನಗರದ ಮೈದಾನದಲ್ಲಿ ನಿಲುಗಡೆ ಮಾಡಿ ಪ್ರಯಾಣಿಕರನ್ನು ಇಳಿಸಿ ಮತ್ತು ಹತ್ತಿಸಿಕೊಂಡು ನಂಜನಗೂಡು ರಸ್ತೆ ಮೂಲಕ ಮುಂದೆ ಸಾಗಬೇಕು. (ಗುಂಡೂರಾವ್ ನಗರದ ಮೈದಾನದಿಂದ ನಗರದ ಕಡೆಗೆ ಪ್ರವೇಶಿಸುವಂತಿಲ್ಲ.)

೬. ಬನ್ನೂರು, ತಿ.ನರಸೀಪುರ ಮಾರ್ಗ
ಟಿ.ನರಸಿಪುರ ರಸ್ತೆ ಟಿ ಜಂಕ್ಷನ್- ಲಲಿತಮಹಲ್ ರಸ್ತೆ ಮೂಲಕ ಲಲಿತಮಹಲ್ ಆಟದ ಮೈದಾನದಲ್ಲಿ ನಿಲುಗಡೆ ಮಾಡಿ ಪ್ರಯಾಣಿಕರನ್ನು ಇಳಿಸಿ ಮತ್ತು ಹತ್ತಿಸಿಕೊಂಡು ಟಿ.ನರಸೀಪುರ ರಸ್ತೆ ಮೂಲಕ ಮುಂದೆ ಸಾಗಬೇಕು. (ಲಲಿತಮಹಲ್ ಮೈದಾನದಿಂದ ನಗರದ ಕಡೆಗೆ ಪ್ರವೇಶಿಸುವಂತಿಲ್ಲ.)

ಭಾಗ-೦೨
ಅ.೫ರಂದು ಬೆಳಿಗ್ಗೆ ೭ರಿಂದ ರಾತ್ರಿ ೯ರವರೆಗೆ ನಗರ ವ್ಯಾಪ್ತಿಯಲ್ಲಿ
ನಗರ ಸಾರಿಗೆ ಬಸ್ಸುಗಳು ಸಂಚರಿಸುವ ಮಾರ್ಗ ಮತ್ತು ನಿಲುಗಡೆಯ ಸ್ಥಳ

ಕುವೆಂಪುನಗರ, ರಾಮಕೃಷ್ಣನಗರ ಹಾಗೂ ಸರಸ್ವತಿಪುರಂ ಕಡೆಯಿಂದ ನಗರಕ್ಕೆ ಆಗುಸುವ/ ನಿರ್ಗಮಿಸುವ ನಗರ ಸಾರಿಗೆ ಬಸ್ಸುಗಳು ರಾಮಸ್ವಾಮಿ ವೃತ್ತದ ಬಳಿ ನಿಲುಗಡೆ ಮಾಡಿ ಪ್ರಯಾಣಿಕರನ್ನು ಇಳಿಸಿ ಮತ್ತು ಹತ್ತಿಸಿಕೊಂಡು ಮುಂದೆ ಸಾಗಬೇಕು.

 

andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

9 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

9 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

10 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

11 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

15 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

15 hours ago