ಮೈಸೂರು : ಮೈಸೂರು ವಿಶ್ವವಿದ್ಯಾಲಯದ ಕೆ- ಸೆಟ್ ಪರೀಕ್ಷೆಯಲ್ಲಿ ಅವ್ಯವಹಾರ ನಡೆದಿರುವ ಆರೋಪಕ್ಕೆ ಸಂಬಂಧಸಿದಂತೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ ನಡೆಸಿದ ಸಭೆಯ ಶಿಫಾರಸ್ಸಿನಿಂದ ರಾಜ್ಯ ಸರ್ಕಾರ ತನಿಖೆಗೆ ಆದೇಶವನ್ನು ಹೊರಡಿಸಲಾಗಿದ್ದು . ಉನ್ನತ ಶಿಕ್ಷಣ ಇಲಾಖೆ ಉಪ ಕಾರ್ಯದರ್ಶಿ ಸ್ನೇಹಲ್ ಸುಧಾಕರ್ ಲೋಖಂಡೆ, ಮೈವಿವಿ ಕುಲಸಚಿವೆ ಶೈಲಜಾ ಮತ್ತು ಹಣಕಾಸು ಅಧಿಕಾರಿ ಡಾ.ಸಂಗೀತಾ ಗಜಾನನ ಭಟ್ ಸಮಿತಿಗೆ ವರದಿ ನೀಡಲು 1 ತಿಂಗಳ ಗಡುವನ್ನು ನೀಡಲಾಗಿದೆ.
ಈ ಹಿಂದೆ ವಿಶ್ವವಿದ್ಯಾಲಯ ಧನಸಹಾಯ ಆಯೋಗವು (ಯುಜಿಸಿ) 2019ರ ಡಿಸೆಂಬರ್ 19ರಂದು ನಡೆಸಿದ್ದ ಸಭೆಯಲ್ಲಿ ಮಾನ್ಯತೆ ಸಮಿತಿಯ ಶಿಫಾರಸ್ಸುಗಳ ಆಧಾರದ ಮೇಲೆ ಕರ್ನಾಟಕ ರಾಜ್ಯದ ಪರವಾಗಿ ಮೂರು ಕೆ- ಸೆಟ್ ಪರೀಕ್ಷೆಗಳನ್ನು ನಡೆಸಲು ಮೈಸೂರು ವಿಶ್ವವಿದ್ಯಾಲಯಕ್ಕೆ ಮಾನ್ಯತೆ ನೀಡಲು ನಿರ್ಧರಿಸಿತ್ತು. 41 ವಿಷಯಗಳಲ್ಲಿ 2020 ಜನವರಿ 14ರಿಂದ ಮೂರು ವರ್ಷಗಳವರೆಗೆ ಪ್ರತಿ ವರ್ಷ ಒಂದು ಬಾರಿಗೆ ಕೆ- ಸೆಟ್ ಪರೀಕ್ಷೆಯನ್ನು ನಡೆಸಲು ಮಾನ್ಯತೆ ನೀಡಲಾಗಿತ್ತು.
ಆದರೆ, ಮೈಸೂರು ವಿಶ್ವವಿದ್ಯಾಲಯದಲ್ಲಿ ಜುಲೈ 2021ರಲ್ಲಿ ನಡೆದ ಕೆ- ಸೆಟ್ ಪರೀಕ್ಷೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಮತ್ತು ಈ ಪ್ರಕ್ರಿಯೆಗೆ ವಿವಿಯ ಕೆ- ಸೆಟ್ ಪರೀಕ್ಷೆಯ ಸಂಯೋಜಕರು ಹಾಗೂ ಇತತರು ಸಂಪೂರ್ಣ ಹೊಣೆಗಾರರೆಂದು ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಪ್ರತ್ಯೇಕ ತನಿಖೆಗೆ ಸಮಿತಿ ರಚಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶಿಸಿದೆ.
ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್…
ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್ನಿಂದ ನೋಟಿಸ್…
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…