ಜಿಲ್ಲೆಗಳು

ಮೈಸೂರು ವಿವಿಯಲ್ಲಿ K-SET ಅವ್ಯವಹಾರ ಆರೋಪ : ತನಿಖೆಗೆ ರಾಜ್ಯ ಸರ್ಕಾರ ಆದೇಶ

ಮೈಸೂರು : ಮೈಸೂರು ವಿಶ್ವವಿದ್ಯಾಲಯದ  ಕೆ- ಸೆಟ್ ಪರೀಕ್ಷೆಯಲ್ಲಿ ಅವ್ಯವಹಾರ ನಡೆದಿರುವ ಆರೋಪಕ್ಕೆ ಸಂಬಂಧಸಿದಂತೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ ನಡೆಸಿದ ಸಭೆಯ ಶಿಫಾರಸ್ಸಿನಿಂದ ರಾಜ್ಯ ಸರ್ಕಾರ ತನಿಖೆಗೆ ಆದೇಶವನ್ನು ಹೊರಡಿಸಲಾಗಿದ್ದು . ಉನ್ನತ ಶಿಕ್ಷಣ ಇಲಾಖೆ ಉಪ ಕಾರ್ಯದರ್ಶಿ ಸ್ನೇಹಲ್‌ ಸುಧಾಕರ್ ಲೋಖಂಡೆ, ಮೈವಿವಿ ಕುಲಸಚಿವೆ ಶೈಲಜಾ ಮತ್ತು ಹಣಕಾಸು ಅಧಿಕಾರಿ ಡಾ.ಸಂಗೀತಾ ಗಜಾನನ ಭಟ್‌ ಸಮಿತಿಗೆ ವರದಿ ನೀಡಲು 1 ತಿಂಗಳ ಗಡುವನ್ನು ನೀಡಲಾಗಿದೆ.
ಈ ಹಿಂದೆ ವಿಶ್ವವಿದ್ಯಾಲಯ ಧನಸಹಾಯ ಆಯೋಗವು (ಯುಜಿಸಿ) 2019ರ ಡಿಸೆಂಬರ್ 19ರಂದು ನಡೆಸಿದ್ದ ಸಭೆಯಲ್ಲಿ ಮಾನ್ಯತೆ ಸಮಿತಿಯ ಶಿಫಾರಸ್ಸುಗಳ ಆಧಾರದ ಮೇಲೆ ಕರ್ನಾಟಕ ರಾಜ್ಯದ ಪರವಾಗಿ ಮೂರು ಕೆ- ಸೆಟ್ ಪರೀಕ್ಷೆಗಳನ್ನು ನಡೆಸಲು ಮೈಸೂರು ವಿಶ್ವವಿದ್ಯಾಲಯಕ್ಕೆ ಮಾನ್ಯತೆ ನೀಡಲು ನಿರ್ಧರಿಸಿತ್ತು. 41 ವಿಷಯಗಳಲ್ಲಿ 2020 ಜನವರಿ 14ರಿಂದ ಮೂರು ವರ್ಷಗಳವರೆಗೆ ಪ್ರತಿ ವರ್ಷ ಒಂದು ಬಾರಿಗೆ ಕೆ- ಸೆಟ್ ಪರೀಕ್ಷೆಯನ್ನು ನಡೆಸಲು ಮಾನ್ಯತೆ ನೀಡಲಾಗಿತ್ತು.

ಆದರೆ, ಮೈಸೂರು ವಿಶ್ವವಿದ್ಯಾಲಯದಲ್ಲಿ ಜುಲೈ 2021ರಲ್ಲಿ ನಡೆದ ಕೆ- ಸೆಟ್ ಪರೀಕ್ಷೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಮತ್ತು ಈ ಪ್ರಕ್ರಿಯೆಗೆ ವಿವಿಯ ಕೆ- ಸೆಟ್ ಪರೀಕ್ಷೆಯ ಸಂಯೋಜಕರು ಹಾಗೂ ಇತತರು ಸಂಪೂರ್ಣ ಹೊಣೆಗಾರರೆಂದು ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಪ್ರತ್ಯೇಕ ತನಿಖೆಗೆ ಸಮಿತಿ ರಚಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶಿಸಿದೆ.

andolanait

Recent Posts

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತಷ್ಟು ಹೆಚ್ಚಾದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…

3 hours ago

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

7 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

7 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

7 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

7 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

10 hours ago