Mysore
20
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಜೈಲಿನೊಳಗೆ ಮೊಬೈಲ್ ಬಳಕೆ; ಹಾಸನ ಜಿಲ್ಲಾ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ

ಹಾಸನ: ಜೈಲಿನೊಳಗೆ ಮೊಬೈಲ್ ಬಳಕೆ ಮಾಡುತ್ತಿರುವ ಆರೋಪ ಹಿನ್ನಲೆ ಜಿಲ್ಲಾ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಎಎಸ್​ಪಿ ತಮ್ಮಯ್ಯ, ಡಿವೈಎಸ್​ಪಿ ಉದಯಭಾಸ್ಕರ್​ ನೇತೃತ್ವದಲ್ಲಿ 80ಕ್ಕೂ ಹೆಚ್ಚು ಪೊಲೀಸರು ಕಾರಾಗೃಹದ ಮೇಲೆ ದಾಳಿ ನಡೆಸಿದ್ದು, ವಿಚಾರಣಾಧೀನ ಕೈದಿಗಳ ಕೊಠಡಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಮಾದಕ ವಸ್ತುಗಳ ಸೇವಿಸುತ್ತಿರುವ ಹಾಗೂ ಮೊಬೈಲ್ ಫೋನ್​ಗಳ ಬಳಕೆ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನಲೆ ಈ ದಾಳಿ ನಡೆಸಲಾಗಿದೆ. ಈ ಹಿಂದೆ ಆರೋಪಿ‌ ಕಿರಣ್ ಎಂಬಾತ ಜೈಲಿನಲ್ಲಿ ‌ಹುಟ್ಟುಹಬ್ಬ ಆಚರಣೆ ಮಾಡಿಕೊಂಡ ಹಿನ್ನಲೆ ರಾಮನಗರ ಕಾರಾಗೃಹದ ಮೇಲೆ ಪೊಲೀಸರ ದಾಳಿ ನಡೆದಿತ್ತು. ವಿವಿಧ ಹೂವುಗಳಿಂದ ಹ್ಯಾಪಿ ಬರ್ತಡೆ ಕಿರಣ್​ ಅಣ್ಣ ಎಂದು ಬರೆಯಲಾಗಿದ್ದು, ದೊಡ್ಡದಾದ ಹಾರವನ್ನ ಹಾಕಿ ಆತನೊಂದಿಗೆ ಇತರ ಜೈದಿಗಳು ಪೋಸ್​ ಕೊಟ್ಟಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!