ಜಿಲ್ಲೆಗಳು

ಪಕ್ಕದಲ್ಲೇ ನದಿ ಇದ್ದರೂ ನಿವಾಸಿಗಳಿಗೆ ಸಿಗದ ಸಿಹಿನೀರು

ತಲಕಾಡಿನಲ್ಲಿ ಬೋರ್‌ವೆಲ್ ಮೂಲಕ ಉಪ್ಪುನೀರನ್ನೇ ಕುಡಿಯಬೇಕಾದ ಸ್ಥಿತಿ

ವರದಿ: ಟಿ.ಎ. ಸಾದಿಕ್ ಪಾಷ

ತಲಕಾಡು: ಸಮುದ್ರದ ದಡದಲ್ಲಿದ್ದರೂ ಉಪ್ಪಿಗೆ ಬರ ಎಂಬಂತೆ ತಲಕಾಡಿನ ಸುತ್ತೆಲ್ಲ ಸಿಹಿ ನೀರಿನ ಕಾವೇರಿ ಹರಿಯುತ್ತಿದ್ದರೂ ನದಿ ನೀರು ತಲಕಾಡಿನ ಸಾರ್ವಜನಿಕರಿಗೆ ಪೂರ್ಣವಾಗಿ ಲಭ್ಯವಾಗಿಲ್ಲ. ಬೋರ್‌ವೆಲ್‌ಗಳ ನೆರವಿನಿಂದ ಉಪ್ಪು ನೀರನ್ನೇ ನಿರಂತರವಾಗಿ ಬಳಸುತ್ತಿದ್ದಾರೆ.

ಆಶ್ರಯ ಬಡಾವಣೆಗಂತೂ ಉಪ್ಪು ನೀರೇ ಗತಿಯಾದಂತಹ ಪರಿಸರವಿದೆ. ಅನೇಕ ಶಾಸಕರುಗಳು ಬನ್ನೂರು ಮತ್ತು ತಿ. ನರಸೀಪುರ ಕ್ಷೇತ್ರಗಳಿಂದ ಆಯ್ಕೆಯಾದರೂ ಈ ನೀರಿನ ಸಮಸ್ಯೆ ಬಗ್ಗೆ ತಾಂತ್ರಿಕವಾಗಿಯಾವ ಜನಪ್ರತಿನಿಧಿಯೂ ಆಲೋಚನೆ ಮಾಡದ ಹಿನ್ನೆಲೆಯಲ್ಲಿ ಆಶ್ರಯ ಬಡಾವಣೆಯ ನಿವಾಸಿಗಳಿಗೆ ಇನ್ನೂ ಸಿಹಿ ನೀರಿನ ಮೋಕ್ಷಸಿಕ್ಕಿಲ್ಲ.

ಸ್ವಜಲಧಾರೆ ಎಂಬ ಯೋಜನೆಯೂ ದಶಕಗಳ ಹಿಂದೆ ಚಾಲನೆ ನೀಡಿದರೂ ಅದರ ಉದ್ದೇಶ ಮಾತ್ರ ಈಡೇರಲಿಲ್ಲ. ಪೂರ್ಣವಾಗಿ ತಲಕಾಡು ನಿವಾಸಿಗಳಿಗೆ ಕಾವೇರಿ ನೀರು ಲಭ್ಯವಾಗಿಲ್ಲ. ಸ್ವಜಲಧಾರೆ ಹೆಸರಲ್ಲಿ ಈಗಲೂ ಕಾರ‌್ಯ ನಿರ್ವಹಣೆಯಡಿ ವರ್ಷಕ್ಕೆ ೧೫ ಲಕ್ಷ ರೂ.ಗಳನ್ನು ನಿರ್ವಹಣೆಗಾಗಿ ಖಾಸಗಿ ಗುತ್ತಿಗೆದಾರನಿಗೆ ನೀಡಲಾಗುತ್ತಿದೆ. ೫ ನೀರಿನ ಟ್ಯಾಂಕ್‌ಗಳನ್ನು ಭರ್ತಿ ಮಾಡಿ ಪ್ರತಿದಿನವೂ ಬೆಳಿಗ್ಗೆ, ಸಂಜೆ ಕಾವೇರಿ ನೀರು ಸರಬರಾಜು  ಮಾಡಬೇಕಾಗಿರುವ ಗುತ್ತಿಗೆದಾರ ನೀಡುತ್ತಿರುವುದೇ ಉಪ್ಪುನೀರಾಗಿದೆ.

ಎರಡು ನೀರಿನ ಟ್ಯಾಂಕರ್‌ಗಳನ್ನು ಭರ್ತಿವಾಡಿ ಇಡೀ ತಲಕಾಡಿಗೆ ನೀರು ಸರಬರಾಜು ಮಾಡಲಾಗುತ್ತಿದೆ. ಹೀಗಾಗಿ ಸ್ವಜಲಧಾರೆ ಯೋಜನೆಯ ಅಸಲಿ ಉದ್ದೇಶ ಹಳ್ಳ ಹಿಡಿದಂತಾಗಿದೆ. ಇದಕ್ಕೆ ಸಂಬಂಧಿಸಿದ ಕುಡಿಯುವ ನೀರಿನ ಮತ್ತು ನೈರ್ಮಲ್ಯ ವಿಭಾಗದ ಇಂಜಿನಿಯರ್‌ಗಳು ಗಮನಹರಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಸ್ವಜಲಧಾರೆ ಯೋಜನೆಯೇ ದಿಕ್ಕುತಪ್ಪಿ ನಿಂತಿರುವಾಗ ಈಗ ಜಲ ಜೀವನ್ ಮಿಷನ್‌ನ ಕಾಮಗಾರಿ ಆರಂಭವಾಗಿದೆ. ಖಾಸಗಿ ಸಂಸ್ಥೆಗೆ ಸುವಾರು ೬ ಕೋಟಿ ರೂ.ಗಳ ಈ ಯೋಜನೆಗೆ ಗುತ್ತಿಗೆಗೆ ನೀಡಲಾಗಿದೆ. ಗುತ್ತಿಗೆ ಪಡೆದ ಸಂಸ್ಥೆ ಮೊದಲು ನೀರಿನ ಟ್ಯಾಂಕ್ ನಿರ್ಮಾಣ ಮಾಡದೆ ನಲ್ಲಿ ಅಳವಡಿಕೆಗಾಗಿ ಪ್ರಮುಖರಸ್ತೆ , ಬೀದಿಗಳ ಉಪರಸ್ತೆ ಅಗೆದು ಜನರ ಸಂಚಾರಕ್ಕೆ ತೊಂದರೆ ನೀಡಿದೆ.

ಈಗ ೩ ಮತ್ತು ೯ನೇ ವಾರ್ಡ್‌ಗಳಿಗೆ ಮಾತ್ರ ಕಾವೇರಿ ನೀರು ಲಭ್ಯವಾಗುತ್ತಿದೆ. ಉಳಿದ ೭ ವಾರ್ಡ್‌ಗಳಿಗೂ ಕಾವೇರಿ ನೀರು ಇನ್ನೂ ಪೂರೈಕೆಯಾಗಿಲ್ಲ. ಆಶ್ರಯ ಬಡಾವಣೆಗಂತೂ ರಸ್ತೆಯಿಲ್ಲದ ಕಾರಣ ನೀರಿನ ಭಾಗ್ಯ ಸಿಗುವ ಯಾವುದೇ ಸೂಚನೆಗಳು ಕಾಣುತ್ತಿಲ್ಲ. ಇನ್ನಾದರೂ ಅಧಿಕಾರಿಗಳು ಕಾವೇರಿ ನೀರು ಪೂರೈಕೆಯ ಲೋಪ ಸರಿಪಡಿಸಲು ಮುಂದಾಗಬೇಕಿದೆ.

ಜಿಜಿಎಂ ಯೋಜನೆಯಲ್ಲಿ ಎಲ್ಲ ವಾರ್ಡ್‌ಗಳಿಗೂ ಕಾವೇರಿ ನದಿ ನೀರು ತಲುಪಿಸುವ ಭರವಸೆ ನೀಡಿದ್ದು, ಆಶ್ರಯ ಬಡಾವಣೆಗೂ ಕಾವೇರಿ ನೀರು ತಲುಪಿಸಲು ಸಂಬಂಧಿಸಿದ ಅಧಿಕಾರಿಗೆ ಸೂಚನೆ ನೀಡಿದ್ದೇನೆ.-ಅಶ್ವಿನ್ ಕುಮಾರ್, ಶಾಸಕ

ಕಾವೇರಿ ನದಿ ನೀರು ತಲಕಾಡಿನ ಎಲ್ಲ ವಾರ್ಡ್‌ಗಳಿಗೂ ತಲುಪುತ್ತಿಲ್ಲ ಎಂಬುದು ಸತ್ಯ. ಹತ್ತಾರೂ ವರ್ಷಗಳಿಂದ ಕಾವೇರಿ ನದಿ ನೀರು ನಿರ್ವಹಣೆಗಾಗಿ ಗುತ್ತಿಗೆದಾರನಿಗೆ ಹಣ ವಿತರಿಸಲಾಗುತ್ತಿದೆ. ಆದರೆ, ಹತ್ತಾರೂ ವರ್ಷಗಳಿಂದಲೂ ಕಾವೇರಿ ನೀರು ತಲಕಾಡಿನ ಜನರಿಗೆ ಪೂರೈಕೆಯೇ ಆಗಿಲ್ಲ. ಐದು ನೀರಿನ ಟ್ಯಾಂಕ್ ಭರ್ತಿಯೂ ಆಗಿಲ್ಲ. ಈ ಬಗ್ಗೆ ಜಿಪಂ ಅಧಿಕಾರಿಗಳು ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು. -ಪ್ರಮೋದ್, ಗ್ರಾ.ಪಂ. ಸದಸ್ಯ

andolana

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

27 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

32 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

41 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago