ಜಿಲ್ಲೆಗಳು

ಪಕ್ಕದಲ್ಲೇ ನದಿ ಇದ್ದರೂ ನಿವಾಸಿಗಳಿಗೆ ಸಿಗದ ಸಿಹಿನೀರು

ತಲಕಾಡಿನಲ್ಲಿ ಬೋರ್‌ವೆಲ್ ಮೂಲಕ ಉಪ್ಪುನೀರನ್ನೇ ಕುಡಿಯಬೇಕಾದ ಸ್ಥಿತಿ

ವರದಿ: ಟಿ.ಎ. ಸಾದಿಕ್ ಪಾಷ

ತಲಕಾಡು: ಸಮುದ್ರದ ದಡದಲ್ಲಿದ್ದರೂ ಉಪ್ಪಿಗೆ ಬರ ಎಂಬಂತೆ ತಲಕಾಡಿನ ಸುತ್ತೆಲ್ಲ ಸಿಹಿ ನೀರಿನ ಕಾವೇರಿ ಹರಿಯುತ್ತಿದ್ದರೂ ನದಿ ನೀರು ತಲಕಾಡಿನ ಸಾರ್ವಜನಿಕರಿಗೆ ಪೂರ್ಣವಾಗಿ ಲಭ್ಯವಾಗಿಲ್ಲ. ಬೋರ್‌ವೆಲ್‌ಗಳ ನೆರವಿನಿಂದ ಉಪ್ಪು ನೀರನ್ನೇ ನಿರಂತರವಾಗಿ ಬಳಸುತ್ತಿದ್ದಾರೆ.

ಆಶ್ರಯ ಬಡಾವಣೆಗಂತೂ ಉಪ್ಪು ನೀರೇ ಗತಿಯಾದಂತಹ ಪರಿಸರವಿದೆ. ಅನೇಕ ಶಾಸಕರುಗಳು ಬನ್ನೂರು ಮತ್ತು ತಿ. ನರಸೀಪುರ ಕ್ಷೇತ್ರಗಳಿಂದ ಆಯ್ಕೆಯಾದರೂ ಈ ನೀರಿನ ಸಮಸ್ಯೆ ಬಗ್ಗೆ ತಾಂತ್ರಿಕವಾಗಿಯಾವ ಜನಪ್ರತಿನಿಧಿಯೂ ಆಲೋಚನೆ ಮಾಡದ ಹಿನ್ನೆಲೆಯಲ್ಲಿ ಆಶ್ರಯ ಬಡಾವಣೆಯ ನಿವಾಸಿಗಳಿಗೆ ಇನ್ನೂ ಸಿಹಿ ನೀರಿನ ಮೋಕ್ಷಸಿಕ್ಕಿಲ್ಲ.

ಸ್ವಜಲಧಾರೆ ಎಂಬ ಯೋಜನೆಯೂ ದಶಕಗಳ ಹಿಂದೆ ಚಾಲನೆ ನೀಡಿದರೂ ಅದರ ಉದ್ದೇಶ ಮಾತ್ರ ಈಡೇರಲಿಲ್ಲ. ಪೂರ್ಣವಾಗಿ ತಲಕಾಡು ನಿವಾಸಿಗಳಿಗೆ ಕಾವೇರಿ ನೀರು ಲಭ್ಯವಾಗಿಲ್ಲ. ಸ್ವಜಲಧಾರೆ ಹೆಸರಲ್ಲಿ ಈಗಲೂ ಕಾರ‌್ಯ ನಿರ್ವಹಣೆಯಡಿ ವರ್ಷಕ್ಕೆ ೧೫ ಲಕ್ಷ ರೂ.ಗಳನ್ನು ನಿರ್ವಹಣೆಗಾಗಿ ಖಾಸಗಿ ಗುತ್ತಿಗೆದಾರನಿಗೆ ನೀಡಲಾಗುತ್ತಿದೆ. ೫ ನೀರಿನ ಟ್ಯಾಂಕ್‌ಗಳನ್ನು ಭರ್ತಿ ಮಾಡಿ ಪ್ರತಿದಿನವೂ ಬೆಳಿಗ್ಗೆ, ಸಂಜೆ ಕಾವೇರಿ ನೀರು ಸರಬರಾಜು  ಮಾಡಬೇಕಾಗಿರುವ ಗುತ್ತಿಗೆದಾರ ನೀಡುತ್ತಿರುವುದೇ ಉಪ್ಪುನೀರಾಗಿದೆ.

ಎರಡು ನೀರಿನ ಟ್ಯಾಂಕರ್‌ಗಳನ್ನು ಭರ್ತಿವಾಡಿ ಇಡೀ ತಲಕಾಡಿಗೆ ನೀರು ಸರಬರಾಜು ಮಾಡಲಾಗುತ್ತಿದೆ. ಹೀಗಾಗಿ ಸ್ವಜಲಧಾರೆ ಯೋಜನೆಯ ಅಸಲಿ ಉದ್ದೇಶ ಹಳ್ಳ ಹಿಡಿದಂತಾಗಿದೆ. ಇದಕ್ಕೆ ಸಂಬಂಧಿಸಿದ ಕುಡಿಯುವ ನೀರಿನ ಮತ್ತು ನೈರ್ಮಲ್ಯ ವಿಭಾಗದ ಇಂಜಿನಿಯರ್‌ಗಳು ಗಮನಹರಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಸ್ವಜಲಧಾರೆ ಯೋಜನೆಯೇ ದಿಕ್ಕುತಪ್ಪಿ ನಿಂತಿರುವಾಗ ಈಗ ಜಲ ಜೀವನ್ ಮಿಷನ್‌ನ ಕಾಮಗಾರಿ ಆರಂಭವಾಗಿದೆ. ಖಾಸಗಿ ಸಂಸ್ಥೆಗೆ ಸುವಾರು ೬ ಕೋಟಿ ರೂ.ಗಳ ಈ ಯೋಜನೆಗೆ ಗುತ್ತಿಗೆಗೆ ನೀಡಲಾಗಿದೆ. ಗುತ್ತಿಗೆ ಪಡೆದ ಸಂಸ್ಥೆ ಮೊದಲು ನೀರಿನ ಟ್ಯಾಂಕ್ ನಿರ್ಮಾಣ ಮಾಡದೆ ನಲ್ಲಿ ಅಳವಡಿಕೆಗಾಗಿ ಪ್ರಮುಖರಸ್ತೆ , ಬೀದಿಗಳ ಉಪರಸ್ತೆ ಅಗೆದು ಜನರ ಸಂಚಾರಕ್ಕೆ ತೊಂದರೆ ನೀಡಿದೆ.

ಈಗ ೩ ಮತ್ತು ೯ನೇ ವಾರ್ಡ್‌ಗಳಿಗೆ ಮಾತ್ರ ಕಾವೇರಿ ನೀರು ಲಭ್ಯವಾಗುತ್ತಿದೆ. ಉಳಿದ ೭ ವಾರ್ಡ್‌ಗಳಿಗೂ ಕಾವೇರಿ ನೀರು ಇನ್ನೂ ಪೂರೈಕೆಯಾಗಿಲ್ಲ. ಆಶ್ರಯ ಬಡಾವಣೆಗಂತೂ ರಸ್ತೆಯಿಲ್ಲದ ಕಾರಣ ನೀರಿನ ಭಾಗ್ಯ ಸಿಗುವ ಯಾವುದೇ ಸೂಚನೆಗಳು ಕಾಣುತ್ತಿಲ್ಲ. ಇನ್ನಾದರೂ ಅಧಿಕಾರಿಗಳು ಕಾವೇರಿ ನೀರು ಪೂರೈಕೆಯ ಲೋಪ ಸರಿಪಡಿಸಲು ಮುಂದಾಗಬೇಕಿದೆ.

ಜಿಜಿಎಂ ಯೋಜನೆಯಲ್ಲಿ ಎಲ್ಲ ವಾರ್ಡ್‌ಗಳಿಗೂ ಕಾವೇರಿ ನದಿ ನೀರು ತಲುಪಿಸುವ ಭರವಸೆ ನೀಡಿದ್ದು, ಆಶ್ರಯ ಬಡಾವಣೆಗೂ ಕಾವೇರಿ ನೀರು ತಲುಪಿಸಲು ಸಂಬಂಧಿಸಿದ ಅಧಿಕಾರಿಗೆ ಸೂಚನೆ ನೀಡಿದ್ದೇನೆ.-ಅಶ್ವಿನ್ ಕುಮಾರ್, ಶಾಸಕ

ಕಾವೇರಿ ನದಿ ನೀರು ತಲಕಾಡಿನ ಎಲ್ಲ ವಾರ್ಡ್‌ಗಳಿಗೂ ತಲುಪುತ್ತಿಲ್ಲ ಎಂಬುದು ಸತ್ಯ. ಹತ್ತಾರೂ ವರ್ಷಗಳಿಂದ ಕಾವೇರಿ ನದಿ ನೀರು ನಿರ್ವಹಣೆಗಾಗಿ ಗುತ್ತಿಗೆದಾರನಿಗೆ ಹಣ ವಿತರಿಸಲಾಗುತ್ತಿದೆ. ಆದರೆ, ಹತ್ತಾರೂ ವರ್ಷಗಳಿಂದಲೂ ಕಾವೇರಿ ನೀರು ತಲಕಾಡಿನ ಜನರಿಗೆ ಪೂರೈಕೆಯೇ ಆಗಿಲ್ಲ. ಐದು ನೀರಿನ ಟ್ಯಾಂಕ್ ಭರ್ತಿಯೂ ಆಗಿಲ್ಲ. ಈ ಬಗ್ಗೆ ಜಿಪಂ ಅಧಿಕಾರಿಗಳು ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು. -ಪ್ರಮೋದ್, ಗ್ರಾ.ಪಂ. ಸದಸ್ಯ

andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

10 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

10 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

11 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

13 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

16 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

16 hours ago