ಜಿಲ್ಲೆಗಳು

ಪಕ್ಕದಲ್ಲೇ ನದಿ ಇದ್ದರೂ ನಿವಾಸಿಗಳಿಗೆ ಸಿಗದ ಸಿಹಿನೀರು

ತಲಕಾಡಿನಲ್ಲಿ ಬೋರ್‌ವೆಲ್ ಮೂಲಕ ಉಪ್ಪುನೀರನ್ನೇ ಕುಡಿಯಬೇಕಾದ ಸ್ಥಿತಿ

ವರದಿ: ಟಿ.ಎ. ಸಾದಿಕ್ ಪಾಷ

ತಲಕಾಡು: ಸಮುದ್ರದ ದಡದಲ್ಲಿದ್ದರೂ ಉಪ್ಪಿಗೆ ಬರ ಎಂಬಂತೆ ತಲಕಾಡಿನ ಸುತ್ತೆಲ್ಲ ಸಿಹಿ ನೀರಿನ ಕಾವೇರಿ ಹರಿಯುತ್ತಿದ್ದರೂ ನದಿ ನೀರು ತಲಕಾಡಿನ ಸಾರ್ವಜನಿಕರಿಗೆ ಪೂರ್ಣವಾಗಿ ಲಭ್ಯವಾಗಿಲ್ಲ. ಬೋರ್‌ವೆಲ್‌ಗಳ ನೆರವಿನಿಂದ ಉಪ್ಪು ನೀರನ್ನೇ ನಿರಂತರವಾಗಿ ಬಳಸುತ್ತಿದ್ದಾರೆ.

ಆಶ್ರಯ ಬಡಾವಣೆಗಂತೂ ಉಪ್ಪು ನೀರೇ ಗತಿಯಾದಂತಹ ಪರಿಸರವಿದೆ. ಅನೇಕ ಶಾಸಕರುಗಳು ಬನ್ನೂರು ಮತ್ತು ತಿ. ನರಸೀಪುರ ಕ್ಷೇತ್ರಗಳಿಂದ ಆಯ್ಕೆಯಾದರೂ ಈ ನೀರಿನ ಸಮಸ್ಯೆ ಬಗ್ಗೆ ತಾಂತ್ರಿಕವಾಗಿಯಾವ ಜನಪ್ರತಿನಿಧಿಯೂ ಆಲೋಚನೆ ಮಾಡದ ಹಿನ್ನೆಲೆಯಲ್ಲಿ ಆಶ್ರಯ ಬಡಾವಣೆಯ ನಿವಾಸಿಗಳಿಗೆ ಇನ್ನೂ ಸಿಹಿ ನೀರಿನ ಮೋಕ್ಷಸಿಕ್ಕಿಲ್ಲ.

ಸ್ವಜಲಧಾರೆ ಎಂಬ ಯೋಜನೆಯೂ ದಶಕಗಳ ಹಿಂದೆ ಚಾಲನೆ ನೀಡಿದರೂ ಅದರ ಉದ್ದೇಶ ಮಾತ್ರ ಈಡೇರಲಿಲ್ಲ. ಪೂರ್ಣವಾಗಿ ತಲಕಾಡು ನಿವಾಸಿಗಳಿಗೆ ಕಾವೇರಿ ನೀರು ಲಭ್ಯವಾಗಿಲ್ಲ. ಸ್ವಜಲಧಾರೆ ಹೆಸರಲ್ಲಿ ಈಗಲೂ ಕಾರ‌್ಯ ನಿರ್ವಹಣೆಯಡಿ ವರ್ಷಕ್ಕೆ ೧೫ ಲಕ್ಷ ರೂ.ಗಳನ್ನು ನಿರ್ವಹಣೆಗಾಗಿ ಖಾಸಗಿ ಗುತ್ತಿಗೆದಾರನಿಗೆ ನೀಡಲಾಗುತ್ತಿದೆ. ೫ ನೀರಿನ ಟ್ಯಾಂಕ್‌ಗಳನ್ನು ಭರ್ತಿ ಮಾಡಿ ಪ್ರತಿದಿನವೂ ಬೆಳಿಗ್ಗೆ, ಸಂಜೆ ಕಾವೇರಿ ನೀರು ಸರಬರಾಜು  ಮಾಡಬೇಕಾಗಿರುವ ಗುತ್ತಿಗೆದಾರ ನೀಡುತ್ತಿರುವುದೇ ಉಪ್ಪುನೀರಾಗಿದೆ.

ಎರಡು ನೀರಿನ ಟ್ಯಾಂಕರ್‌ಗಳನ್ನು ಭರ್ತಿವಾಡಿ ಇಡೀ ತಲಕಾಡಿಗೆ ನೀರು ಸರಬರಾಜು ಮಾಡಲಾಗುತ್ತಿದೆ. ಹೀಗಾಗಿ ಸ್ವಜಲಧಾರೆ ಯೋಜನೆಯ ಅಸಲಿ ಉದ್ದೇಶ ಹಳ್ಳ ಹಿಡಿದಂತಾಗಿದೆ. ಇದಕ್ಕೆ ಸಂಬಂಧಿಸಿದ ಕುಡಿಯುವ ನೀರಿನ ಮತ್ತು ನೈರ್ಮಲ್ಯ ವಿಭಾಗದ ಇಂಜಿನಿಯರ್‌ಗಳು ಗಮನಹರಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಸ್ವಜಲಧಾರೆ ಯೋಜನೆಯೇ ದಿಕ್ಕುತಪ್ಪಿ ನಿಂತಿರುವಾಗ ಈಗ ಜಲ ಜೀವನ್ ಮಿಷನ್‌ನ ಕಾಮಗಾರಿ ಆರಂಭವಾಗಿದೆ. ಖಾಸಗಿ ಸಂಸ್ಥೆಗೆ ಸುವಾರು ೬ ಕೋಟಿ ರೂ.ಗಳ ಈ ಯೋಜನೆಗೆ ಗುತ್ತಿಗೆಗೆ ನೀಡಲಾಗಿದೆ. ಗುತ್ತಿಗೆ ಪಡೆದ ಸಂಸ್ಥೆ ಮೊದಲು ನೀರಿನ ಟ್ಯಾಂಕ್ ನಿರ್ಮಾಣ ಮಾಡದೆ ನಲ್ಲಿ ಅಳವಡಿಕೆಗಾಗಿ ಪ್ರಮುಖರಸ್ತೆ , ಬೀದಿಗಳ ಉಪರಸ್ತೆ ಅಗೆದು ಜನರ ಸಂಚಾರಕ್ಕೆ ತೊಂದರೆ ನೀಡಿದೆ.

ಈಗ ೩ ಮತ್ತು ೯ನೇ ವಾರ್ಡ್‌ಗಳಿಗೆ ಮಾತ್ರ ಕಾವೇರಿ ನೀರು ಲಭ್ಯವಾಗುತ್ತಿದೆ. ಉಳಿದ ೭ ವಾರ್ಡ್‌ಗಳಿಗೂ ಕಾವೇರಿ ನೀರು ಇನ್ನೂ ಪೂರೈಕೆಯಾಗಿಲ್ಲ. ಆಶ್ರಯ ಬಡಾವಣೆಗಂತೂ ರಸ್ತೆಯಿಲ್ಲದ ಕಾರಣ ನೀರಿನ ಭಾಗ್ಯ ಸಿಗುವ ಯಾವುದೇ ಸೂಚನೆಗಳು ಕಾಣುತ್ತಿಲ್ಲ. ಇನ್ನಾದರೂ ಅಧಿಕಾರಿಗಳು ಕಾವೇರಿ ನೀರು ಪೂರೈಕೆಯ ಲೋಪ ಸರಿಪಡಿಸಲು ಮುಂದಾಗಬೇಕಿದೆ.

ಜಿಜಿಎಂ ಯೋಜನೆಯಲ್ಲಿ ಎಲ್ಲ ವಾರ್ಡ್‌ಗಳಿಗೂ ಕಾವೇರಿ ನದಿ ನೀರು ತಲುಪಿಸುವ ಭರವಸೆ ನೀಡಿದ್ದು, ಆಶ್ರಯ ಬಡಾವಣೆಗೂ ಕಾವೇರಿ ನೀರು ತಲುಪಿಸಲು ಸಂಬಂಧಿಸಿದ ಅಧಿಕಾರಿಗೆ ಸೂಚನೆ ನೀಡಿದ್ದೇನೆ.-ಅಶ್ವಿನ್ ಕುಮಾರ್, ಶಾಸಕ

ಕಾವೇರಿ ನದಿ ನೀರು ತಲಕಾಡಿನ ಎಲ್ಲ ವಾರ್ಡ್‌ಗಳಿಗೂ ತಲುಪುತ್ತಿಲ್ಲ ಎಂಬುದು ಸತ್ಯ. ಹತ್ತಾರೂ ವರ್ಷಗಳಿಂದ ಕಾವೇರಿ ನದಿ ನೀರು ನಿರ್ವಹಣೆಗಾಗಿ ಗುತ್ತಿಗೆದಾರನಿಗೆ ಹಣ ವಿತರಿಸಲಾಗುತ್ತಿದೆ. ಆದರೆ, ಹತ್ತಾರೂ ವರ್ಷಗಳಿಂದಲೂ ಕಾವೇರಿ ನೀರು ತಲಕಾಡಿನ ಜನರಿಗೆ ಪೂರೈಕೆಯೇ ಆಗಿಲ್ಲ. ಐದು ನೀರಿನ ಟ್ಯಾಂಕ್ ಭರ್ತಿಯೂ ಆಗಿಲ್ಲ. ಈ ಬಗ್ಗೆ ಜಿಪಂ ಅಧಿಕಾರಿಗಳು ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು. -ಪ್ರಮೋದ್, ಗ್ರಾ.ಪಂ. ಸದಸ್ಯ

andolana

Recent Posts

ಸರ್ಕಾರಿ ಶಾಲೆ ಉಳಿಸಲು1295 ಕಿ.ಮೀ. ಪಾದಯಾತ್ರೆ

ಹೇಮಂತ್‌ಕುಮಾರ್ ರೈತ ಸಂಘ-ಕೆಆರ್‌ಎಸ್ ಪಕ್ಷ, ಎಸ್‌ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…

1 hour ago

ಕಳಾಹೀನವಾಗಿದೆ ರಾಜೀವ್ ನಗರದ ಈ ಉದ್ಯಾನ!

ಎಲ್ಲೆಂದರಲ್ಲಿ ಗಿಡ ಗಂಟಿಗಳು, ಕಸದ ರಾಶಿ ಮೈಸೂರು: ಇಲ್ಲಿನ ರಾಜೀವ್ ನಗರದ ಉದ್ಯಾನ ಉದ್ದೇಶಕ್ಕೆ ಬಳಕೆಯಾಗದೆ ಪಾಳು ಬಿದ್ದಿದೆ. ಉದ್ಯಾನದ…

1 hour ago

ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಕಾಟ

ಹೆಚ್.ಎಸ್. ದಿನೇಶ್‌ಕುಮಾರ್ ಪಡಿತರ ವಿತರಣೆಯಲ್ಲಿ ರಾಜ್ಯದಲ್ಲೇ ೩ನೇ ಸ್ಥಾನದಲ್ಲಿರುವ ಮೈಸೂರಿನಲ್ಲೂ ಸಮಸ್ಯೆ ಮೈಸೂರು: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕ…

2 hours ago

ಕೊಡಗು ಜಿಲ್ಲೆಯಲ್ಲಿ ಪಡಿತರ ವಿತರಣೆಗೆ ಹತ್ತಾರು ಸಮಸ್ಯೆ

ನವೀನ್ ಡಿಸೋಜ ನಿಗದಿತ ದಿನದಲ್ಲಿ ಪಡಿತರ ದೊರೆಯದೆ ಫಲಾನುಭವಿಗಳ ಪರದಾಟ; ಬೇಕಿದೆ ಶಾಶ್ವತ ಪರಿಹಾರ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪಡಿತರ…

2 hours ago

3 ದಿನಗಳಲ್ಲಿ ಎಲ್ಲರ ಬಯೋಮೆಟ್ರಿಕ್ ಆಗುತ್ತಾ.?

ಚಾಮರಾಜನಗರ ಜಿಲ್ಲೆಯಲ್ಲಿ ಸರ್ವರ್ ಸಮಸ್ಯೆ  ಚಾಮರಾಜನಗರ: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ (ಪಿಡಿಎಸ್) ನ್ಯಾಯಬೆಲೆ ಅಂಗಡಿ, ಸೊಸೈಟಿಗಳ ಮೂಲಕ ಬಿಪಿಎಲ್ ಮತ್ತು…

2 hours ago

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

9 hours ago