ಎಚ್.ಡಿ.ಕೋಟೆ: ನಾನು ಈಗ ಸಂಪೂರ್ಣವಾಗಿ ಗುಣಮುಖನಾಗಿದ್ದು, ಇಂದಿನಿಂದ ಕ್ಷೇತ್ರದಲ್ಲಿ ಜನಸಾಮಾನ್ಯರ ಕೆಲಸಗಳಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತೇನೆ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದ್ದಾರೆ.
ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಕಳೆದ ೧೫ ದಿನಗಳ ಹಿಂದೆ ನಾನು ಕಂದಾಯ ಸಚಿವ ಆರ್.ಅಶೋಕ್ ಅವರೊಂದಿಗೆ ನಡೆಸಿದ ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಬೆನ್ನು ಮೂಳೆ ಮತ್ತು ನರದ ಸಮಸ್ಯೆ ಎದುರಾಗಿ ತೀವ್ರ ನೋವು ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದು ಈಗ ಗುಣಮುಖನಾಗಿದ್ದೇನೆ ಎಂದರು.
ಸೋಮವಾರದಿಂದ ಕ್ಷೇತ್ರದ ಎಚ್.ಮಟಕೆರೆ ಮತ್ತು ಕಣಿಯನಹುಂಡಿ ಹಾಗೂ ಕೋಟೆಯಲ್ಲಿ ವಿವಿಧ ಅಭಿವೃದ್ಧಿ ಕೆಲಸಗಳ ಉದ್ಘಾಟನೆ, ರೈತರ ಮನೆ ಮನೆಗಳಿಗೆ ಸಾಗುವಳಿ ಪತ್ರ ವಿತರಣೆ ಹಾಗೂ ಅಧಿಕಾರಿಗಳ ಸಭೆ ಇನ್ನಿತರ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದೇನೆ ಎಂದು ತಿಳಿಸಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…