ಜಿಲ್ಲೆಗಳು

ಅಂಬಳೆಯಲ್ಲಿ ವಿಜೃಂಭಣೆಯ ಚಾಮುಂಡೇಶ್ವರಿ ಜಾತ್ರೆ

ಯಳಂದೂರು: ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ಶ್ರೀಚಾಮುಂಡೇಶ್ವರಿ ಅಮ್ಮ ನವರ ದೊಡ್ಡ ಹಬ್ಬ ಹಾಗೂ ಜಾತ್ರೆ ವಿಜೃಂಭಣೆಯಿಂದ ನಡೆಯಿತು.

ಒಂದು ತಿಂಗಳ ಕಾಲ ನಡೆಯುವ ಈ ಉತ್ಸವದ ಪ್ರಮುಖ ಭಾಗವಾದ ರಕ್ತ ಬೀಜಾಸುರ ಸಂಹಾರ ಪ್ರಕ್ರಿಯೆ ನಡೆ ಯಿತು.ಮುಂಜಾನೆಯಿಂದಲೇ ಗ್ರಾಮದ ಹೃದಯ ಭಾಗದಲ್ಲಿರುವ ಚಾಮುಂ ಡೇಶ್ವರಿ ಅಮ್ಮನವರ ಕೇಲು ಮನೆಯಲ್ಲಿ ವಿಶೇಷ ಪೂಜೆ ನಡೆಯಿತು.ಅಲ್ಲಿಂದ ಶ್ರೀಚಾಮುಂಡೇಶ್ವರಿ ಉತ್ಸವ ಮೂರ್ತಿ ಯನ್ನು ಹುಲಿವಾಹನದಲ್ಲಿ ಕೂರಿಸಿ ಗ್ರಾಮದ ಸುವರ್ಣವತಿ ನದಿಯಲ್ಲಿ ಹೊಸ ನೀರು ತರಲಾಯಿತು. ಬಳಿಕ ಸತ್ತಿಗೆ-ಸೂರಿಪಾನಿ ಮಂಗಳ ವಾದ್ಯಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.

ಬಾಳೆಗೊನೆ ಕತ್ತರಿಸುವ ವಿಧಿ: ಮಹಿಷಾ ಸುರನ ಸಹೋದರ ರಕ್ತ ಬೀಜಾಸುರ ನನ್ನು ಚಾಮುಂಡೇಶ್ವರಿ ಸಪ್ತಮಾತೃಕೆಯರ ನೆರವಿನೊಂದಿಗೆ ಅಂಬಳೆ ಗ್ರಾಮದಲ್ಲಿ ಬಂದು ಕೊಂದಳು ಎಂಬ ನಂಬಿಕೆ ಇದೆ. ಇದರ ದ್ಯೋತಕವಾಗಿ ಇಲ್ಲಿ ಹಬ್ಬ ಆಚರಿಸುವ ವಾಡಿಕೆ ಇದೆ. ಅನಾದಿ ಕಾಲದಿಂದಲೂ ಈ ಪದ್ಧತಿ ರೂಢಿಯ ಲ್ಲಿದೆ. ಅದರಂತೆ ಚಾಮುಂಡೇ ಶ್ವರಿ ಮತ್ತು ರಕ್ತಬೀಜಾ ಸುರರ ವೇಷಧಾರಿಗಳು ರಂಗಸ್ಥಳದಲ್ಲಿ ಮೂರು ಬಾರಿ ಸುತ್ತಿದ ಬಳಿಕ ಕತ್ತಿ ಯಿಂದ ಬಾಳೆಗೊನೆ ಯನ್ನು ಒಂದೇ ಏಟಿಗೆ ಕತ್ತರಿಸುವ ಸಂಪ್ರದಾಯ ನೆರವೇರಿತು.
ವಿವಿಧ ಆರೋಗ್ಯ ಸಮಸ್ಯೆಗಳ ನಿವಾರಣೆಗಾಗಿ, ಇಷ್ಟಾರ್ಥ ಸಿದ್ಧಿಗಾಗಿ ಹರಕೆ ಹೊತ್ತವರು ಶೂಲದಯ್ಯ ದೇವರಿಗೆ ತಲೆ ಮೇಲೆ ಎಳನೀರು ಹೊತ್ತು ಹರಕೆ ತೀರಿಸಿದರು. ಈ ದೊಡ್ಡ ಹಬ್ಬ ಜಾತ್ರೆಗೆ ವಿವಿಧ ಗ್ರಾಮಗಳ ಭಕ್ತರು ಬಂದು ದರ್ಶನ ಪಡೆದರು.

andolanait

Recent Posts

ಸಾವಿರಾರು ಸೈನಿಕರ ಜೀವನ್ಮರಣದ ಪ್ರಶ್ನೆಯಾಗಿತ್ತು

ಕೈಲಾಶ್ ಶ್ರೇಣಿಯ ರೇಚಿನ್ ಲಾ ಪಾಸ್‌ನತ್ತ ಮುನ್ನುಗ್ಗುತ್ತಿರುವ ಚೀನಾದ ಟ್ಯಾಂಕ್‌ಗಳನ್ನು ತಡೆಯಲು ಒಂದೇ ಒಂದು ಗುಂಡು ಹಾರಿಸಿದರೂ ಆ ದೇಶದೊಂದಿಗೆ…

1 hour ago

ಸಹಸ್ರಾರು ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ಅಮಾನ್ಯ

ಬೋಗಸ್ ಕಾರ್ಡ್ ಹೆಸರಿನಲ್ಲಿ ಕ್ರಮ; ನೈಜ ಕಾರ್ಮಿಕರಿಗೆ ಸಮಸ್ಯೆ ಕೃಷ್ಣ ಸಿದ್ದಾಪುರ ಸಿದ್ದಾಪುರ: ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ…

1 hour ago

ದೇವರಗುಡ್ಡನಾಗಬೇಕಿದ್ದ ದುಂಡು ಮಾದೇವಸ್ವಾಮಿ ಚಿತ್ರಗಾರನಾದ ವೃತ್ತಾಂತ

ಸ್ವಾಮಿ ಪೊನ್ನಾಚಿ ದಿನಬೆಳಗಾದರೆ ಮಾದಪ್ಪ, ಮಂಟೇಸ್ವಾಮಿಯ ಹಾಡು ಹಾಡಿಕೊಂಡು ಬರುವ ಜನಪದರ ದಂಡು. ಸುತ್ತಮುತ್ತ ದೇವರಗುಡ್ಡ ನೀಲಗಾರರ ಹಿಂಡು. ಊರೂರಿ…

2 hours ago

ಅಪ್ಪಾಜಿಯ ವಾತ್ಸಲ್ಯದ ಛಡಿಯೇಟಿನ ‘ಪಾಠ’ಗಳು ನೆನಪಾಗುತ್ತಿವೆ…

ರವಿ ಕೋಟಿ ಬಾಲ್ಯದಲ್ಲಿ ನಾನು ಕಂಟ್ರೋಲಿಗೆ ಬರದಷ್ಟು ತುಂಟನಾಗಿದ್ದೆ. ಯಾರೂ ನನ್ನನ್ನು ಕಂಟ್ರೋಲ್ ಮಾಡಲಾಗುತ್ತಿರಲಿಲ್ಲ. ಯಾಕೆಂದರೆ ನಾನೇ ನನ್ನ ಕಂಟ್ರೋಲಿನಲ್ಲಿ…

2 hours ago

ಹೀಗಾದರೂ ಆದರೆ ಭ್ರಮೆಗಳು ಕರಗಿ ಆಧ್ಯಾತ್ಮಿಕ ವಿನಯದ ಪರಿಚಯವಾಗಬಹುದೇನೋ…

ಸುಕನ್ಯಾ ಕನಾರಳ್ಳಿ ಒಂದು ಮಠ. ಅಲ್ಲಿ ಮರಿಸ್ವಾಮಿಯಾಗಿದ್ದವರು ಪೀಠಾಧಿಪತಿ ತೀರಿಕೊಂಡ ಮೇಲೆ ಏನೇನೋ ಕಾರಣಗಳ ದೆಸೆಯಿಂದ ಪೀಠವನ್ನು ಏರಲು ಆಗದೆ…

2 hours ago

ಅಳಿಯುತ್ತಿರುವ ಸೋಬಾನೆ ಹಾಡುಗಳ ಕಲಿಸುತ್ತಿರುವ ಕಲೆಗಾರ

ಡಾ.ಮೈಸೂರು ಉಮೇಶ್ ಸೋಬಾನೆ ಪದಗಳು ಗ್ರಾಮೀಣ ಮಹಿಳೆಯರಿಗೆ ಒಲಿದು ಬಂದಿರುವ ಜನಪದ ಗಾಯನ ಪ್ರಕಾರ. ಇದಕ್ಕೆ ಅಪವಾದವೆಂಬಂತೆ ಮಂಡ್ಯ ಜಿಲ್ಲೆಯ…

2 hours ago