ಯಳಂದೂರು: ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ಶ್ರೀಚಾಮುಂಡೇಶ್ವರಿ ಅಮ್ಮ ನವರ ದೊಡ್ಡ ಹಬ್ಬ ಹಾಗೂ ಜಾತ್ರೆ ವಿಜೃಂಭಣೆಯಿಂದ ನಡೆಯಿತು.
ಒಂದು ತಿಂಗಳ ಕಾಲ ನಡೆಯುವ ಈ ಉತ್ಸವದ ಪ್ರಮುಖ ಭಾಗವಾದ ರಕ್ತ ಬೀಜಾಸುರ ಸಂಹಾರ ಪ್ರಕ್ರಿಯೆ ನಡೆ ಯಿತು.ಮುಂಜಾನೆಯಿಂದಲೇ ಗ್ರಾಮದ ಹೃದಯ ಭಾಗದಲ್ಲಿರುವ ಚಾಮುಂ ಡೇಶ್ವರಿ ಅಮ್ಮನವರ ಕೇಲು ಮನೆಯಲ್ಲಿ ವಿಶೇಷ ಪೂಜೆ ನಡೆಯಿತು.ಅಲ್ಲಿಂದ ಶ್ರೀಚಾಮುಂಡೇಶ್ವರಿ ಉತ್ಸವ ಮೂರ್ತಿ ಯನ್ನು ಹುಲಿವಾಹನದಲ್ಲಿ ಕೂರಿಸಿ ಗ್ರಾಮದ ಸುವರ್ಣವತಿ ನದಿಯಲ್ಲಿ ಹೊಸ ನೀರು ತರಲಾಯಿತು. ಬಳಿಕ ಸತ್ತಿಗೆ-ಸೂರಿಪಾನಿ ಮಂಗಳ ವಾದ್ಯಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.
ಬಾಳೆಗೊನೆ ಕತ್ತರಿಸುವ ವಿಧಿ: ಮಹಿಷಾ ಸುರನ ಸಹೋದರ ರಕ್ತ ಬೀಜಾಸುರ ನನ್ನು ಚಾಮುಂಡೇಶ್ವರಿ ಸಪ್ತಮಾತೃಕೆಯರ ನೆರವಿನೊಂದಿಗೆ ಅಂಬಳೆ ಗ್ರಾಮದಲ್ಲಿ ಬಂದು ಕೊಂದಳು ಎಂಬ ನಂಬಿಕೆ ಇದೆ. ಇದರ ದ್ಯೋತಕವಾಗಿ ಇಲ್ಲಿ ಹಬ್ಬ ಆಚರಿಸುವ ವಾಡಿಕೆ ಇದೆ. ಅನಾದಿ ಕಾಲದಿಂದಲೂ ಈ ಪದ್ಧತಿ ರೂಢಿಯ ಲ್ಲಿದೆ. ಅದರಂತೆ ಚಾಮುಂಡೇ ಶ್ವರಿ ಮತ್ತು ರಕ್ತಬೀಜಾ ಸುರರ ವೇಷಧಾರಿಗಳು ರಂಗಸ್ಥಳದಲ್ಲಿ ಮೂರು ಬಾರಿ ಸುತ್ತಿದ ಬಳಿಕ ಕತ್ತಿ ಯಿಂದ ಬಾಳೆಗೊನೆ ಯನ್ನು ಒಂದೇ ಏಟಿಗೆ ಕತ್ತರಿಸುವ ಸಂಪ್ರದಾಯ ನೆರವೇರಿತು.
ವಿವಿಧ ಆರೋಗ್ಯ ಸಮಸ್ಯೆಗಳ ನಿವಾರಣೆಗಾಗಿ, ಇಷ್ಟಾರ್ಥ ಸಿದ್ಧಿಗಾಗಿ ಹರಕೆ ಹೊತ್ತವರು ಶೂಲದಯ್ಯ ದೇವರಿಗೆ ತಲೆ ಮೇಲೆ ಎಳನೀರು ಹೊತ್ತು ಹರಕೆ ತೀರಿಸಿದರು. ಈ ದೊಡ್ಡ ಹಬ್ಬ ಜಾತ್ರೆಗೆ ವಿವಿಧ ಗ್ರಾಮಗಳ ಭಕ್ತರು ಬಂದು ದರ್ಶನ ಪಡೆದರು.
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…
ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…