ಜಿಲ್ಲೆಗಳು

ಅಂಬೇಡ್ಕರ್ ದೃಷ್ಟಿಕೋನದಲ್ಲಿ ಸಾವರ್ಕರ್ ನೋಡಿ : ಎನ್.ಮಹೇಶ್

ಚಾಮರಾಜನಗರ : ಅಂಬೇಡ್ಕರ್ ವಾದಿ ದೃಷ್ಟಿಕೋನದಲ್ಲಿ ಸಾವರ್ಕರ್ ನೋಡಲು ಶುರುಮಾಡಿದ್ದೇನೆ ಎಂದು ಮಾಜಿ ಸಚಿವ ಹಾಗೂ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು ತಿಳಿಸಿದರು.

ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಸಾವರ್ಕರ್ ಪ್ರತಿಷ್ಠಾನದ ವತಿಯಿಂದ ನಡೆದ ಸಾವರ್ಕರ್ ರಥಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಸಾವರ್ಕರ್ ರಥಯಾತ್ರೆಯ ಮೂಲ ಉದ್ದೇಶವೆಂದರೆ ಅವರ ಜೀವನ, ಸಾಧನೆ ಮತ್ತು ಹೋರಾಟವನ್ನು ಜನಮಾನಸಕ್ಕೆ ತಿಳಿಸುವುದೇ ಆಗಿದೆ. ಈ ದೇಶದಲ್ಲಿ ಸಮಾನತೆಗಾಗಿ ಸಾಕಷ್ಟು ಜನ ಹೋರಾಟ ಮಾಡಿದ್ದಾರೆ. ಆ ನಿಟ್ಟಿನಲ್ಲಿ ಸಾಗಿದ ಸಾವರ್ಕರ್ ಅವರ ನೈಜ ಜೀವನವನ್ನು ಪರಿಚಯಿಸುವ ಕೆಲಸವನ್ನು ಮಾಡುತ್ತಿದ್ದೇವೆ.

ನನ್ನ ನಿಲುವನ್ನು ಸ್ಪಷ್ಟಪಡಿಸುತ್ತೇನೆ ನಾನು ಅಂಬೇಡ್ಕರ್ ವಾದಿಯಾಗಿದ್ದು ಆ ದೃಷ್ಟಿಕೋನದಲ್ಲಿ ಸಾವರ್ಕರ್ ನೋಡಲು ಶುರುಮಾಡಿದ್ದೇನೆ. ೮೨ ವರ್ಷ ಬದುಕಿದ್ದ ಸಾವರ್ಕರ್ ಅವರು ೫೦ ವರ್ಷಗಳ ಶಿಕ್ಷೆ ಅನುಭವಿಸುತ್ತಿದ್ದರು. ಬ್ರಿಟೀಷರಿಗೆ ಅತ್ಯಂತ ಅಪಾಯಕಾರಿ ವ್ಯಕ್ತಿಯಾಗಿದ್ದ ಕಾರಣಕ್ಕೆ ಅವರಿಗೆ ಅಷ್ಟೊಂದು ಶಿಕ್ಷೆ ವಿಧಿಸಲಾಯಿತು ಎಂದು ತಿಳಿಸಿದರು.

ಅಂಬೇಡ್ಕರ್ ಅವರ ಹೋರಾಟದ ಘಟನೆಗಳು ಸಾವರ್ಕರ್ ಅವರಲ್ಲಿ ದೊಡ್ಡ ಪರಿವರ್ತನೆ ತಂದಿತು ಎಂಬುದು ನನ್ನ ಗ್ರಹಿಕೆಯಾಗಿದೆ. ವೇದೋಕ್ತ ನಿಷೇಧ, ಉದ್ಯೋಗ ನಿಷೇಧ, ಅಸ್ಪೃಶ್ಯತೆ, ಸಮುದ್ರ ಪರ್ಯಟನೆ ನಿಷೇಧ, ಶುದ್ಧಿ ನಿಷೇಧ, ಸಹಭೋಜನ ನಿಷೇಧ, ಅಂತರ್ಜಾತಿ ಮದುವೆ ನಿಷೇಧ ಎಂಬ ೭ ಸಂಕೋಲೆಗಳ ವಿರುದ್ಧ ಸಾವರ್ಕರ್ ಹೋರಾಟ ನಡೆಸಿದರು. ಇದರಿಂದ ನಾನು ಮುಕ್ತಿ ಹೊಂದದ ಹೊರತು ನಮಗೆ ಸ್ವಾತಂತ್ರ್ಯ ದಕ್ಕಿದರೂ ಪ್ರಯೋಜನವಿಲ್ಲ ಎಂದಿದ್ದರು. ಇದೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೋರಾಟದ ನಿಲುವು ಕೂಡ ಆಗಿತ್ತು, ಈ ೭ ಸಂಕೋಲೆಗಳಿಂದ ನಾವು ಬಿಡುಗಡೆಯಾಗಬೇಕಿದೆ ಹಿಂದೂ ಸಮಾಜವನ್ನು ಮತ್ತಷ್ಟು ಗಟ್ಟಿಗೊಳಿಸಬೇಕಿದೆ ಎಂದು ತಿಳಿಸಿದರು.

ಇದೆಲ್ಲವನ್ನೂ ಓರ್ವ ಅಂಬೇಡ್ಕರ್ ವಾದಿಯಾಗಿಯೇ ಹೇಳುತ್ತಿದ್ದೇನೆ, ಪ್ರತಿಯೊಂದು ಹೋರಾಟದ ಮಾರ್ಗದಲ್ಲೂ ಧನಾತ್ಮಕ ಹಾಗೂ ಋಣಾತ್ಮಕ ಚಿಂತನೆಗಳು ಇದೆ. ನಾನು ಧನಾತ್ಮಕ ಚಿಂತನೆಗಳನ್ನೇ ಮಾತನಾಡಲು ಶುರು ಮಾಡಿದ್ದೇನೆ. ಈ ನಿಟ್ಟಿನಲ್ಲಿ ನೋಡಿದ್ದೆ ಆದರೆ ಮೊದ ಮೊದಲು ಕ್ರಾಂತಿಕಾರಿಯಾಗಿದ್ದ ಸಾವರ್ಕರ್ ಬರಬರುತ್ತಾ ಸಮಾಜ ಸುಧಾರಕರಾದರು ಎಂದು ತಿಳಿಸಿದರು.

andolanait

Recent Posts

ಓದುಗರ ಪತ್ರ: ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸಿ

ಮೈಸೂರಿನ ಬಹುತೇಕ ಭಾಗಗಳಲ್ಲಿ ಪಾದಚಾರಿ ಮಾರ್ಗಗಳನ್ನು ಅಂಗಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದಾಗಿ ಸಾರ್ವಜನಿಕರು ರಸ್ತೆಯ ಮೇಲೆ ಸಂಚರಿಸುವುದು ಅನಿವಾರ್ಯವಾಗಿದೆ. ನಗರದ…

28 mins ago

ಓದುಗರ ಪತ್ರ: ಸೈಬರ್ ವಂಚನೆ ಪ್ರಕರಣ ತಡೆಗೆ ಜಾಗೃತಿ ಮೂಡಿಸುವುದು ಅಗತ್ಯ

ರಾಜ್ಯದಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ೫೭,೭೩೩ ಸೈಬರ್ ಪ್ರಕರಣಗಳು ದಾಖಲಾಗಿದ್ದು, ೫,೪೭೫ ಕೋಟಿ ರೂ. ವಂಚನೆ ನಡೆದಿರುವುದಾಗಿ, ಬೆಳಗಾವಿ…

38 mins ago

ಬಾ.ನಾ.ಸುಬ್ರಹ್ಮಣ್ಯ ವಾರದ ಅಂಕಣ:  ಕೆಳಗಿನ ಕೋರ್ಟಿನಲ್ಲಿ ನಟ ದಿಲೀಪ್ ಆರೋಪ ಮುಕ್ತ;  ಅವಳೊಂದಿಗೆ v/s ದಿಲೀಪ್ ಪರ

ಜನಪ್ರಿಯ ನಟರು ಜೈಲಲ್ಲಿದ್ದರೆ, ಜಾಮೀನಿನಿಂದ ಹೊರಬಂದರೆ ಅಂತಹ ಪ್ರಕರಣದ ತೀರ್ಪಿನ ಬಗ್ಗೆ ಜನರ ಕುತೂಹಲ ಹೆಚ್ಚು. ಮಲಯಾಳ ಚಿತ್ರರಂಗದ ಹೆಸರಾಂತ…

1 hour ago

ರೈತರು ಬೆಳೆದ ಕಾಫಿ, ಅಡಿಕೆ, ಮೆಣಸು ಕಳ್ಳರ ಪಾಲು

ರಾತ್ರೋರಾತ್ರಿ ಬೆಳೆ ಕಳವು ಗಸ್ತು ಹೆಚ್ಚಳ ಸೇರಿದಂತೆ ಸೂಕ್ತ ಕ್ರಮಕ್ಕೆ ಬೆಳೆಗಾರರ ಒತ್ತಾಯ ಸಿದ್ದಾಪುರ: ವನ್ಯಜೀವಿಗಳ ಉಪಟಳ, ಹವಾಮಾನ ವೈಪರೀತ್ಯ,…

2 hours ago

ಸರಗೂರು ಸಾರಿಗೆ ಬಸ್‌ ನಿಲ್ದಾಣದಲ್ಲಿ ಅವ್ಯವಸ್ಥೆ

ದಾಸೇಗೌಡ  ಓವರ್‌ಹೆಡ್ ಟ್ಯಾಂಕ್‌ಗಳ ನಡುವೆ ತಪ್ಪಾದ ಸಂಪರ್ಕ; ಪೋಲಾಗುತ್ತಿರುವ ನೀರು; ಸಾರ್ವಜನಿಕರ ಆಕ್ರೋ ಸರಗೂರು : ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್…

4 hours ago

19 ಬೇಚರಾಕ್ ಹಳ್ಳಿಗಳು ಇನ್ಮುಂದೆ ಕಂದಾಯ ಗ್ರಾಮಗಳು

ಹುಣಸೂರು ತಾಲ್ಲೂಕಿನ ಜನರ ನಾಲ್ಕು ದಶಕಗಳ ಕನಸು ನನಸು; ಗ್ರಾಮಸ್ಥರು ಫುಲ್ ಖು ಹುಣಸೂರು: ತಾಲ್ಲೂಕಿನ ೧೯ ಬೇಚರಾಕ್ ಗ್ರಾಮಗಳನ್ನು…

4 hours ago